ಭದ್ರಾ ಡ್ಯಾಂನಲ್ಲಿ ಸೌಕರ್ಯ ಕೊರತೆ!


Team Udayavani, Aug 6, 2018, 4:49 PM IST

shiv-1.jpg

ಶಿವಮೊಗ್ಗ: ಪ್ರವಾಸಿಗರಿಂದ ತುಂಬಿ ತುಳುಕುತ್ತಿರುವ ಭದ್ರಾ ಜಲಾಶಯ ಭದ್ರತೆ, ಸೌಕರ್ಯಗಳಿಲ್ಲದೆ ನರಕ ದರ್ಶನ ಮಾಡಿಸುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ರಾಜಕಾರಣಿಗಳು ಮತ್ತು ವಿಐಪಿಗಳಿಗಷ್ಟೇ ಭದ್ರತೆ ಎನ್ನುವಂತಾಗಿದ್ದು ಬಾಗಿನ ಬಿಡಲು ಬರುವ ಕಾರುಗಳನ್ನು ಕಾಯುವುದಷ್ಟೇ ಪೊಲೀಸರ ಕೆಲಸವಾಗಿದೆ.

ದಾವಣಗೆರೆ ಜಿಲ್ಲೆ, ತರೀಕೆರೆ, ಭದ್ರಾವತಿಯಿಂದ ನಿತ್ಯ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ. ಭಾನುವಾರವಂತೂ ಕಿಕ್ಕಿರಿದು ಜನ ಸೇರಿರುತ್ತಾರೆ. ಗೇಟ್‌ ನಿಂದ ನೀರು ಹೊರಬಿಟ್ಟಿರುವುದರಿಂದ ಫೋಟೋ, ಸೆಲ್ಫಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಡ್ಯಾಂ ಒಳಗೆ ಸುಂದರ ಪ್ರಕೃತಿ ಇರುವುದರಿಂದ ನೀರಿಗಿಳಿದು ಸೆಲ್ಫಿ
ತೆಗೆದುಕೊಳ್ಳುತ್ತಿದ್ದಾರೆ. ಕೆಲ ಹುಡುಗರು ಅಪಾಯಕಾರಿ ಜಾಗಗಳಲ್ಲಿ ನಿಂತು ಫೋಟೋ ತೆಗೆದುಕೊಳ್ಳುತ್ತಿದ್ದು ಅವರಿಗೆ
ಕಡಿವಾಣ ಹಾಕುವವರು ಯಾರೂ ಇಲ್ಲದಂತಾಗಿದೆ. ಕೆಲ ಕಡೆ ಕಲ್ಲುಬಂಡೆಗಳು ಪಾಚಿಗಟ್ಟಿದ್ದು ಜಾರಿ ಬೀಳುವ ಆತಂಕ ಕೂಡ ಇದೆ. ಶನಿವಾರ ಇದೇ ರೀತಿ ಸಾಹಸ ಮಾಡಲು ಹೋದ ವ್ಯಕ್ತಿಯೊಬ್ಬ ಕಾಲುಜಾರಿ ಬಿದ್ದು ಕೈ ಮುರಿದುಕೊಂಡ ಘಟನೆ ನಡೆದಿದೆ.

ಬೇಲಿ ಇಲ್ಲ: ಜಲಾಶಯದ ಬಲಭಾಗದಿಂದ ಗೇಟ್‌ನಿಂದ ನೀರು ಹೊರಬಿಟ್ಟಿರುವುದರನ್ನು ನೋಡಲು ಪ್ರಶಸ್ತವಾದ ಸ್ಥಳವಾಗಿದೆ. ಆದರೇ ಈ ಭಾಗದಲ್ಲ ಬೇಲಿ ಇಲ್ಲ. ಈ ಭಾಗದಲ್ಲಿ ಜನರು 40 ಅಡಿಗೂ ಹೆಚ್ಚು ಎತ್ತವಿರುವ ಕಟ್ಟೆ ಪಕ್ಕದಲ್ಲೇ ನಿಂತು ಫೋಟೋ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ಎಲ್ಲರಿಗಿಂತ ಉತ್ತಮ ಫೋಟೋ ಬರಲಿ ಎಂಬ ಉದ್ದೇಶದಿಂದ ರಿಸ್ಕ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಜಲಾಶಯದ ಎಡಭಾಗದಲ್ಲೂ ಅಲ್ಪ ಸ್ವಲ್ಪ ಬೇಲಿ ಇರುವುದು ಬಿಟ್ಟರೆ ಅಲ್ಲೂ ಭದ್ರತೆ ಇಲ್ಲ.

ಟಾಯ್ಲೆಟ್‌ ಇಲ್ಲ: ಜಲಾಶಯದ ಒಳಗೆ ಊಟ, ತಿಂಡಿ, ತಿನಿಸುಗಳನ್ನು ಕಟ್ಟಿಕೊಂಡು ಸಂಸಾರ ಸಮೇತ ಬರುವವರಿಗೇನೂ ಕಡಿಮೆ ಇಲ್ಲ. 4 ವರ್ಷ ನಂತರ ಡ್ಯಾಂ ಭರ್ತಿಯಾಗಿರುವುದರಿಂದ ನಿರೀಕ್ಷೆಗಿಂತಲೂ ಹೆಚ್ಚಿನ ಬರುತ್ತಿದ್ದಾರೆ. ಇಷ್ಟೆಲ್ಲಾ ಜನಕ್ಕೆ ಒಂದೇ ಒಂದು ಶೌಚಾಲಯ ಇಲ್ಲ. ಡ್ಯಾಂ ಒಳಭಾಗ ಹಾಗೂ ಹೊರಭಾಗದಲ್ಲೂ ಇಲ್ಲ.
ಐಬಿ ಕಟ್ಟಡ ವಿಐಪಿಗಳಿಗೆ ಮಾತ್ರ ಸೀಮಿತವಾಗಿದೆ.

ಇದರಿಂದ ಜನ ಬಯಲನ್ನೇ ಆಶ್ರಯಿಸಿದ್ದಾರೆ. ಜಲಬಾಧೆ ತಡೆಯದೇ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ
ಮಾಡುವ ದೃಶ್ಯಗಳು ಸಾಮಾನ್ಯವಾಗಿದೆ. ಇನ್ನು ಬೇಲಿ ಮರೆ ಹೋಗಲೂ ಅವಕಾಶವಿಲ್ಲದಂತಾಗಿದೆ.

ಲೋಕಸಭೆ ಚುನಾವಣೆ ಹಾಗೂ ಬಾಗಿನ ಪ್ರಕೃತಿ ಕೃಪೆಯಿಂದ ಭರ್ತಿಯಾಗಿರುವ ಜಲಾಶಯಕ್ಕೆ ಬಾಗಿನ ಅರ್ಪಿಸುವ ರಾಜಕೀಯ ಜೋರಾಗಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮುಖಂಡರು ಪ್ರತ್ಯೇಕವಾಗಿ ಆಗಮಿಸಿ ಬಾಗಿನ ಅರ್ಪಿಸುವ ಜತೆಗೆ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ. ಜಲಾಶಯ ತೋರಿಸುವ ನೆಪದಲ್ಲಿ ಬಸ್‌ ವ್ಯವಸ್ಥೆ ಮಾಡಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿಸಿ ಅವರಿಗೆ ಊಟ ಹಾಕಿಸುವ ಮೂಲಕ ಮತ ಹಾಕುವಂತೆ ಪ್ರೇರೇಪಿಸಲಾಗುತ್ತಿದೆ. ಮೊದಲು ದಾವಣಗೆರೆ ಕಾಂಗ್ರೆಸ್‌ ಶಾಸಕರು, ನಂತರ ಬಿಜೆಪಿ ಶಾಸಕರು ಸಂಸದರು ಆಗಮಿಸಿ ಬಾಗಿನ ಬಿಟ್ಟು ಕಾರ್ಯಕ್ರಮ ನಡೆಸಿ ಲೋಕಸಭೆ ಚುನಾವಣೆಗೆ ರಣಕಹಳೆ ಊದಿದರು

ಗೇಟ್‌ನಿಂದ ನೀರು ಬಿಟ್ಟಿರುವುದರಿಂದ ಫೋಟೋ ತೆಗೆದುಕೊಳ್ಳಲು ತುಂಬಾ ಜನ ಬರುತ್ತಾರೆ. ಆದರೆ ಇಲ್ಲಿ ಯಾಮಾರಿದರೆ ಕೆಳಗೆ ಬೀಳ್ಳೋದು ಗ್ಯಾರಂಟಿ. ಇಷ್ಟೊಂದು ಜನ ಬಂದರೂ ಬೇಲಿ ಮಾಡಿಲ್ಲ. ಫೋಟೋ ತೆಗೆಸಿಕೊಳ್ಳಲು ಒಂದೇ ಒಂದು ಸ್ಥಳವಿಲ್ಲ.
 ಅನಿಲ್‌, ಪ್ರವಾಸಿಗ

ಬಹಳ ವರ್ಷ ಆಗಿತ್ತು ಡ್ಯಾಂ ತುಂಬಿ. ಅದಕ್ಕೆ ನೋಡಲು ಬಂದೆವು. ಇಲ್ಲಿ ಯಾವ ವ್ಯವಸ್ಥೆಯೂ ಸರಿ ಇಲ್ಲ. ಕೆಲವರು ರಸ್ತೆ ಪಕ್ಕವೇ ಮೂತ್ರ ವಿಸರ್ಜನೆ ಮಾಡುತ್ತಿರುತ್ತಾರೆ. ನಮಗೆ ಮುಜುಗರ ಆದರೂ ಸಹಿಸಿಕೊಳ್ಳಬೇಕಿದೆ. ಇಷ್ಟು ದೊಡ್ಡ ಡ್ಯಾಂನಲ್ಲಿ ಒಂದೇ ಒಂದು ಸಾರ್ವಜನಿಕ ಶೌಚಾಲಯ ಇಲ್ಲ
 ವಿದ್ಯಾ, ಪ್ರವಾಸಿ

„ಶರತ್‌ ಭದ್ರಾವತಿ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.