ಶಿಕ್ಷಣದಿಂದ ಮಹಿಳೆಯರಿಗೆ ಆತ್ಮಸ್ಥೈರ್ಯ: ನಾಗರತ್ನ
Team Udayavani, Aug 27, 2018, 4:39 PM IST
ಸೊರಬ: ಶಿಕ್ಷಣದಿಂದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು. ಶಿಕ್ಷಣವು ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡುತ್ತದೆ. ಶಿಕ್ಷಣ ಮತ್ತು ಉದ್ಯೋಗ ಮಹಿಳಾ ಸಬಲೀಕರಣಕ್ಕೆ ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂರಕ್ಷಣಾಧಿಕಾರಿ ನಾಗರತ್ನ ನಾಯಕ್ ಅಭಿಪ್ರಾಯಪಟ್ಟರು.
ಸರ್ವೋದಯ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಉಳವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಪರಿಚಿತರಿಂದಾಗುವ ಕಿರುಕುಳದ ಭೀತಿಯಿಂದ ಪಾರಾಗಬೇಕು. ಅದಕ್ಕಾಗಿ ಸದಾ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಚಂಚಲ ಮನಸ್ಸನ್ನು ನಿಯಂತ್ರಣ ದಲ್ಲಿಟ್ಟುಕೊಂಡು ಸಾಧನೆಗೈಯ್ಯಬೇಕು ಎಂದರು.
ಸರ್ವೋದಯ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಪ್ರಶಾಂತ ಎಚ್. ಎಂ. ಮಾತನಾಡಿ, ಭ್ರೂಣ ಹತ್ಯೆ, ಬಾಲ್ಯ ವಿವಾಹ, ವರದಕ್ಷಿಣೆ ಪಡೆಯುವಿಕೆ, ಮಹಿಳೆ ಮತ್ತು ಮಕ್ಕಳ ಕಳ್ಳಸಾಗಣೆ, ಮಹಿಳೆಯರ ಮೇಲಿನ ದೌರ್ಜನ್ಯ ಇವೆಲ್ಲವೂ ಕಾನೂನಿನ ಅಡಿಯಲ್ಲಿ ಅಪರಾಧಗಳಾಗುತ್ತವೆ ಎಂದರು.
ಸಾಂತ್ವನ ಮಹಿಳಾ ಸಹಾಯವಾಣಿಯ ಸಮಾಜಸೇವಾ ಕಾರ್ಯಕರ್ತೆ ಮಧುರಾ ಆರ್. ಸಾಂತ್ವನ ಯೋಜನೆಯ ಬಗ್ಗೆ ವಿವರಿಸಿದರು. ಅಧ್ಯಕ್ಷತೆಯನ್ನು ಉಳವಿ ಸಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಬಿಉಲ್ಲಾಖಾನ್ ವಹಿಸಿದ್ದರು.
ಸಾಂತ್ವನ ಮಹಿಳಾ ಸಹಾಯವಾಣಿಯ ಸಮಾಜಸೇವಾ ಕಾರ್ಯಕರ್ತೆ ಅಜಂತಾ ಎಂ.ಬಿ. ಇದ್ದರು. ಶಿಕ್ಷಕಿ ಗೀತಾ ನಾಯಕ್ ಸ್ವಾಗತಿಸಿದರು. ವೀಣಾ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ