ಸಾಗರ ಉಪ ಕಾರಾಗೃಹ ಸ್ಥಳಾಂತರಕ್ಕೆ ವಿರೋಧ


Team Udayavani, Aug 28, 2018, 5:12 PM IST

shiv-1.jpg

ಸಾಗರ: ನಗರದ ಉಪ ಕಾರಾಗೃಹವನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ
ನಗರದ ಉಪವಿಭಾಗೀಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಕರ್ನಾಟಕ ಸೋಷಿಯಲ್‌ ಫ್ರಂಟ್‌ ಸಂಘಟನೆ ಸಹಾಯಕ ಆಯುಕ್ತರ ಮೂಲಕ ರಾಜ್ಯ ಬಂದೀಖಾನೆ ಸಚಿವರಿಗೆ ಪುನಃ ಸಾಗರಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ಮಾತನಾಡಿ, ಉಪ ಕಾರಾಗೃಹವನ್ನು ಸಾಗರದಿಂದ ಶಿವಮೊಗ್ಗಕ್ಕೆ ವರ್ಗಾಯಿಸಿ ಐದು ತಿಂಗಳು ಕಳೆದಿದೆ. ಕಾರಾಗೃಹ ರಿಪೇರಿ ಹೆಸರಿನಲ್ಲಿ ಇಲ್ಲಿದ್ದ ಬಂದಿಗಳನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಜೈಲು ರಿಪೇರಿಯಾಗಿದ್ದರೂ ಈತನಕ ಕೈದಿಗಳನ್ನು ಸಾಗರ ಉಪ ಕಾರಾಗೃಹಕ್ಕೆ ಸ್ಥಳಾಂತರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಸಾಗರದಲ್ಲಿದ್ದ ವಾರ್ತಾ ಇಲಾಖೆ, ಸಣ್ಣ ನೀರಾವರಿ ಇಲಾಖೆಯನ್ನು ಅಧಿಕಾರಸ್ಥರ ಒತ್ತಡದಿಂದ
ಬೇರೆಬೇರೆ ಊರುಗಳಿಗೆ ಸ್ಥಳಾಂತರಿಸಲಾಗಿತ್ತು. ಸಾಗರ ಉಪ ವಿಭಾಗದಲ್ಲಿರುವ ಕಾರಾಗೃಹವನ್ನು ಸಹ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಉದ್ದೇಶ ಇದರ ಹಿಂದೆ ಅಡಗಿದೆ ಎನ್ನುವ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ತಕ್ಷಣ ಉಪ ಕಾರಾಗೃಹವನ್ನು ಸಾಗರಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸೋಶಿಯಲ್‌ ಫ್ರೆಂಟ್‌ ನಗರ ಘಟಕದ ಅಧ್ಯಕ್ಷ ಇಮ್ರಾನ್‌ ಸಾಗರ್‌ ಮಾತನಾಡಿ, ಸಾಗರದ ಉಪ ಕಾರಾಗೃಹಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ಬ್ರಿಟಿಷರ ಕಾಲದಿಂದಲೂ ಈ ಕಾರಾಗೃಹ ತನ್ನದೇ ಆದ ವಿಶೇಷತೆಯನ್ನು ಕಾಯ್ದುಕೊಂಡು ಬಂದಿದೆ. ಇಂತಹ ಉಪ ಕಾರಾಗೃಹವನ್ನು ರಿಪೇರಿ ಹೆಸರಿನಲ್ಲಿ ಶಾಶ್ವತವಾಗಿ ಮುಚ್ಚುವ ಪ್ರಯತ್ನ
ನಡೆಯುತ್ತಿದೆ. ಸಾಗರ ಉಪ ಕಾರಾಗೃಹದಲ್ಲಿದ್ದ ಬಂದಿಗಳನ್ನು ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವುದರಿಂದ ಬಂದಿಗಳ ಸಂಬಂಧಿಗಳು ತಮ್ಮವರನ್ನು ಭೇಟಿಯಾಗಲು ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದರು.

ಶಿವಮೊಗ್ಗ ಬಸ್‌ ನಿಲ್ದಾಣದಿಂದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಹೋಗಲು ಆಟೋ ಚಾರ್ಜ್‌ 200ರಿಂದ 300 ರೂ. ತೆತ್ತಬೇಕಾಗಿದೆ. ಬಡಬಗ್ಗರು ಕೈದಿಗಳನ್ನು ನೋಡಲು ಹೋಗಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸಾಗರ ಉಪ ಕಾರಾಗೃಹಕ್ಕೆ ಸಾಗರ ಸೇರಿದಂತೆ ಹೊಸನಗರ, ಸೊರಬ ತಾಲೂಕುಗಳು ಸೇರುತ್ತಿದ್ದು, ಹತ್ತಕ್ಕೂ ಹೆಚ್ಚು ನ್ಯಾಯಾಲಯ, ಪೊಲೀಸ್‌ ಠಾಣೆ ಬರುತ್ತದೆ. ಈ ಎಲ್ಲ ತಾಲೂಕಿನ ಕೈದಿಗಳ ಸಂಬಂಧಿಕರಿಗೂ ಇದರಿಂದ ತೊಂದರೆಯಾಗುತ್ತಿದೆ. ತಕ್ಷಣ ಸಾಗರ ಉಪ ಕಾರಾಗೃಹದಲ್ಲಿದ್ದ ಕೈದಿಗಳನ್ನು ಇಲ್ಲಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಿಮೋಚನಾ ಮಾನವತಾವಾದ ಸಂಸ್ಥೆಯ ನಾಗರಾಜ ಸ್ವಾಮಿ, ಕರ್ನಾಟಕ ಸೋಶಿಯಲ್‌ ಫ್ರೆಂಟ್‌ನ ಗೌರವಾಧ್ಯಕ್ಷ ಆರೀಫ್‌, ಉಪಾಧ್ಯಕ್ಷ ರಫಿಕ್‌ ಕೊಪ್ಪ, ನಸುರುಲ್ಲಾ, ಪ್ರಧಾನ ಕಾರ್ಯದರ್ಶಿ ಅಂಕರವಳ್ಳಿ ಹನೀಫ್‌, ಇಲಿಯಾಸ್‌, ಸಫಾನ್‌, ಪ್ರಮುಖರಾದ ಪ್ರಕಾಶ್‌ ಗೌಡ, ರವಿ ಲಿಂಗನಮಕ್ಕಿ, ಸದ್ದಾಂ, ವಸೀಂ ಇತರರು ಇದ್ದರು

ಟಾಪ್ ನ್ಯೂಸ್

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.