ಕೊಳೆಪೀಡಿತ ಅಡಕೆ ಬೆಳೆಗೆ ತಕ್ಷಣ ಪರಿಹಾರ ನೀಡಿ


Team Udayavani, Aug 30, 2018, 10:26 AM IST

shiv-3.jpg

ಸಾಗರ: ಅತಿವೃಷ್ಟಿಯಿಂದ ಕೊಳೆರೋಗಕ್ಕೆ ತುತ್ತಾದ ಅಡಕೆ ಬೆಳೆಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಅಕ್ರಮ ಸಾಗುವಳಿ ಸಕ್ರಮೀಕರಣ ಕಾಯ್ದೆಯಡಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಬುಧವಾರ ಕಾಂಗ್ರೆಸ್‌ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಲ್‌.ಟಿ. ತಿಮ್ಮಪ್ಪ, ತಾಲೂಕಿನಲ್ಲಿ ವಿಪರೀತ ಮಳೆಯಿಂದ ಶೇ. 80ರಷ್ಟು ಅಡಕೆ ಸಂಪೂರ್ಣ ಕೊಳೆರೋಗದಿಂದ ನಷ್ಟವಾಗಿದ್ದು, ಬೆಳೆಗಾರರು ತೀವ್ರ [ಆತಂಕದಲ್ಲಿದ್ದಾರೆ. 

2012-13ನೇ ಸಾಲಿನಲ್ಲಿ ಅಡಕೆ ಕೊಳೆರೋಗ ಬಂದಿದ್ದಾಗ ಹೆಕ್ಟೇರ್‌ಗೆ ಹನ್ನೆರಡೂವರೆ ಸಾವಿರ ರೂ. ಪರಿಹಾರವನ್ನು ಕಾಗೋಡು ತಿಮ್ಮಪ್ಪ ಅವರ ಪರಿಶ್ರಮದಿಂದ ಬೆಳೆಗಾರರಿಗೆ ದೊರಕಿತ್ತು. ಈ ಬಾರಿ ಅತಿ ಹೆಚ್ಚು ಬೆಳೆ ನಷ್ಟವಾಗಿರುವುದರಿಂದ ಸರ್ಕಾರ ಎಕರೆಗೆ 16 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
 
ಕಳೆದ ಸಾಲಿನಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಗರ್‌ಹುಕುಂ ಸಕ್ರಮೀಕರಣ ಸಮಿತಿ ಸ್ಥಿರೀಕರಣಗೊಳಿಸಿದ 5 ಸಾವಿರಕ್ಕೂ ಹೆಚ್ಚು ಕಡತಗಳು ಈತನಕ ವಿಲೇವಾರಿ ಮಾಡಿಲ್ಲ. ಫಲಾನುಭವಿಗಳಿಗೆ ಈತನಕ ಹಕ್ಕುಪತ್ರ ನೀಡಿಲ್ಲ.
ಕಂದಾಯ ಭೂಮಿಯಲ್ಲಿ ಮಂಜೂರಾದ ಭೂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವ ಕಾರ್ಯದಲ್ಲಿ ಅರಣ್ಯ ಇಲಾಖೆಗೆ ಅಭಿಪ್ರಾಯಕ್ಕಾಗಿ ಕಡತಗಳನ್ನು ಕಳಿಸಲಾಗಿದೆ.

ಅರಣ್ಯ ಇಲಾಖೆ ಅಭಿಪ್ರಾಯ ಕೇಳಬೇಕು ಎನ್ನುವ ಅಗತ್ಯವಿಲ್ಲದಿದ್ದರೂ ಅನಗತ್ಯವಾಗಿ ಅರಣ್ಯ ಇಲಾಖೆಗೆ ಕಳಿಸಿಕೊಡಲಾಗಿದೆ. ಈ ಕಡತಗಳನ್ನು ತಕ್ಷಣ ವಾಪಸ್‌ ತರಿಸಿಕೊಂಡು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು. ಎಪಿಎಂಸಿ ಅಧ್ಯಕ್ಷ ಕೆ. ಹೊಳೆಯಪ್ಪ ಮಾತನಾಡಿ, ತಾಲೂಕಿನಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ನಷ್ಟು ತೋಟಗಳಲ್ಲಿ ಅಡಕೆ ಬೆಳೆ ಹಾನಿಯಾಗಿದೆ. 

ಅಡಕೆ ಬೆಳೆಗಾರರಿಗೆ ಸರ್ಕಾರ ತೋಟಗಾರಿಕೆ ಇಲಾಖೆಯ ಮೂಲಕ ಕೊಡುತ್ತಿರುವ ಸಹಾಯಧನವನ್ನು ಇನ್ನಷ್ಟು ಹೆಚ್ಚಿಸಬೇಕು. ಅಡಕೆ ಹಾನಿಗೊಳಗಾದ ಬೆಳೆಗಾರರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಮುಂದಿನ ಒಂದು ವಾರದಲ್ಲಿ
ಪರಿಹಾರ ನೀಡದೆ ಹೋದಲ್ಲಿ ಉಗ್ರವಾಗದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿದರು. ನಗರ ಬ್ಲಾಕ್‌ ಅಧ್ಯಕ್ಷ ಮಕೂಲ್‌ ಅಹ್ಮದ್‌, ಕಾರ್ಯದರ್ಶಿ ಮಹಾಬಲಕೌತಿ, ಡಿ. ದಿನೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಸುಧಾಕರ ಕುಗ್ವೆ, ಪ್ರವೀಣ ಬಣಕಾರ್‌, ಎಪಿಎಂಸಿ ಸದಸ್ಯ ರವಿ ಹುಣಾಲಮಡಿಕೆ, ಪ್ರಮುಖರಾದ ಕನ್ನಪ್ಪ ಮುಳಕೇರಿ, ಗುಡ್ಡೆಮನೆ ನಾಗರಾಜ್‌, ಜ್ಯೋತಿ, ಆನಂದ ಭೀಮನೇರಿ, ಅಣ್ಣಪ್ಪ ಸೂರನಗದ್ದೆ, ಷಣ್ಮುಖ, ಲಕ್ಷ್ಮೀಕಾಂತ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.