ಕೊಳೆಪೀಡಿತ ಅಡಕೆ ಬೆಳೆಗೆ ತಕ್ಷಣ ಪರಿಹಾರ ನೀಡಿ


Team Udayavani, Aug 30, 2018, 10:26 AM IST

shiv-3.jpg

ಸಾಗರ: ಅತಿವೃಷ್ಟಿಯಿಂದ ಕೊಳೆರೋಗಕ್ಕೆ ತುತ್ತಾದ ಅಡಕೆ ಬೆಳೆಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಅಕ್ರಮ ಸಾಗುವಳಿ ಸಕ್ರಮೀಕರಣ ಕಾಯ್ದೆಯಡಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಬುಧವಾರ ಕಾಂಗ್ರೆಸ್‌ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಲ್‌.ಟಿ. ತಿಮ್ಮಪ್ಪ, ತಾಲೂಕಿನಲ್ಲಿ ವಿಪರೀತ ಮಳೆಯಿಂದ ಶೇ. 80ರಷ್ಟು ಅಡಕೆ ಸಂಪೂರ್ಣ ಕೊಳೆರೋಗದಿಂದ ನಷ್ಟವಾಗಿದ್ದು, ಬೆಳೆಗಾರರು ತೀವ್ರ [ಆತಂಕದಲ್ಲಿದ್ದಾರೆ. 

2012-13ನೇ ಸಾಲಿನಲ್ಲಿ ಅಡಕೆ ಕೊಳೆರೋಗ ಬಂದಿದ್ದಾಗ ಹೆಕ್ಟೇರ್‌ಗೆ ಹನ್ನೆರಡೂವರೆ ಸಾವಿರ ರೂ. ಪರಿಹಾರವನ್ನು ಕಾಗೋಡು ತಿಮ್ಮಪ್ಪ ಅವರ ಪರಿಶ್ರಮದಿಂದ ಬೆಳೆಗಾರರಿಗೆ ದೊರಕಿತ್ತು. ಈ ಬಾರಿ ಅತಿ ಹೆಚ್ಚು ಬೆಳೆ ನಷ್ಟವಾಗಿರುವುದರಿಂದ ಸರ್ಕಾರ ಎಕರೆಗೆ 16 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
 
ಕಳೆದ ಸಾಲಿನಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಗರ್‌ಹುಕುಂ ಸಕ್ರಮೀಕರಣ ಸಮಿತಿ ಸ್ಥಿರೀಕರಣಗೊಳಿಸಿದ 5 ಸಾವಿರಕ್ಕೂ ಹೆಚ್ಚು ಕಡತಗಳು ಈತನಕ ವಿಲೇವಾರಿ ಮಾಡಿಲ್ಲ. ಫಲಾನುಭವಿಗಳಿಗೆ ಈತನಕ ಹಕ್ಕುಪತ್ರ ನೀಡಿಲ್ಲ.
ಕಂದಾಯ ಭೂಮಿಯಲ್ಲಿ ಮಂಜೂರಾದ ಭೂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವ ಕಾರ್ಯದಲ್ಲಿ ಅರಣ್ಯ ಇಲಾಖೆಗೆ ಅಭಿಪ್ರಾಯಕ್ಕಾಗಿ ಕಡತಗಳನ್ನು ಕಳಿಸಲಾಗಿದೆ.

ಅರಣ್ಯ ಇಲಾಖೆ ಅಭಿಪ್ರಾಯ ಕೇಳಬೇಕು ಎನ್ನುವ ಅಗತ್ಯವಿಲ್ಲದಿದ್ದರೂ ಅನಗತ್ಯವಾಗಿ ಅರಣ್ಯ ಇಲಾಖೆಗೆ ಕಳಿಸಿಕೊಡಲಾಗಿದೆ. ಈ ಕಡತಗಳನ್ನು ತಕ್ಷಣ ವಾಪಸ್‌ ತರಿಸಿಕೊಂಡು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು. ಎಪಿಎಂಸಿ ಅಧ್ಯಕ್ಷ ಕೆ. ಹೊಳೆಯಪ್ಪ ಮಾತನಾಡಿ, ತಾಲೂಕಿನಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ನಷ್ಟು ತೋಟಗಳಲ್ಲಿ ಅಡಕೆ ಬೆಳೆ ಹಾನಿಯಾಗಿದೆ. 

ಅಡಕೆ ಬೆಳೆಗಾರರಿಗೆ ಸರ್ಕಾರ ತೋಟಗಾರಿಕೆ ಇಲಾಖೆಯ ಮೂಲಕ ಕೊಡುತ್ತಿರುವ ಸಹಾಯಧನವನ್ನು ಇನ್ನಷ್ಟು ಹೆಚ್ಚಿಸಬೇಕು. ಅಡಕೆ ಹಾನಿಗೊಳಗಾದ ಬೆಳೆಗಾರರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಮುಂದಿನ ಒಂದು ವಾರದಲ್ಲಿ
ಪರಿಹಾರ ನೀಡದೆ ಹೋದಲ್ಲಿ ಉಗ್ರವಾಗದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿದರು. ನಗರ ಬ್ಲಾಕ್‌ ಅಧ್ಯಕ್ಷ ಮಕೂಲ್‌ ಅಹ್ಮದ್‌, ಕಾರ್ಯದರ್ಶಿ ಮಹಾಬಲಕೌತಿ, ಡಿ. ದಿನೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಸುಧಾಕರ ಕುಗ್ವೆ, ಪ್ರವೀಣ ಬಣಕಾರ್‌, ಎಪಿಎಂಸಿ ಸದಸ್ಯ ರವಿ ಹುಣಾಲಮಡಿಕೆ, ಪ್ರಮುಖರಾದ ಕನ್ನಪ್ಪ ಮುಳಕೇರಿ, ಗುಡ್ಡೆಮನೆ ನಾಗರಾಜ್‌, ಜ್ಯೋತಿ, ಆನಂದ ಭೀಮನೇರಿ, ಅಣ್ಣಪ್ಪ ಸೂರನಗದ್ದೆ, ಷಣ್ಮುಖ, ಲಕ್ಷ್ಮೀಕಾಂತ ಇನ್ನಿತರರು ಇದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.