ರಾಯರ-ಆರಾಧನಾ-ಮಹೋತ್ಸವ
Team Udayavani, Aug 30, 2018, 10:55 AM IST
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮತ್ತು ಶ್ರೀವಾದಿರಾಜ ಸ್ವಾಮಿಗಳ ಮಠದಲ್ಲಿ 3 ದಿನಗಳ ಕಾಲ
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಹೂವಿನ ಅಲಂಕಾರ, ಪ್ರತಿನಿತ್ಯ ವಿವಿಧ ಬಡಾವಣೆಗಳಿಗೆ ರಾಯರ ಪಲ್ಲಕ್ಕಿಯ ಮೂಲಕ ಪಾದಪೂಜೆಯನ್ನು ಭಕ್ತಾದಿಗಳ ಮನೆಯಲ್ಲಿ ನಡೆಸಲಾಯಿತು.
ಬುಧವಾರ ಮಠದಲ್ಲಿ ರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ನಂತರ ವಿವಿಧ ರೀತಿಯ ಹಣ್ಣುಗಳಿಂದ
ಅಲಂಕಾರ ಮಾಡಲಾಗಿತ್ತು. ನಂತರ ರಾಯರ ರಜತ ಬೃಂದಾವನವನ್ನು ಪ್ರಾಣದೇವರ ಸಹಿತವಾಗಿ ರಥದಲ್ಲಿರಿಸಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದವರೆಗೆ ರಥೋತ್ಸವ ನಡೆಸಲಾಯಿತು. ಭಕ್ತಾದಿಗಳು ದಾಸರ ಪದಗಳನ್ನು ಹಾಡುತ್ತಾ ರಥವನ್ನು ಎಳೆದರು.
ರಾತ್ರಿ ತೊಟ್ಟಿಲು ಪೂಜೆ ನೆರವೇರಿತು. ಆರಾಧನೆಗೆ ಬಂದ ಭಕ್ತಾದಿಗಳಿಗೆ ಅನ್ನದಾನ ಪ್ರಸಾದ ವಿತರಿಸಲಾಯಿತು. ಮಠದ ಮುಖ್ಯಸ್ಥರಾದ ತಂತ್ರಿಗಳು, ರಮಾಕಾಂತ, ಗೋಪಾಲಾಚಾರ್, ಮಾಧವ ರಾವ್, ಚಿಟ್ಟೂರು ರಾಘವೇಂದ್ರಾಚಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ