ರಂಗಭೂಮಿ ಕಲೆಯಿಂದ ಆತ್ಮತೃಪ್ತಿ: ಚಂದ್ರು


Team Udayavani, Sep 8, 2018, 5:12 PM IST

chandru.jpg

ಶಿವಮೊಗ್ಗ: ರಂಗಭೂಮಿ ಒಂದು ಜೀವಂತ ಕಲೆ. ಇದರಲ್ಲಿ ಸಿಗುವ ಆನಂದ ಬೇರೆ ಯಾವ ಕ್ಷೇತ್ರದಲ್ಲೂ ಸಿಗಲಾರದು
ಎಂದು ಹಿರಿಯ ರಂಗಕರ್ಮಿ, ನಟ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಶುಕ್ರವಾರ ಪ್ರಸ್‌ ಟ್ರಸ್ಟ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಿರುತೆರೆ, ಸಿನಿಮಾ ಈ
ಎಲ್ಲ ಕ್ಷೇತ್ರಗಳಿಗಿಂತ ರಂಗಭೂಮಿ ಮುಖ್ಯವಾದುದು, ಇದು ತಾಯಿ ಬೇರು ಇದ್ದಂತೆ. ಇದು ಬದುಕನ್ನು ಕಲಿಸಿಕೊಡುತ್ತದೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಹೆಸರು, ಕೀರ್ತಿ, ಹಣ ಎಲ್ಲವೂ ಸಿಗುತ್ತದೆ. ಆದರೆ ಆತ್ಮತೃಪ್ತಿ ಸಿಗುವುದು ರಂಗಭೂಮಿಯಲ್ಲಿ ಮಾತ್ರ ಎಂದರು.

 ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕಿರುತೆರೆಯಲ್ಲೂ ನಟಿಸಿದ್ದೇನೆ. ಆದರೆ ನನಗೆ ರಂಗಭೂಮಿ ಅತ್ಯಂತ ತೃಪ್ತಿ ತಂದಿದೆ. ಅದರಲ್ಲೂ ಮುಖ್ಯಮಂತ್ರಿ ನಾಟಕ ದಾಖಲೆಯತ್ತ ಸಾಗಿದ್ದು 700ನೇ ಪ್ರದರ್ಶನದತ್ತ ದಾಪುಗಾಲು ಇಟ್ಟಿದೆ. 700 ಪ್ರದರ್ಶನಗಳಲ್ಲೂ ನಾನೇ ಅಭಿನಯಿಸಿರುವುದು ಗಿನ್ನಿಸ್‌ ದಾಖಲೆಗೆ ಸೇರಲಿದೆ ಎಂದರು.

ಚಂದ್ರಶೇಖರ ಎಂಬ ನನಗೆ ಮುಖ್ಯಮಂತ್ರಿ ಹೆಸರು ಅಂಟಿಕೊಂಡಿದ್ದೇ ಒಂದು ಸ್ವಾರಸ್ಯಕರವಾದ ವಿಷಯ. ಮುಖ್ಯಮಂತ್ರಿ ನಾಟಕದ ಪಾತ್ರಧಾರಿ ಹುಷಾರಿಲ್ಲದ ಕಾರಣ ಬಂದಿರಲಿಲ್ಲ. ಕೊನೆಗೆ ಆ ಪಾತ್ರದಲ್ಲಿ ಅಭಿನಯಿಸಲು
ನನಗೆ ತಿಳಿಸಿದರು. ಕೊನೆಗೂ ಒಪ್ಪಿಕೊಂಡು ಅಭಿನಯಿಸಿದೆ. ಅದೇ ಪಾತ್ರ ನನ್ನನ್ನು ಇಲ್ಲಿವರೆಗೂ ತಂದು ನಿಲ್ಲಿಸಿದೆ.
 
 ಮುಖ್ಯಮಂತ್ರಿ ಹೆಸರು ತೆಗೆಯಲು ಚರ್ಚೆ: ಶಾಸಕನಾಗಿ ಆಯ್ಕೆಯಾದಾಗ ಒಂದೇ ಸದನದಲ್ಲಿ ಇಬ್ಬರು ಮುಖ್ಯಮಂತ್ರಿ ಇರುವ ಹಾಗಿಲ್ಲ ಎಂಬ ಚರ್ಚೆ ಶುರುವಾಯಿತು. ಇದು ನಾನು ಇಟ್ಟುಕೊಂಡಿರುವುದಲ್ಲ ಜನ ಕೊಟ್ಟಿರುವುದು ಎಂದು ತಿಳಿಸಿದೆ. ಆಗ ಸಿಎಂ ಜೆ.ಎಚ್‌. ಪಟೇಲರು ಈ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದರು. ಕೊನೆಗೆ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿ ಮುಖ್ಯಮಂತ್ರಿ ಚಂದ್ರು ಎಂಬ ಹೆಸರನ್ನೇ ಅಧಿಕೃತಗೊಳಿಸಲಾಯಿತು. ನಂತರ ನಾನು ನನ್ನ ಎಲ್ಲ ಸರ್ಟಿಫಿಕೇಟ್‌ಗಳಲ್ಲೂ ಹೆಸರು ಬದಲಾವಣೆ ಮಾಡಿಕೊಂಡೆ ಎಂದರು.

700 ನೇ ಪ್ರದರ್ಶನ: ಮುಖ್ಯಮಂತ್ರಿ ನಾಟಕ ಕಲಾಗಂಗೋತ್ರಿಯಿಂದ ಸುಮಾರು 47 ವರ್ಷಗಳಿಂದ ಪ್ರದರ್ಶನಗೊಳ್ಳುತ್ತಿದೆ. ರಾಜ್ಯ, ದೇಶ, ವಿದೇಶಗಳಲ್ಲೂ ಪ್ರದರ್ಶನಗೊಂಡಿದೆ. ಡಿ.4ರಂದು ಬೆಂಗಳೂರಿನಲ್ಲಿ 700ನೇ ಪ್ರದರ್ಶನ ಕಾಣಲಿದೆ. ಸುಮಾರು 24 ಪಾತ್ರಗಳು ನಾಟಕದಲ್ಲಿ ಬರುತ್ತವೆ. ಆದರೆ ಹಲವು ಪಾತ್ರಧಾರಿಗಳು ತೀರಿಹೋಗಿದ್ದಾರೆ. ಸುಮಾರು 200 ಮಂದಿ ಇದೇ ರೀತಿ ಬದಲಾವಣೆಯಾಗಿದ್ದಾರೆ. ಆದರೆ ಮುಖ್ಯಮಂತ್ರಿ ಪಾತ್ರದಲ್ಲಿ ನಾನೊಬ್ಬನೇ ಮುಂದುವರೆದಿದ್ದೇನೆ ಎಂದರು.

 ಇದೊಂದು ರಾಜಕೀಯ ವಿಡಂಬನೆ ನಾಟಕವಾಗಿದ್ದು ಎಲ್ಲ ಕಾಲಕ್ಕೂ ಸಲ್ಲುತ್ತದೆ. ಸುಮಾರು 13 ಮುಖ್ಯಮಂತ್ರಿಗಳು ಇದನ್ನು ನೋಡಿದ್ದಾರೆ. ಒಮ್ಮೆ ಗುಂಡೂರಾವ್‌, ಎಚ್‌.ಡಿ.ದೇವೇಗೌಡ, ಡಾ| ರಾಜ್‌ಕುಮಾರ್‌ ನಾಟಕ ನೋಡಲು ಬಂದಿದ್ದರು. ನಾಟಕ ಮುಗಿದ ಮೇಲೆ ಗುಂಡೂರಾವ್‌ ಅವರು ನೀವು ಮಾಡಿರುವುದು ಬರೀ 30 ಪರ್ಸೆಂಟ್‌ ಅಷ್ಟೇ
ಇನ್ನೂ 70 ಪರ್ಸೆಂಟ್‌ ಇದೆ ಎಂದಿದ್ದರು.

ಹಲವರು ಇನ್ನೂ ಹೆಚ್ಚಿನದನ್ನು ಸೇರಿಸಬೇಕು ಎಂದಿದ್ದಾರೆ. ಕಾಲ ಕಾಲಕ್ಕೆ ತಕ್ಕಂತೆ ಡೈಲಾಗ್ಸ್‌ ಬದಲಾವಣೆಯಾಗಿದೆ. ಒಂದು ನಾಟಕದಲ್ಲಿ ಮಾಡಿದಂತೆ ಇನ್ನೊಂದು ನಾಟಕದಲ್ಲಿ ಮಾಡಲು ಆಗಲ್ಲ ಎಂದರು. 

 ಈ ನಾಟಕವು ಸೆ.8ರಂದು ಶೃಂಗೇರಿಯಲ್ಲಿ, 9ರಂದು ತೀರ್ಥಹಳ್ಳಿಯಲ್ಲಿ ಪ್ರದರ್ಶನ ಕಾಣಲಿದೆ. ಡಾ| ಬಿ.ವಿ.ರಾಜಾರಾಂ ನಿರ್ದೇಶಿಸಿದ್ದು, ಮಂಜುನಾಥ್‌ ಹೆಗ್ಡೆ, ಶ್ರೀನಿವಾಸ್‌ ಮೇಷ್ಟ್ರು, ಮುರಳೀಧರ್‌, ಗಂಗೋತ್ರಿ ಮಂಜು ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.