ಆನಂದಪುರ: ಮೊಹರಂ ಆಚರಣೆ
Team Udayavani, Sep 22, 2018, 9:28 AM IST
ಆನಂದಪುರ: ಸಮೀಪದ ಆಚಾಪುರ ಗ್ರಾಪಂ ವ್ಯಾಪ್ತಿಯ ಇಸ್ಲಾಂಪುರ, ಮುರುಘಾಮಠ, ಆಚಾಪುರಗಳಲ್ಲಿ ಮೊಹರಂ
ಆಚರಿಸಲಾಯಿತು. ತ್ಯಾಗ- ಬಲಿದಾನದ ಸಂಕೇತವಾದ ಈ ಹಬ್ಬವನ್ನು ಏಳು ದಿನಗಳಿಂದ ಆಚರಿಸಲಾಯಿತು. ಇದರಲ್ಲಿ 6ನೇ ದಿನ ರಾತ್ರಿ ಕೆಂಡ ಹಾಯುವ ಮೂಲಕ ಕತ್ತಲ ರಾತ್ರಿಯನ್ನು ಆಚರಿಸುತ್ತಾರೆ. ಕೆಂಡ ಹಾಯ್ದ ನಂತರ ಸಾಮೂಹಿಕ ಅನ್ನ ಸಂರ್ತಪಣೆ ನಡೆಯುತ್ತದೆ. ಎಲ್ಲಾ ಭಕ್ತರು ಭಾಗವಹಿಸುತ್ತಾರೆ.
ಈ ಕತ್ತಲ ರಾತ್ರಿಯ ಪೂಜೆಯಲ್ಲಿ ಹಿಂದೆ ದೇವರಿಗೆ ಹರಕೆ ಮಾಡಿಕೊಂಡವರು ಹರಕೆಯನ್ನು ತೀರಿಸುತ್ತಾರೆ. ಹಿಂದೂ ಮತ್ತು ಮುಸ್ಲಿಮರು ಒಂದಾಗಿ ಸಂಭ್ರಮದಿಂದ ಆಚರಿಸುವಂತಹ ಹಬ್ಬವಾಗಿದ್ದು ಇದರಿಂದ ಹಿಂದೂ ಮತ್ತು
ಮುಸ್ಲಿಮರಲ್ಲಿ ಐಕ್ಯತೆಯ ಭಾವನೆ ಮೂಡಲಿದೆ ಎಂದು ಸಮಿತಿಯ ಅಧ್ಯಕ್ಷ ಅಬ್ಬಲ್ ಖನ್ನಿ ಹೇಳಿದರು. ಶುಕ್ರವಾರ ಬೆಳಗ್ಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೊಹರಂ ಉತ್ಸವ ಸಾಗಿದ್ದು ದೇವರಿಗೆ ಭಕ್ತರು ಸಕ್ಕರೆ, ಊದಿನಬತ್ತಿ ನೀಡಿ ಪೂಜೆ ಸಲ್ಲಿಸಿದರು. ಇಸ್ಲಾಂಪುರದ ಹಬ್ಬದ ಸಮಿತಿಯ ಕಾರ್ಯದರ್ಶಿ ನಬಿ, ಸದಸ್ಯರಾದ ಶಾಂತಕುಮಾರ್, ಗೌಸ್ ಬಷೀರ್, ಯೂಸೂಬ್, ಮಹಮದ್ ಗೌಸ್, ಮಹಮದ್ ಆಲಿ, ಅಸ್ಲಾಂ, ತಾಪಂ ಸದಸ್ಯೆ ಆನಂದಿ ಲಿಂಗರಾಜ್, ಆಚಾಪುರ ಗ್ರಾಪಂ ಉಪಾಧ್ಯಕ್ಷೆ ಮೇನಕಾ, ಸದಸ್ಯರಾದ ಸುರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ