ರೈತರಿಗೆ ಮತ್ತೆ ಬಂದೂಕಿನಾಟ!


Team Udayavani, Oct 15, 2018, 4:00 PM IST

shiv.jpg

ಹೊಸನಗರ: ರಾಜ್ಯದಲ್ಲಿ ಮತ್ತೆ ಚುನಾವಣೆ ಬಂದಿದೆ. ಈ ಚುನಾವಣೆಯೇ ಸುಖಾಸುಮ್ಮನೆ ದುಂದುವೆಚ್ಚ ಎಂಬ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಗ್ರಾಮೀಣ ಭಾಗದ ಕೃಷಿಕರು, ಮಲೆನಾಡಿನ ಒಂಟಿಮನೆ ಹೊಂದಿರುವ ಕುಟುಂಬಗಳು ಪರದಾಡುವಂತಾಗಿದೆ. ರೈತರು ತಮ್ಮಲ್ಲಿರುವ ಪರವಾನಗಿ ಹೊಂದಿರುವ ಬಂದೂಕುಗಳನ್ನು ಸ್ಥಳೀಯ ಠಾಣೆಯಲ್ಲಿ ಠೇವಣಿ ಮಾಡುವ ಬಗ್ಗೆ ಜಿಲ್ಲಾಡಳಿತ ಸೂಚಿಸಿರುವುದರಿಂದ ರೈತರು ಪರದಾಡುವಂತಾಗಿದೆ. ಚುನಾವಣೆ ಹೊತ್ತಿನಲ್ಲಿ ಇದು ಮಾಮೂಲಿ ಎಂದೆನಿಸಿದರೂ ಪ್ರಸಕ್ತ ಸನ್ನಿವೇಶದಲ್ಲಿ ತಮ್ಮಲ್ಲಿರುವ ಬಂದೂಕು ಒಪ್ಪಿಸಲು ಮಲೆನಾಡಿಗರು ಮೀನಮೇಷ ಎಣಿಸುವಂತಾಗಿದೆ. ಒಮ್ಮೆ ಬರ ಮತ್ತೂಮ್ಮೆ ಅತಿವೃಷ್ಟಿಯಾದರೆ ಇದೀಗ ಕಾಡುಪ್ರಾಣಿಗಳ ಕಾಟದಿಂದ ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಈ ನಡುವೆ ತಮ್ಮಲ್ಲಿದ್ದ ಬಂದೂಕಿನಿಂದ ಹೆದರಿಸಿ ಬೆದರಿಸಿ ಕಷ್ಟಪಟ್ಟು ತಮ್ಮ ಬೆಳೆ ರಕ್ಷಿಸುಕೊಳ್ಳುತ್ತಿದ್ದ ಮಲೆನಾಡ ರೈತರ ಪಾಲಿಗೆ ಬಂದೂಕನ್ನು ಠಾಣೆಗಳಿಗೆ ಒಪ್ಪಿಸುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ.
 
ಒಂಟಿಮನೆ ಪಚೀತಿ!: ಕೃಷಿ ಕುಟುಂಬಗಳ ಪರದಾಟ ಒಂದಡೆಯಾದರೆ ಇನ್ನು ಕಾಡು ಪ್ರದೇಶದಲ್ಲಿ ಹೆಚ್ಚಿರುವ ಒಂಟಿಮನೆ ಕುಟುಂಬಗಳು ತಮ್ಮ ರಕ್ಷಣೆಗಾಗಿ ಪರವಾನಗಿ ಬಂದೂಕು ಪಡೆದುಕೊಂಡಿವೆ. ಒಂದು ಕಡೆ ತಾವು ಭಿತ್ತನೆ ಮಾಡಿದ ಭತ್ತ, ಜೋಳ, ಮೆಣಸು, ಏಲಕ್ಕಿ, ತೆಂಗು, ಅಡಕೆ ಬೆಳೆಯನ್ನು ಕಾಡುಕೋಣ, ಹಂದಿ, ಮಂಗಗಳಿಂದ ರಕ್ಷಿಸಕೊಳ್ಳಬೇಕು. ಮತ್ತೂಂದಡೆ ನಿರ್ಜನ ಪ್ರದೇಶದಲ್ಲಿರುವ ಒಂಟಿಮನೆ ರಕ್ಷಣೆಗಾಗಿ ಪಡೆದ ಬಂದೂಕನ್ನು ಸ್ಥಳೀಯ ಠಾಣೆ ಸುಪರ್ದಿಗೆ ನೀಡುವ ಅಸಹಾಯಕ ಸ್ಥಿತಿ. ಇದು ಇವರ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿದೆ.

ಪದೇ ಪದೇ ಚುನಾವಣೆ: ಮೊನ್ನೆ ಮೊನ್ನೆಯಷ್ಟೆ ನಡೆದ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಲೆನಾಡ ರೈತರು ತಮ್ಮಲ್ಲಿದ್ದ ಬಂದೂಕನ್ನು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಠೇವಣಿ ಮಾಡಿ ಒಂದೂವರೆ ತಿಂಗಳಿಗೆ ವಾಪಸ್‌ ಪಡೆದಿದ್ದರು. ಇದೀಗ ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಮತ್ತೆ ಬಂದೂಕು ಹಿಡಿದು ಠಾಣೆಗೆ ಬರುವಂತಾಗಿದೆ. 

ಈ ಚುನಾವಣೆ ಮುಗಿಯುವ ಹೊತ್ತಿಗೆ ಲೋಕಸಭಾ ಚುನಾವಣೆ ನಡೆಯಲಿದ್ದು ಮತ್ತೆ ಬಂದೂಕು ಒಪ್ಪಿಸಬೇಕಾದ ಅನಿವಾರ್ಯತೆ. ಹೀಗಾದರೆ ನಮ್ಮ ಬದುಕು ಹೇಗೆ ಸ್ವಾಮಿ. ಯಾರಲ್ಲಿ ನಮ್ಮ ಕಷ್ಟ ಹೇಳಿಕೊಳ್ಳೋದು ಎಂದು ಮಲೆನಾಡಿಗರು ಅಲವತ್ತುಕೊಳ್ಳುವಂತಾಗಿದೆ.

ಹೊಸನಗರದಲ್ಲಿ 700 ಬಂದೂಕುಗಳು! ಮಲೆನಾಡ ನಡುಮನೆಯಂತಿರುವ ಹೊಸನಗರ ತಾಲೂಕಿನ ಮೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸುಮಾರು 700 ಬಂದೂಕುಗಳಿವೆ. ಹೊಸನಗರ ಠಾಣೆಯಲ್ಲಿ 192, ರಿಪ್ಪನ್‌ಪೇಟೆಯಲ್ಲಿ 313 ಮತ್ತು ನಗರ ಠಾಣೆಯಲ್ಲಿ 197 ಬಂದೂಕುಗಳನ್ನು ರೈತರು ಹೊಂದಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ತಮ್ಮಲ್ಲಿರುವ ಬಂದೂಕುಗಳನ್ನು ಠಾಣೆಯಲ್ಲಿ ಠೇವಣಿ ಮಾಡುತ್ತಿದ್ದಾರೆ.

„ಕುಮುದಾ ಬಿದನೂರು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.