ರೈತ ವಿರೋಧಿ ನೀತಿ ವಿರುದ ಹೋರಾಟ
Team Udayavani, Nov 23, 2018, 3:40 PM IST
ಶಿಕಾರಿಪುರ: ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ರೈತರ ಸಂಕಷ್ಟ ಪರಿಹರಿಸಬೇಕಾದ ಮುಖ್ಯಮಂತ್ರಿಗಳು
ಆಡಳಿತ ದೇಗುಲವಾದ ವಿಧಾನ ಸೌಧದಲ್ಲಿ ಜನಪರವಾದ ಕೆಲಸ ಮಾಡುವುದನ್ನು ಬಿಟ್ಟು ತಾಜ್ವೆಸ್ಟಂಡ್ ಹೊಟೇಲ್ನಲ್ಲಿ ಕುಳಿತು ಆಡಳಿತ ನಡೆಸುತ್ತಿದ್ದಾರೆ. ಕೇವಲ ಅಧಿಕಾರಿಗಳ ವರ್ಗಾವಣೆ ದಂಧೆ ಮಾಡುತ್ತಿರುವ ಇವರಿಗೆ ರೈತರ ಸಂಕಷ್ಟದ ಅರಿವಾಗುತ್ತಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದ ಮಂಗಳ ಭವನದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕೃತಜ್ಞತಾ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನೀವು ಮುಖ್ಯಮಂತ್ರಿಯಾಗಿ ಬಂದ ಮೇಲೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದ್ದೀರಿ. ರೈತರ ಜೊತೆಗೆ ಚೆಲ್ಲಾಟ ನಡೆಸುತ್ತಿದ್ದೀರಿ. ಕಬ್ಬು ಬೆಳೆಯುವ ಹೋರಾಟಗಾರರಿಗೆ ಅವಮಾನ ಮಾಡಿದ್ದೀರಿ. ರೈತ ಮಹಿಳೆಗೆ 4 ವರ್ಷ
ಎಲ್ಲಿ ಮಲಗಿದ್ದೆ ಎಂದು ಕೇಳುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಮುಖ್ಯಮಂತ್ರಿಯಾದ ನೀವು ಅಪಮಾನ ಮಾಡಿದ್ದೀರಿ. ನಿಮ್ಮ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ. ಬೆಳಗಾವಿ ಅಧಿ ವೇಶನದಲ್ಲಿ ಒಳಗೂ
ಮತ್ತು ಹೊರಗೂ ಬಿಜೆಪಿ ದೊಡ್ಡಮಟ್ಟದ ಹೋರಾಟ ಮಾಡಲಿದ್ದು ಲಕ್ಷಾಂತರ ಜನ ರೈತರು ಸೇರಲಿದ್ದಾರೆ ಎಂದರು.
ರೈತರ ಸಾಲ ಮನ್ನಾ ಬಗ್ಗೆ ನಿಮ್ಮದು ಸುಳ್ಳು ಭರವಸೆ ಹಾಗೂ ಪೊಳ್ಳು ಆಶ್ವಾಸನೆಯಾಗಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡಿದ ಬಾಕಿ ಹಾಗೂ ಅದರ ಬಡ್ಡಿ ಇನ್ನೂ ಕಟ್ಟಿಲ್ಲ. ಮುಖ್ಯಮಂತ್ರಿಗಳೇ, ನಿಮ್ಮ ಸಾಲಮನ್ನಾ ಆದೇಶ ಇನ್ನೂ ಹೊರಬಂದಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಲು ರಿಸರ್ವ್ ಬ್ಯಾಂಕ್ ಒಪ್ಪುತ್ತಿಲ್ಲ. ಆ ಹಣವನ್ನು ಸರ್ಕಾರ ಕೂಡಲೇ ಪಾವತಿ ಮಾಡಬೇಕು. ಹಾಲಿನ ಪ್ರೋತ್ಸಾಹ ಧನ 330 ಕೋಟಿ ರೂ. ಬಾಕಿ ಇದೆ. ಶಾಸಕರ ಅನುದಾನ ಇನ್ನೂ ಒಂದು ರೂ. ಬಿಡುಗಡೆ ಆಗಿಲ್ಲ. ಈ ಸರ್ಕಾರ ದಿವಾಳಿಯಾಗಿದೆ. ರಾಜಕೀಯ ದೊಂಬರಾಟ ಆಡುವ ಈ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ. ಕುಮಾರಸ್ವಾಮಿ ಅತ್ಯಂತ ಬೇಜವಾಬ್ದಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳು ಬರಗಾಲಪೀಡಿತವಾಗಿವೆ. ಸರ್ಕಾರ ಆ ತಾಲೂಕುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಲ್ಲಿ ಯಾವ ಸಚಿವರು, ಸಂಸದರು ಹಾಗೂ ಶಾಸಕರು ಭೇಟಿ ನೀಡಿಲ್ಲ. ಬರಪೀಡಿತ ಜನರ ಸಮಸ್ಯೆಗಳನ್ನು ಆಲಿಸುವ ಪುರುಸೊತ್ತು ಈ ಸಚಿವರಿಗಿಲ್ಲ. ಉತ್ತರ ಕರ್ನಾಟಕದ ಜನ ನಿಮಗೆ ಮತ ನೀಡಿಲ್ಲ ಎಂದು ಪದೇ ಪದೇ ಹೇಳುತ್ತೀರಿ. ಹಾಗಾದರೆ ಕೇವಲ 37 ಜನ ಶಾಸಕರಿರುವ ನೀವು ಹೇಗೆ ಮುಖ್ಯಮಂತ್ರಿಯಾಗಿದ್ದೀರಿ ಎಂದು ಪ್ರಶ್ನಿಸಿದರು.
ನಿಮ್ಮ ರೈತ ವಿರೋಧಿ ನೀತಿಯಿಂದ ನಿಮಗೆ ಸರ್ಕಾರ ರಚಿಸಲು ಬೆಂಬಲ ನೀಡಿದ ಕಾಂಗ್ರೆಸ್ನಲ್ಲಿ ತಲ್ಲಣ ಉಂಟಾಗಿದೆ. ಈಗ ನಿಮಗೆ
ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಜಿ.ಟಿ. ದೇವೇಗೌಡರನ್ನು ಬಳಸಿಕೊಂಡಿರಿ. ಬಾದಾಮಿಯಲ್ಲಿ ಸಿದ್ದರಾಮಯ್ಯನವರು ಗೆಲ್ಲದಿದ್ದರೆ ಅವರ ಪರಿಸ್ಥತಿ ಏನಾಗುತ್ತಿತ್ತು. ನಿಮ್ಮ ಬೆಳವಣಿಗೆಗಾಗಿ ಸಮಯಕ್ಕೆ
ಸರಿಯಾಗಿ ಎಲ್ಲರನ್ನು ಬಳಸಿಕೊಳ್ಳುತ್ತೀರಿ ಎಂದು ಜೆಡಿಎಸ್ ಮುಖಂಡರ ವಿರುದ್ಧ ಹರಿಹಾಯ್ದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೊಸ ಆಯಾಮ ತಂದು ಕೊಟ್ಟವರು ಮೋದಿ. ಮುಂಬರುವ ಚುನಾವಣೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಕಟಿಬದ್ಧರಾಗಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಮುಖಂಡರಾದ ಪದ್ಮನಾಭ ಭಟ್, ಕೆ.ಎಸ್. ಗುರುಮೂರ್ತಿ, ಎಸ್. ದತ್ತಾತ್ರಿ. ತಾಪಂ ಅಧ್ಯಕ್ಷ ಕೌಲಿ ಸುಬ್ಬಣ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ