ಯುವಕನಿಗೆ ಚಾಕು ಇರಿತ
Team Udayavani, Jan 2, 2019, 6:42 AM IST
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಮದ್ಯ ಸೇವಿಸಿ ಬೈಕ್ನಲ್ಲಿ ಸುತ್ತಾಡುತ್ತಿದ್ದ ಮೂವರು ದುಷ್ಕರ್ಮಿಗಳು, ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಬಸವೇಶ್ವರ ನಗರದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾದ ಪ್ರವೀಣ್ (27) ಎಂಬಾತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರವೀಣ್ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣೆ ಪೊಲೀಸರು, ದುಷ್ಕರ್ಮಿಗಳು ಪ್ರವೀಣ್ಗೆ ಚೂರಿ ಇರಿದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪಡೆದುಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕಮಲಾನಗರ ನಿವಾಸಿ ಪ್ರವೀಣ್, ದಾಸ್ತಾನು ಸರಬರಾಜು ಅಂಗಡಿ ನಡೆಸುತ್ತಿದ್ದು, ಸೋಮವಾರ ರಾತ್ರಿ ಸ್ನೇಹಿತರ ಜತೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 12.40ರ ಸುಮಾರಿಗೆ ಸಮೀಪದಲ್ಲೇ ಇರುವ ತನ್ನ ಮನೆಗೆ ಬೈಕ್ನಲ್ಲಿ ತೆರಳುವಾಗ, ಮುಖ್ಯ ರಸ್ತೆಯಲ್ಲಿ ಮೂವರು ಯುವಕರು ಬರುತ್ತಿದ್ದ ಬೈಕ್ಗೆ, ಪ್ರವೀಣ್ ಬೈಕ್ ಡಿಕ್ಕಿಯಾಗಿದೆ. ಈ ವಿಚಾರಕ್ಕೆ ಪರಸ್ಪರ ಜಗಳವಾಗಿದ್ದು, ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ, ಯುವಕನೊಬ್ಬ ಪ್ರವೀಣ್ ತೊಡೆ, ಎದೆ, ಕೈಗೆ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ.
ಇರಿತದಿಂದ ಕೆಳಕ್ಕೆ ಬಿದ್ದ ಪ್ರವೀಣ್ ಸಹಾಯಕ್ಕಾಗಿ ಕೂಗಿಕೊಂಡ ಕೂಡಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರವೀಣ್ ಕೂಗು ಕೇಳಿದ ಸ್ಥಳೀಯರು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಕುವಿನಿಂದ ಇರಿದ ದುಷ್ಕರ್ಮಿಗಳು ಹಾಗೂ ಗಾಯಾಳು ಪ್ರವೀಣ್ಗೆ ಪರಿಚಯವಿಲ್ಲ. ಘಟನೆ ಕುರಿತು ಪ್ರವೀಣ್ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ