ಐಸಿಯು ಸೇರುವ ಸ್ಥಿತಿಯಲ್ಲಿದೆ ರಂಗಭೂಮಿ


Team Udayavani, Nov 30, 2018, 5:23 PM IST

shiv-2.jpg

ಶಿವಮೊಗ್ಗ: ಅನುದಾನಕ್ಕಾಗಿ ಹುಟ್ಟಿಕೊಳ್ಳುವ ಕಲಾ ತಂಡಗಳನ್ನು ಸ್ಥಳೀಯ ಕಲಾವಿದರು ವಿರೋಧಿಸಿದ್ದರೆ ಇಂದು ಈ ಸ್ಥಿತಿಯೇ ಬರುತ್ತಿರಲಿಲ್ಲ. ಕಲಾವಿದರು ಪ್ರತಿಭಟನಾ ನೆಲೆ ಕಳೆದುಕೊಂಡಿರುವುದರಿಂದ “ರಂಗಭೂಮಿ’ ತೀವ್ರ ನಿಗಾ ಘಟಕ (ಐಸಿಯು) ಸೇರುವ ಸ್ಥಿತಿಗೆ ತಲುಪಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಕಳವಳ ವ್ಯಕ್ತಪಡಿಸಿದರು.

 ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ರಂಗ ಉತ್ಸವ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಾವಿದರ ಅನುಕೂಲಕ್ಕಾಗಿ ಸರಕಾರ “ಅನುದಾನ’ ಯೋಜನೆ ಜಾರಿಗೆ ತಂದಿದೆ. ಆದರೆ, ಅನುದಾನಕ್ಕೋಸ್ಕರವೆಂದೇ ಹಲವು ಕಲಾತಂಡಗಳು ಹುಟ್ಟಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಏತನ್ಮಧ್ಯೆ ನಿಸ್ವಾರ್ಥ, ಲಾಭದ ಉದ್ದೇಶವಿಲ್ಲದೇ ಹಲವು ಕಲಾವಿದರು ದುಡಿಯುತ್ತಿದ್ದಾರೆ. ಅವರಿಂದಾಗಿಯೇ ರಂಗಭೂಮಿ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದರು.

ಕಲಾವಿದರು ಮತ್ತು ಪ್ರೇಕ್ಷರಿಗೆ ಜಡತ್ವ ಆವರಿಸಿದೆ. ಒಂದು ವೇಳೆ, ನಾಟಕ, ಲೇಖಕರ ವಿಚಾರಧಾರೆಗಳನ್ನು ತೀಕ್ಷ್ಣವಾಗಿ ಯೋಚಿಸಿ, ವಿಮರ್ಶಿಸಿದಲ್ಲಿ ಈ ಜಡತ್ವ ಕಣ್ಮರೆಯಾಗಲು ಸಾಧ್ಯ. ಕೇವಲ ವೈಭವೀಕರಣಕ್ಕೆ ಮಾತ್ರ ಆದ್ಯತೆ ನೀಡದೇ ಪ್ರತಿಯೊಬ್ಬರಲ್ಲಿ ಜಿಜ್ಞಾಸೆ ಹುಟ್ಟಬೇಕು ಎಂದು ಸಲಹೆ ನೀಡಿದರು. 

ರಂಗಭೂಮಿ ರಾಜಾಶ್ರಯದಲ್ಲಿ ಬೆಳೆದು ಬಂದಿಲ್ಲ. ಇದು ಜನಾಶ್ರಯದಲ್ಲಿ ಬೆಳೆದಿದೆ. ಆದರಿಂದು, ರಾಜಾಶ್ರಯದಲ್ಲೂ ಬೆಳೆಯುತ್ತಿರುವ ಕೆಲ ತಂಡಗಳಿವೆ. ಈ “ಜಡತ್ವ’ ಹೋಗಲಾಡಿಸುವುದಕ್ಕಾಗಿ ಭ್ರಷ್ಟಾಚಾರ ಕಿತ್ತೆಸೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ತಂಜಾವೂರು ಸೌತ್‌ಜೋನ್‌ ಕಲ್ಚರಲ್‌ ಸೆಂಟರ್‌ನ ಸದಸ್ಯ ತೊಟ್ಟವಾಡಿ ನಂಜುಂಡಸ್ವಾಮಿ ಮಾತನಾಡಿ, ರಂಗ ಚಟುವಟಿಕೆಗಳು ನಗರ ಕೇಂದ್ರಿತವಾದಲ್ಲಿ ರಂಗಭೂಮಿ ಬೆಳೆಯುವುದಿಲ್ಲ. ಹೀಗಾಗಿ, ಹೆಚ್ಚು ಪ್ರೇಕ್ಷಕರು, ಕಲಾ ತಂಡ ಹಾಗೂ ಕಲಾವಿದರಿರುವ ಗ್ರಾಮೀಣ ಪ್ರದೇಶದಲ್ಲಿ ಇಂತಹ ಉತ್ಸವಗಳನ್ನು ಆಯೋಜಿಸಬೇಕು ಎಂದರು.
 
ಎಲ್ಲಿ ರಂಗಭೂಮಿಗೆ ಬೆಲೆ ಇದೆಯೋ ಅಂತಹ ಕಡೆಗಳಲ್ಲಿ ಉತ್ಸವಗಳನ್ನು ಆಯೋಜಿಸಿ. ರಂಗಭೂಮಿಗೋಸ್ಕರ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿಯುವ ಸುಮಾರು ಜನ ಕಲಾವಿದರು ಹಳ್ಳಿಗಳಲ್ಲಿದ್ದಾರೆ. ಆದರೆ, ಅಂತಹವರ್ಯಾರೂ ಪ್ರಶಸ್ತಿ ಮತ್ತು ಅನುದಾನಕ್ಕೆ ಆಯ್ಕೆಯಾಗಲ್ಲ. ತಮ್ಮಷ್ಟಕ್ಕೆ ತಾವೇ ನಿರ್ಲಿಪ್ತರಾಗಿ ಅವರು ರಂಗಭೂಮಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ರಾಜ್ಯ ಸರಕಾರ ರಂಗಭೂಮಿ ಬಲಪಡಿಸುವುದಕ್ಕಾಗಿಯೇ ಹಲವು ಯೋಜನೆ ಜಾರಿಗೆ ತಂದಿದೆ. ಆದರೆ, ಎಲ್ಲೂ ಪೂರ್ಣ ಲಾಭ ಪಡೆಯಲಾಗುತ್ತಿಲ್ಲ. “ರಂಗಭೂಮಿ’ ಕುರಿತು ವಿಚಾರ ಸಂಕಿರಣ ಆಯೋಜಿಸುವುದಕ್ಕಾಗಿ ಯಾವ ವಿಶ್ವವಿದ್ಯಾಲಯಗಳು ಮುಂದೆ ಬರುತ್ತಿಲ್ಲ. ಬರುವ ದಿನಗಳಲ್ಲಿ ಭರತನಾಟ್ಯ, ಮಕ್ಕಳ ಉತ್ಸವ ಆಯೋಜಿಸುವಂತೆ ತಿಳಿಸಿದರು. 

ನೀನಾಸಂ ಮುಖ್ಯಸ್ಥ ಕೆ.ವಿ.ಅಕ್ಷರ ಉತ್ಸವಕ್ಕೆ ಚಾಲನೆ ನೀಡಿ ಎಲ್ಲ ಕಲಾ ತಂಡಗಳಿಗೆ ಶುಭ ಕೋರಿದರು. ನಾಟಕ ಅಕಾಡೆಮಿ ರಿಜಿಸ್ಟರ್‌ ಡಾ| ಕೆ.ಶೈಲಜಾ ಉಪಸ್ಥಿತರಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಎಂ.ವಿ. ಪ್ರತಿಭಾ ನಿರೂಪಿಸಿದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.