ಮರು ಶಂಕುಸ್ಥಾಪನೆಗೆ ಕಿಮ್ಮನೆ ವಿರೋಧ
Team Udayavani, Dec 23, 2018, 10:34 AM IST
ಹೊಸನಗರ: ತಾಲೂಕಿನ ಮೂಡುಗೊಪ್ಪ ನಗರ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಕಾಮಗಾರಿಗೆ ಮರು
ಶಂಕುಸ್ಥಾಪನೆ ಮಾಡುವುದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಶನಿವಾರ ಪ್ರತಿಭಟನೆ ನಡೆಸಿದರು.
ಸಮಾಜ ಕಲ್ಯಾಣ ಇಲಾಖೆ ವತಯಿಂದ ಮೂಡುಗೊಪ್ಪ ನಗರ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ರೂ.12 ಲಕ್ಷ ವೆಚ್ಚದ 4 ಅಂಬೇಡ್ಕರ್ ಭವನ ಮಂಜೂರು ಮಾಡಿಸಿ, ಶಂಕುಸ್ಥಾಪನೆ ಮಾಡಲು ಹೊರಟಿರುವುದು ಅತ್ಯಂತ ದುರಷ್ಟಕರ ಸಂಗತಿ ಎಂದು ಆರೋಪಿಸಿದರು.
ಒಟ್ಟು ನಗರ ಹಾಗೂ ಹುಂಚಾ ಹೋಬಳಿಯಲ್ಲಿ ರೂ.238 ಕೋಟಿ ವೆಚ್ಚದ 18 ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಭವನ ಮಂಜೂರು ಮಾಡಿದ್ದೇನೆ. ಇದರ ಕಾಮಗಾರಿಯ ಏಜೆನ್ಸಿ ಸಹ ನಿಗದಿಯಾಗಿ, ಆರಂಭಿಕ ಹಂತದಲ್ಲಿದೆ. ಈಗ ಅವರು ಮರಳಿ ಶಂಕುಸ್ಥಾಪನೆಗೆ ಹೊರಟರುವುದು ರಾಜಕೀಯ ದುರುದ್ದೇಶ ಆಗಿದೆ ಎಂದು ದೂರಿದರು.
ಮಂಜಾಗ್ರತಾ ಕ್ರಮವಾಗಿ ಶಂಕುಸ್ಥಾಪನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ, ರಾಜಾರಾಮ್, ಕರುಣಾಕರ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಅಮ್ರಪಾಲಿ ಸುರೇಶ, ಮಹೇಶ, ರಮೇಶ, ಚಂದ್ರಶೇಖರ ಉಡುಪ, ದುಬಾರ ತಟ್ಟಿ ಸತೀಶ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ