ವ್ಯವಹಾರವೇ ನಿಜವಾದ ಜ್ಞಾನ


Team Udayavani, Jan 5, 2019, 12:22 PM IST

shiv-1.jpg

ಶಿವಮೊಗ್ಗ: ಅಕ್ಷರ ಜ್ಞಾನವಿದೆ ಆದರೆ ಆದರೆ ವ್ಯವಹಾರ ಜ್ಞಾನ ಇಲ್ಲ ಎಂದಾದರೆ ಅಂತಹ ಜ್ಞಾನ ಗೌರವಿಸುವಂತದ್ದಲ್ಲ. ಓದುವುದು ಬರೆಯುವುದಷ್ಟೇ ಜ್ಞಾನವಲ್ಲ ವ್ಯವಹಾರವೇ ಜ್ಞಾನ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಗರದ ಎನ್‌ಇಎಸ್‌ ಮೈದಾನದಲ್ಲಿ ಶುಕ್ರವಾರ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಸ್ವ-ಸಹಾಯ ಸಂಘದ ಬಹಳಷ್ಟು ಮಹಿಳೆಯರಿಗೆ ಓದಲು ಬರೆಯಲು ಬರುವುದಿಲ್ಲ. ಆದರೆ 1 ಸಾವಿರ ಹಣ ಎಣಿಕೆ ಮಾಡಬಲ್ಲರು. ಸಂಘದ ಮೂಲಕ ವ್ಯವಹಾರ ಜ್ಞಾನ ಪಡೆದಿದ್ದಾರೆ. ಜಿಲ್ಲೆಯಲ್ಲಿ 11607 ಸಂಘಗಳಿವೆ, 105000 ಸದಸ್ಯರಿದ್ದಾರೆ. 68 ಕೋಟಿ ಉಳಿತಾಯ ಹಣ ಇದೆ. 2626 ಕೋಟಿ ವ್ಯವಹಾರ ನಡೆಸಲಾಗಿದೆ. ಇದೆಲ್ಲ ಸಾಧ್ಯವಾಗಿದ್ದು ಮಹಿಳೆಯರ ಪರಿಶ್ರಮದಿಂದ ಎಂದರು.

ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸಿನ ಮೆಟ್ಟಿಲುಗಳನ್ನು ಹತ್ತಬೇಕಿದೆ. ಯಾವುದೇ ಯೋಜನೆಗಳ ಹಣ ಸದ್ಭಳಕೆಯಾದರೆ ಯಶಸ್ಸು ಸಿಗಲಿದೆ. ಉತ್ತಮ ಯೋಚನೆ, ಯೋಜನೆ, ಕಾರ್ಯಕ್ರಮಗಳಿಂದ ಉತ್ತಮವಾದದ್ದನ್ನು ಪಡೆಯಬಹುದು. 

ಮೂಢನಂಬಿಕೆಗಳನ್ನು ಬಿಡಿ ಶುಭ ಚಿಂತನೆಗಳನ್ನು ಮಾಡಿ ಉತ್ತಮ ಆರೋಗ್ಯ ಬರುತ್ತದೆ. ಮನೆಯಲ್ಲಿರುವ ಎಲ್ಲ ಮಕ್ಕಳನ್ನು ಸಮನಾಗಿ ಕಾಣುವ ಕೆಲಸವನ್ನು ತಾಯಂದಿರು ಮಾಡಬೇಕು ಎಂದರು.

 ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌ .ಯಡಿಯೂರಪ್ಪ ಮಾತನಾಡಿ, ಪ್ರಧಾನಿ
ನರೇಂದ್ರ ಮೋದಿ ಹಾಗೂ ಡಾ| ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಒಂದೇ ಆಗಿದೆ. ಕುಡಿತ ಬಿಡಿಸುವ ಕೆಲಸ, ವಿದ್ಯಾದಾನ, ಅನ್ನ ದಾಸೋಹ, ಪ್ರಕೃತಿ ಚಿಕಿತ್ಸೆ ಹೀಗೆ ಅನೇಕ ಸಾಮಾಜಿಕ, ಕೌಟುಂಬಿಕ ಕಳಕಳಿ ಕೆಲಸ ಮಾಡುತ್ತಾ ಸರಕಾರ ಮಾಡಬೇಕಾದ ಎಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಹಿಂದಿನಿಂದಲೂ ಸ್ತ್ರೀ ಸಮಾನತೆ, ಸಬಲೀರಣಕ್ಕಾಗಿ ಸವಾಲುಗಳನ್ನು
ಎದುರಿಸಿಕೊಂಡು ಬಂದಿದ್ದೇವೆ. 12ನೇ ಶತಮಾನದಲ್ಲಿ ಬಸವಣ್ಣನವರು ಸ್ತ್ರೀ ಸಮಾನತೆಗಾಗಿ ಶರಣರು ಹೋರಾಡಿದರು. ಪ್ರಸ್ತುತ ಸ್ತ್ರೀ ಸಬಲೀಕರಣಕ್ಕೆ ವೀರೇಂದ್ರ ಹೆಗ್ಗಡೆ ಅವರು ಬಲ ತುಂಬಿದ್ದಾರೆ ಎಂದರು.

 ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಮಾತನಾಡಿ, ಹೆಣ್ಣಿನಲ್ಲಿ ಎಲ್ಲ ಕೆಲಸಗಳನ್ನು ಮಾಡುವ ಶಕ್ತಿ ಇದೆ. ಆದರೆ ಮಾರ್ಗದರ್ಶನ ತೋರುವ ಕೆಲಸವನ್ನು ಪುರುಷರು ಮಾಡುತ್ತಿಲ್ಲ. ಸ್ವಾತಂತ್ರ್ಯಾ ಬಂದು 76 ವರ್ಷವಾದರೂ ಹೆಣ್ಣಿನ ಮೇಲೆ ಶೋಷಣೆ ನಿಂತಿಲ್ಲ. ಪ್ರಸ್ತುತ ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಆದರೆ ಬದುಕುವ ಕಲೆ ಗೊತ್ತಿಲ್ಲ. ಬದುಕುವ ಕಲೆಯನ್ನು ವೀರೇಂದ್ರ ಹೆಗ್ಗಡೆ ಅವರು ಕಲಿಸುತ್ತಿದ್ದಾರೆ ಎಂದರು.

ಮಹಿಳಾ ಆಯೋಗದಲ್ಲಿ ದಾಖಲಾಗುತ್ತಿರುವ ಬಹುತೇಕ ಪ್ರಕರಣಗಳು ಫೇಸ್‌ಬುಕ್‌, ವಾಟ್ಸಾಪ್‌ಗೆ ಸಂಬಂಧಿಸಿದ್ದಾಗಿದೆ. ಗಂಡ, ಹೆಂಡತಿಯರ ನಡುವೆ ಅನುಮಾನ ಮೂಡಲು ಕಾರಣವಾಗುತ್ತಿದೆ. ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು ಎಂದರು.  ಎಲ್‌.ಎಚ್‌. ಮಂಜುನಾಥ್‌, ಮೇಯರ್‌ ಲತಾ ಗಣೇಶ್‌, ಉಪಮೇಯರ್‌ ಚನ್ನಬಸಪ್ಪ, ಪಾಲಿಕೆ ಸದಸ್ಯರಾದ ನಾಗರಾಜ್‌ ಕಂಕಾರಿ, ಯೋಗೇಶ್‌, ಸುನಿತಾ ಅಣ್ಣಪ್ಪ, ವಿಶ್ವನಾಥ್‌, ರೇಖಾ ರಂಗನಾಥ್‌, ರೇಖಾ ಚಂದ್ರಶೇಖರ್‌, ಉದಯ್‌ಕುಮಾರ್‌ ಶೆಟ್ಟಿ, ಚಂದ್ರೇಗೌಡ, ಸುರೇಶ್‌ ಬಾಳೆಗುಂಡಿ, ರಮೇಶ್‌, ಮಹಾವೀರ ಅಜ್ರಿ, ವಿಜಯ್‌ಕುಮಾರ್‌ ದಿನಕರ್‌ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.