ಕೆಎಫ್‌ಡಿ ನಿಯಂತ್ರಣಕ್ಕೆ ಕ್ರಮ


Team Udayavani, Jan 12, 2019, 10:20 AM IST

shiv-1.jpg

ಶಿವಮೊಗ್ಗ: ಜಿಲ್ಲೆಯ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಆಯ್ದ ಪ್ರದೇಶಗಳಲ್ಲಿ ಕಂಡು ಬಂದಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದರ ಜೊತೆಗೆ ಬಾಧಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ಲಸಿಕೆ ಪೂರೈಸಿ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ. ವೆಂಕಟೇಶ್‌ ಅವರು ಹೇಳಿದರು.

ಶುಕ್ರವಾರ ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಜಿಪಂ ಕೆಡಿಪಿ ಸಭೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಾಗರ ತಾಲೂಕಿನ ಅರಳಗೋಡು ಗ್ರಾಮದಲ್ಲಿ ನಿರಂತರ ಚಿಕಿತ್ಸೆ ಹಾಗೂ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದರ ಪರಿಣಾಮವಾಗಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಬಂದಿದೆ ಎಂದರು.

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದ ಇಳಿಮುಖ ಕಂಡುಬಂದಿದೆ. ಅಲ್ಲದೆ ಜಿಲ್ಲಾಡಳಿತದ ವತಿಯಿಂದ ಚಿಕಿತ್ಸೆಗೆ ಅಗತ್ಯವಿರುವ ವೆಂಟಿಲೇಟರ್‌, ಆ್ಯಂಬುಲೆನ್ಸ್‌, ಹೆಚ್ಚುವರಿ ಸಿಬ್ಬಂದಿ ಹಾಗೂ ವೈದ್ಯರ ನಿಯೋಜನೆ ಹಾಗೂ ಹೆಚ್ಚುವರಿ ವಾಹನಗಳನ್ನು ಒದಗಿಸಲಾಗಿದೆ ಎಂದರು.

ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಅಂತಹ ಪ್ರಕರಣಗಳು ಗೋಚರವಾದಲ್ಲಿ ಸಕಾಲಿಕವಾಗಿ ಚಿಕಿತ್ಸೆ ನೀಡಲು ವೈದ್ಯರ ತಂಡ ಸದಾ ಜಾಗೃತವಾಗಿರಲಿದೆ. ಜಿಲ್ಲೆಯ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ವಿಭಾಗವನ್ನು ತೆರೆಯಲಾಗಿದೆ. ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳು ಅಥವಾ ಅವರ ಸಂಬಂಧಿಕರು ದೂರವಾಣಿ ಕರೆ ಮಾಡಿ ಮುಂಚಿತವಾಗಿ ಮಾಹಿತಿ ನೀಡಿದಲ್ಲಿ ತಕ್ಷಣದ ಕ್ರಮಕ್ಕೆ ಅನುಕೂಲವಾಗಲಿದೆ ಎಂದರು.

ಈ ಹಿಂದೆ ಕಾಯಿಲೆಯ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ 63 ಜನ ರೋಗಿಗಳಲ್ಲಿ ಗುಣಮುಖರಾದ 33 ರೋಗಿಗಳನ್ನು ಸರ್ಕಾರಿ ವೆಚ್ಚದಲ್ಲಿ ಮನೆಗೆ ತಲುಪಿಸಲಾಗಿದೆ. ಅದರಲ್ಲಿ 25 ರೋಗಿಗಳನ್ನು ಮಂಗನ ಕಾಯಿಲೆ ಬಾಧಿತರಲ್ಲ ಎಂದು ಗುರುತಿಸಲಾಗಿದೆ ಎಂದ ಅವರು ಪ್ರಸ್ತುತ ಸಾಗರದಲ್ಲಿ 4, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ 1 ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಮತ್ತು ಕೋಣಂದೂರು ಪ್ರದೇಶಗಳಲ್ಲಿ ಚಿಕಿತ್ಸೆ ಹಾಗೂ ಜಾಗೃತಿಗಾಗಿ ಕಾರ್ಯಕ್ರಮ ನಿರಂತರವಾಗಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ| ದಿನೇಶ್‌ ಮಾತನಾಡಿ, ಈವರೆಗೆ ಮಂಗನಕಾಯಿಲೆಗೆ 536 ರೋಗಿಗಳು ಹೊರರೋಗಿಗಳಾಗಿ ಹಾಗೂ 102 ರೋಗಿಗಳು ಒಳರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಜ್ವರಬಾಧಿತ ಒಟ್ಟು 763ರೋಗಿಗಳಲ್ಲಿ ಶಂಕಿತ 131 ರೋಗಿಗಳನ್ನು ಪರಿಶೀಲಿಸಲಾಗಿ 17ಪ್ರಕರಣಗಳು ದೃಢಪಟ್ಟಿವೆ ಎಂದರು. ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ 6 ಜನ ಮರಣ ಹೊಂದಿರುವುದಾಗಿ ಸಭೆಗೆ ಮಾಹಿತಿ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್‌ ಮಾತನಾಡಿ, ಇತ್ತೀಚೆಗೆ ಸಾಗರ ತಾಲೂಕಿಗೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದಾಗ , ವೈದ್ಯರಲ್ಲಿಯೇ ಸರಿಯಾದ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣದಲ್ಲಿಯೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದ ಅವರು, ಅಗತ್ಯವಿರುವಲ್ಲಿ ನಿವೃತ್ತ ವೈದ್ಯರ ಸೇವೆ ಪಡೆಯಬಹುದಾಗಿದೆ. ಮೃತರ ಪ್ರತಿ ಕುಟುಂಬಕ್ಕೆ ರೂ.10.00ಲಕ್ಷ ರೂ.ಗಳ ಪರಿಹಾರ ಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಪಂ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಿದರು.

ಕಳೆದ ಸಾಲಿನಲ್ಲಿ ಅಡಕೆ ಕೊಳೆರೋಗಕ್ಕೆ ತುತ್ತಾದ ಸುಮಾರು 10,000 ಹೆಕ್ಟೇರ್‌ ಬೆಳೆಗೆ ಪರಿಹಾರಧನವಾಗಿ ರೂ.18.50ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆ ಪೈಕಿ ಈವರೆಗೆ 3.50ಕೋಟಿ ರೂ.ಬಿಡುಗಡೆಯಾಗಿದ್ದು, ಸುಮಾರು 25,000 ರೈತರಲ್ಲಿ ಸುಮಾರು 4,500 ರೈತರ ಖಾತೆಗೆ ಹಣ ಜಮಾವಣೆ ಆಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಾ| ಯೋಗೀಶ್‌ ಅವರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸುಮಂಗಳ ಕುಚಿನಾಡ, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಶಿವರಾಮೇ ಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.