ಮಂಗನ ಕಾಯಿಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ


Team Udayavani, Jan 19, 2019, 10:43 AM IST

shiv-1.jpg

ಸಾಗರ: ತಾಲೂಕಿನ ವಿವಿಧ ಭಾಗಗಳಲ್ಲಿ ಹರಡಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶುಕ್ರವಾರ ದಲಿತ ಸಂಘರ್ಷ ಸಮಿತಿ ಮತ್ತು ಸಿರಿವಂತೆ ಚಿತ್ರಸಿರಿ ಸಂಸ್ಥೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲೇಖಕ ವಿಲಿಯಂ, ತಾಲೂಕಿನ ಬೇರೆಬೇರೆ ಭಾಗದಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಗಂಭೀರ ಕ್ರಮಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು ಹಲವು ಜನರು ಮಂಗನ ಕಾಯಿಲೆಗೆ ತುತ್ತಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕಾಯಿಲೆ ಭೀತಿಯಿಂದ ಜನರು ಮನೆಯಿಂದ ಹೊರಗೆ ಬರಲು ಹೆದರುವ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಚಿಂತಕ ದೇವೇಂದ್ರ ಬೆಳೆಯೂರು ಮಾತನಾಡಿ, ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರು ದಿನೇದಿನೇ ಆಸ್ಪತ್ರೆ ಸೇರುತ್ತಿದ್ದಾರೆ. ಆದರೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಂಡಿಲ್ಲ. ಕಾಯಿಲೆಯಿಂದ ಮೃತಪಟ್ಟ ಜನರಿಗೆ ಜೀವನ ಭದ್ರತೆ ಇಲ್ಲವಾಗಿದೆ. ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿರುವವರು ಮಣಿಪಾಲ ಆಸ್ಪತ್ರೆಯಲ್ಲಿದ್ದಾರೆ. ಅವರ ಕುಟುಂಬವು ಉಪವಾಸ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಇಂತಹ ಕುಟುಂಬಗಳಿಗೆ ಆರ್ಥಿಕ ನೆರವು ಕಲ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ತಿಳಿಸಿದರು.

ಪತ್ರಕರ್ತ ಅ.ರಾ. ಶ್ರೀನಿವಾಸ್‌ ಮಾತನಾಡಿ, 1957ರಲ್ಲಿ ಕ್ಯಾಸನೂರು ಅರಣ್ಯದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದ್ದು, ಅಂದಿನಿಂದ ಇಂದಿನವರೆಗೂ ಅದಕ್ಕೆ ಔಷಧಿ ಕಂಡು ಹಿಡಿಯಲಿಲ್ಲ. ಇನ್ನಾದರೂ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶ್ವ ಆರೋಗ್ಯ ಸಂಸ್ಥೆ ಮೂಲಕ ಗಮನ ಹರಿಸಬೇಕು ಎಂದರು.

ಸಿರಿವಂತೆ ಚಿತ್ರಸಿರಿ ಸಂಸ್ಥೆ ಚಂದ್ರಶೇಖರ್‌ ಮಾತನಾಡಿ, ಈಗಾಗಲೇ ಕಾಯಿಲೆ ಉಲ್ಬಣಗೊಂಡಿದ್ದು ಮಂಗ ಸಾಯುತ್ತಿರುವ ಕಾಡಿನ ಭಾಗಗಳಲ್ಲಿ ಕೂಂಬಿಂಗ್‌ ಪ್ರಕ್ರಿಯೆ ಶೀಘ್ರಗೊಳಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾದ ಪರಮೇಶ್ವರ ದೂಗೂರು, ಮಂಜುನಾಥ ಚಿಪ್ಪಳಿ, ಪ್ರಮುಖರಾದ ರಾಮಣ್ಣ ಹಸಲರು, ಯೇಸುಪ್ರಕಾಶ್‌, ನಾಗೇಂದ್ರ ಸಾಗರ, ಶಿವಾನಂದ ಕುಗ್ವೆ, ನಾಗಪ್ಪ ಬೇಳೂರು, ಪುಟ್ಟಪ್ಪ, ಅಣ್ಣಪ್ಪ ಬಾಳೆಗುಂಡಿ, ಬಂಗಾರಪ್ಪ ಶುಂಠಿಕೊಪ್ಪ, ಸುಭಾಷ್‌, ಕೃಷ್ಣ ಗಾಡಿಗ ಇನ್ನಿತರರು ಇದ್ದರು.

ಆಗುಂಬೆ ಭಾಗದಲ್ಲಿ 4 ಮಂಗಗಳ ಶವ ಪತ್ತೆ

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಭಾಗದ ಕಾಡಿನಲ್ಲಿ ನಾಲ್ಕು ಮಂಗಗಳ ಶವ ಪತ್ತೆಯಾಗಿದೆ. ಈ ಭಾಗದ ಗ್ರಾಮಸ್ಥರು ಮಂಗನ ಕಾಯಿಲೆ ಆತಂಕಕ್ಕೆ ಒಳಗಾಗಿದ್ದಾರೆ. ಆಗುಂಬೆ ಭಾಗದ ಬಿಳಚಿಕಟ್ಟೆ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಶವವನ್ನು ಸುಟ್ಟು ಹಾಕಿದ್ದಾರೆ. ಆಗುಂಬೆ ಭಾಗದಲ್ಲಿ ಮಂಗನ ಕಾಯಿಲೆ ಹರಡದಂತೆ ಗ್ರಾಪಂ ವತಿಯಿಂದ ಜಾಗೃತಿ ಹಮ್ಮಿಕೊಳ್ಳಲಾಗಿದೆ ಎಂದು ಆಗುಂಬೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅನಿಕೇತ್‌ ತಿಳಿಸಿದ್ದಾರೆ. ಹೊಸನಗರದಲ್ಲಿ ಮಂಗನ ಶವ ಪತ್ತೆ: ಪಟ್ಟಣದ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಬಳಿ ಹಾಗೂ ಹುಲಿಕಲ್‌ ಸಮೀಪದ ಖೈರುಗುಂದಾ ಗ್ರಾಮದಲ್ಲಿ ಬಳಿ ಮಂಗನ ಶವ ಶುಕ್ರವಾರ ಪತ್ತೆಯಾಗಿದೆ. ಸ್ಥಳಕ್ಕೆ ಪಶುವೈದ್ಯರು, ಅರಣ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ತೆರಳಿ, ಪರಿಶೀಲನೆ ನಡೆಸಿ ಮಂಗನ ಶವ ದಹನ ಮಾಡಲಾಗಿದೆ. ಸಂಪೆಕಟ್ಟೆ ಹಾಗೂ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ದೊಡ್ಡಬೆಳಗೋಡು ಗ್ರಾಮದಲ್ಲಿ ಕೆಎಫ್‌ಡಿ ಲಸಿಕಾ ಶಿಬಿರ ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ರಮೇಶ ಆಚಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.