ಅಖಂಡ ರಾಷ್ಟ್ರೀಯತಾ ಮನೋಭಾವ ಅಗತ್ಯ


Team Udayavani, Feb 18, 2019, 11:07 AM IST

shiv-1.jpg

ಶಿವಮೊಗ್ಗ: ಯುವಜನತೆ ಯಾವುದೇ ಕೆಲಸ ಮಾಡುವುದಕ್ಕೂ ಮುಂಚೆ ಯೋಚಿಸಬೇಕು. ಅಖಂಡ ಭಾರತೀಯತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಏಕೆಂದರೆ ನಾವೆಲ್ಲರೂ ಮೊದಲಿಗೆ ಭಾರತೀಯರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ್‌ ಖರೆ ಅಭಿಪ್ರಾಯಪಟ್ಟರು.

ಭಾರತೀಯ ವಿಶ್ವವಿದ್ಯಾಲಯಗಳ ಸಂಘ (ಎಐಯು) ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಅಖೀಲ ಭಾರತ ಅಂತರ್‌ ವಿಶ್ವವಿದ್ಯಾಲಯ ಪುರುಷರ ಸೆಪೆಕ್‌ ಟಕ್ರಾ ಪಂದ್ಯಾವಳಿಯನ್ನು ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಜರುಗಿದ ಆತ್ಮಹತ್ಯಾ ದಾಳಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಯುವಪೀಳಿಗೆಗೆ ಅದ್ಭುತವಾದ ಸಾಮರ್ಥ್ಯವಿದೆ. ಕಠಿಣವಾದ ಕಾರ್ಯಗಳನ್ನು ಸಾಧಿಸುವ ಶಕ್ತಿಯಿದೆ. ಆದರೆ, ಈ ಸಾಮರ್ಥ್ಯವನ್ನು ಸೂಕ್ತ ರೀತಿಯಲ್ಲಿ ಬಳಸುವ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಹುತಾತ್ಮ ಸಿಆರ್‌ಪಿಎಫ್‌ ಯೋಧರ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ವಿಜ್ಞಾನ ನಿಕಾಯದ ಡೀನರಾದ ಪ್ರೊ| ವಿ ಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಐಯು ನಿರೀಕ್ಷಕ ಪ್ರೊ| ನಾಗೇಂದ್ರ ಪ್ರಸಾದ್‌ ಶರ್ಮಾ, ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಎಸ್‌. ಎಂ. ಪ್ರಕಾಶ್‌, ಅಂತರಾಷ್ಟ್ರೀಯ ಜ್ಯೂಡೋಪಟು ಕಾಂತರಾಜು ಇದ್ದರು.

 ಇದೇ ಸಂದರ್ಭದಲ್ಲಿ ಖ್ಯಾತ ಅಂತರಾಷ್ಟ್ರೀಯ ಜ್ಯೂಡೋಪಟು ಹಾಗೂ ಕುವೆಂಪು ವಿವಿಯ ಹಳೆಯ ವಿದ್ಯಾರ್ಥಿ ಕಾಂತರಾಜು ಮತ್ತು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಲಕ್ಷ್ಮಣಪ್ಪ ಅವರನ್ನು ಸನ್ಮಾನಿಸಲಾಯಿತು. 

ಪಂದ್ಯಾವಳಿ ವಿವರ: ಜ್ಞಾನಸಹ್ಯಾದ್ರಿ ಆವರಣದ ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿ ಸುವ ಒಟ್ಟು 19 ತಂಡಗಳು, 500ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಸುಮಾರು 100ಕ್ಕೂ ಹೆಚ್ಚು ಕ್ರೀಡಾ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಭಾರತದ ವಿವಿಧ ವಿವಿಗಳಿಂದ ಆಗಮಿಸುತ್ತಿದ್ದ ಕ್ರೀಡಾಪಟುಗಳು “ರೆಗು’ ಹಾಗೂ ಡಬಲ್ಸ್‌ ವಿಭಾಗದಲ್ಲಿ ಸೆಣಸಲಿದ್ದು, ಜಯ ಗಳಿಸುವ ಹುಮ್ಮಸ್ಸಿನಲಿದ್ದರು.

 ಮೊದಲ ದಿನ ‘ರೆಗು’ ವಿಭಾಗದಲ್ಲಿ ಒಟ್ಟು 24 ಪಂದ್ಯಗಳು ನಡೆದಿದ್ದು, ಅತಿಥೇಯ ಕುವೆಂಪು ವಿವಿ ಮೂರು ಪಂದ್ಯಗಳನ್ನು ಜಯಿಸಿ ಪ್ರಶಸ್ತಿ ಸುತ್ತಿನ ಲೀಗ್‌ ಹಂತಕ್ಕೆ ಪ್ರವೇಶ ಪಡೆದಿದೆ. ದಿನದ ಅಂತ್ಯದ ವೇಳೆಗೆ ಚೆನ್ನೈನ ಅಣ್ಣಾ ವಿವಿ, ಪಟಿಯಾಲಾದ ಪಂಜಾಬಿ ವಿವಿ, ಮತ್ತು ಚಂಡೀಗಢದ ಪಂಜಾಬ್‌ ವಿವಿ ಕೂಡ ಮುಂದಿನ ಹಂತಕ್ಕೆ ಪ್ರವೇಶ ಪಡೆದಿವೆ. ಡಬಲ್ಸ್‌ ವಿಭಾಗದ ಪಂದ್ಯಗಳು ನಾಳೆ ಆರಂಭವಾಗಲಿವೆ. 

ಏನಿದು ಸೆಪೆಕ್‌ ಟಕ್ರಾ?
ಮೂಲತಃ ದಕ್ಷಿಣ ಪೂರ್ವ ಏಷ್ಯಾದಲ್ಲಿ ಜನ್ಮ ತಾಳಿದ ಸೆಪೆಕ್‌ ಟಕ್ರಾ ಅಥವಾ “ಕಿಕ್‌ ವಾಲಿಬಾಲ್‌’ ಇಂಡೋನೇಶಿಯಾ, ಮಲೇಶಿಯಾ, ಸಿಂಗಪೂರ್‌ ಮತ್ತು ಥಾಯ್ಲೆಂಡ್‌ನ‌ ಜನಪ್ರಿಯ ಕ್ರೀಡೆಗಳಲ್ಲಿ ಒಂದು. ಮಲೇಶಿಯಾದ ರಟ್ಟನ್‌ ಮರದಿಂದ ತಯಾರಿಸಿದ ಬಾಲ್‌ ಅನ್ನು ಬಳಸುವ ಈ ಕ್ರೀಡೆಯಲ್ಲಿ ಮೂವರು ಆಟಗಾರರನ್ನೊಳಗೊಂಡ “ರೆಗು’ ಮತ್ತು ಇಬ್ಬರು ಆಟಗಾರರ “ಡಬಲ್ಸ್‌’ ವಿಭಾಗಗಳಲ್ಲಿ ಪಂದ್ಯಗಳು ನಡೆಯುತ್ತವೆ. 

ಆಟಗಾರರು ತಮ್ಮ ಕಾಲು, ಮಂಡಿ, ಎದೆ, ಮತ್ತು ತಲೆಯನ್ನು ಮಾತ್ರ ಕಿಕ್‌ ಮಾಡಲು ಬಳಸಬಹುದು. 2018ರಲ್ಲಿ ಇಂಡೋನೇಶಿಯಾದ ಜಕಾರ್ತಾದಲ್ಲಿ ನಡೆದ ಏಷ್ಯಾ ಕ್ರೀಡಾಕೂಟದಲ್ಲಿ ಭಾರತೀಯ ಪುರುಷರ ತಂಡ ‘ರೆಗು’ ವಿಭಾಗದಲ್ಲಿ ಮೊಟ್ಟ ಮೊದಲ ಕಂಚಿನ ಪದಕ ಪಡೆದದ್ದನ್ನು
ಇಲ್ಲಿ ಸ್ಮರಿಸಬಹುದು. 1990ರಲ್ಲಿ ಬೀಜಿಂಗ್‌ನಲ್ಲಿ ಜರುಗಿದ 11ನೇ ಏಷ್ಯಾ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಪೆಕ್‌ ಟಕ್ರಾ ಕ್ರೀಡೆಯನ್ನು ಸೇರ್ಪಡೆಗೊಳಿಸಲಾಯಿತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.