ಕುವಿವಿಯಿಂದ ಕೊರತೆ ಬಜೆಟ್‌ ಮಂಡನೆ 


Team Udayavani, Feb 20, 2019, 10:38 AM IST

20-february-13.jpg

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಮಂಗಳವಾರ ನಡೆದ ವಿದ್ಯಾ ವಿಷಯಕ ಪರಿಷತ್‌ನ ಸಾಮಾನ್ಯ ಸಭೆಯಲ್ಲಿ ಹಣಕಾಸು ಅಧಿಕಾರಿ ಪ್ರೊ| ಹಿರೇಮಣಿ ನಾಯಕ್‌ ಪ್ರಸಕ್ತ (2019-20) ಸಾಲಿನ 11.65 (1165.97 ಲಕ್ಷ) ಕೋಟಿ ರೂ. ಕೊರತೆಯ ಬಜೆಟ್‌ ಮಂಡಿಸಿದರು.

ಒಟ್ಟಾರೆ ಸ್ವೀಕೃತಿಗಳಿಂದ 132.69 (13269.36 ಲಕ್ಷ) ಕೋಟಿ ರೂ. ನಿರೀಕ್ಷಿಸಲಾಗಿದ್ದು, ವೆಚ್ಚಗಳಿಗಾಗಿ 144.35 (14435.33 ಲಕ್ಷ) ಕೋಟಿ ರೂ. ನಿಗದಿಗೊಳಿಸಲಾಗಿದೆ ಎಂದರು. ಶೈಕ್ಷಣಿಕ ವೆಚ್ಚಗಳಿಗೆ 47.48 ಕೋಟಿ ರೂ., ಆಡಳಿತಾತ್ಮಕ ವೆಚ್ಚಗಳಿಗೆ 41.67 ಕೋಟಿ ರೂ., ಪರೀûಾ ವೆಚ್ಚಗಳಿಗಾಗಿ 13 ಕೋಟಿ ರೂ., ದೂರ ಶಿಕ್ಷಣ ನಿರ್ದೇಶನಾಲಯದ ವೆಚ್ಚಗಳಿಗೆ 9 ಕೋಟಿ ರೂ., ಅಭಿವೃದ್ಧಿ ಕಾಮಗಾರಿಗಳಿಗೆ 16.31 ಕೋಟಿ ರೂ., ವಿದ್ಯಾರ್ಥಿ ಬೆಂಬಲ ಸೇವೆಗಳಿಗಾಗಿ 4.76 ಕೋಟಿ ರೂ., ಮತ್ತು ಯುಜಿಸಿ, ಭಾರತ ಸರ್ಕಾರದ ಅನುದಾನಗಳ ಅಡಿಯಲ್ಲಿ 12.11 ಕೋಟಿ ರೂ. ವೆಚ್ಚ ಮಾಡಲು ವಿಶ್ವವಿದ್ಯಾಲಯ ಉದ್ದೇಶಿಸಿದೆ ಎಂದು ತಿಳಿಸಿದರು.

2018-19ನೇ ಸಾಲಿನಲ್ಲಿ 150.75 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದ್ದು, 2018ರ ಜನವರಿ ತಿಂಗಳ ಹೊತ್ತಿಗೆ ಸರ್ಕಾರದಿಂದ ವೇತನ ಮತ್ತು ಅಭಿವೃದ್ಧಿ ಅನುದಾನಗಳಿಗೆ 39.51 ಕೋಟಿ ರೂ., ಆಂತರಿಕ ಸಂಪನ್ಮೂಲಗಳಿಂದ 45.96 ಕೋಟಿ ರೂ., ಯುಜಿಸಿ ಮತ್ತು ಇತರೆ ಸ್ವೀಕೃತಿಗಳಿಂದ 4.04 ಕೋಟಿ ರೂ., ಸೇರಿದಂತೆ ಒಟ್ಟು 128.42 ಕೋಟಿ ರೂ. ಸ್ವೀಕೃತಿಯಾಗಿರುತ್ತದೆ ಎಂದು ತಿಳಿಸಿದರು.

 2018-19ನೇ ಸಾಲಿನಲ್ಲಿ ವೆಚ್ಚಗಳಿಗೆ 153.76 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ನಿಗದಿಗೊಳಿಸಲಾಗಿದ್ದು, 2018ರ ಜನವರಿ ತಿಂಗಳ ಹೊತ್ತಿಗೆ ಅಭಿವೃದ್ಧಿ ಕಾಮಗಾರಿಗಳಿಗೆ 4.11 ಕೋಟಿ ರೂ., ಶೈಕ್ಷಣಿಕ ವೆಚ್ಚಗಳಿಗೆ 35.86 ಕೋಟಿ ರೂ., ಆಡಳಿತಾತ್ಮಕ ವೆಚ್ಚಗಳಿಗೆ 32.30 ಕೋಟಿ ರೂ.,n ವಿದ್ಯಾರ್ಥಿ ಬೆಂಬಲ ಸೇವೆಗಳಿಗೆ 3.90 ಕೋಟಿ ರೂ., ಪರೀಕ್ಷಾ ವೆಚ್ಚಗಳಿಗೆ 11.66 ಕೋಟಿ ರೂ. ಮತ್ತು ದೂರ ಶಿಕ್ಷಣಕ್ಕೆ 1.90 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ| ಜೋಗನ್‌ ಶಂಕರ್‌, ವಿಶ್ವವಿದ್ಯಾಲಯ ಬೋಧನೆ ಮತ್ತು ಸಂಶೋಧನೆಗೆ ಪೂರಕ ವಾತಾವರಣ ಕಲ್ಪಿಸಲು ಬದ್ಧವಾಗಿದೆ. ಕೇಂದ್ರ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಸಂಶೋಧನೆಯ ರ್‍ಯಾಂಕಿಂಗ್‌ನಲ್ಲಿ ಕುವೆಂಪು ವಿವಿ ಇಡೀ ರಾಜ್ಯದಲ್ಲಿಯೇ ಅಗ್ರಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತು ಅಧ್ಯಾಪಕರಿಗೆ ಪೂರಕವಾದ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಸಾಮಾನ್ಯವಾಗಿ ಮಾರ್ಚ್‌ ತಿಂಗಳಲ್ಲಿ ಬಜೆಟ್‌ ಮಂಡಿಸುವುದು ವಾಡಿಕೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಈ ವರ್ಷದ ಆಯವ್ಯಯ ಮಂಡಿಸಲಾಗುತ್ತಿದೆ ಎಂದು ಕುಲಸಚಿವ ಪ್ರೊ| ಎಚ್‌ ಎಸ್‌ ಭೋಜ್ಯಾನಾಯ್ಕ ಸಭೆಗೆ ತಿಳಿಸಿದರು.

ಪರೀಕ್ಷಾಂಗ  ಕುಲಸಚಿವ ಪ್ರೊ| ರಾಜಾ ನಾಯಕ, ವಿವಿಧ ನಿಕಾಯಗಳ ಡೀನರು, ನಾಮನಿರ್ದೇಶಿತ ಸದಸ್ಯರು ಸದಸ್ಯರು, ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ರ್‍ಯಾಂಕ್‌ ವಿಜೇತರಿಗೆ ಶುಲ್ಕ ವಿನಾಯಿತಿ
2019-20ನೇ ಸಾಲಿನಿಂದ ಮೊದಲ ರ್‍ಯಾಂಕ್‌ ವಿಜೇತ ವಿದ್ಯಾರ್ಥಿಗಳು, ಸಫಾಯಿ ಕರ್ಮಚಾರಿಗಳ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ತೃತೀಯ ಲಿಂಗಿಗಳು ಮತ್ತು ಹುತಾತ್ಮ ಸೈನಿಕರ ಮಕ್ಕಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲು ಉದ್ದೇಶಿಸಲಾಗಿದೆ ಎಂದು ಪ್ರೊ| ಹಿರೇಮಣಿ ನಾಯಕ್‌ ತಿಳಿಸಿದರು.

ಸಹ್ಯಾದ್ರಿ ವಾಣಿಜ್ಯ ಕಾಲೇಜಿಗೆ ಹೊಸ ಕಟ್ಟಡ
ಮಲೆನಾಡಿನ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಹೊಸ ಕಟ್ಟಡದ ಕಾಮಗಾರಿಯನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದು ಕುಲಸಚಿವ ಪ್ರೊ| ಎಚ್‌.ಎಸ್‌. ಭೋಜ್ಯಾನಾಯ್ಕ ತಿಳಿಸಿದರು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.