ವಿಐಎಸ್‌ಎಲ್‌ ಸಮಸ್ಯೆ ಪರಿಹಾರಕ್ಕೆ ಯತ್ನ: ಬಿವೈಆರ್‌


Team Udayavani, Feb 23, 2019, 11:28 AM IST

shiv-2.jpg

ಭದ್ರಾವತಿ: ಸಂಸದನಾಗಿ ವಿಐಎಸ್‌ಎಲ್‌ ಕಾರ್ಖಾನೆ ಮತ್ತು ಇಲ್ಲಿನ ಕಾರ್ಮಿಕರ ಉಳಿವಿಗಾಗಿ ದೇವರು ಮೆಚ್ಚುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಮಾಡುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶುಕ್ರವಾರ ವಿಐಎಸ್‌ಎಲ್‌ ಕಾರ್ಖಾನೆಯ ಪ್ರವೇಶ ದ್ವಾರದ ಸಮೀಪ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ತಿಂಗಳಿಗೆ 26 ದಿನ ಕೆಲಸ ನೀಡಬೇಕೆಂದು ಆಗ್ರಹಿಸಿ ಮತ್ತು ಕಾರ್ಖಾನೆಯ ಆಡಳಿತ ಮಂಡಳಿಯು ಗುತ್ತಿಗೆ ಕಾರ್ಮಿಕರನ್ನು ಕೀಳಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಕಾರ್ಖಾನೆಯ ಉಳಿವಿಗೆ ನಮ್ಮ ತಂದೆ ಬಿ.ಎಸ್‌.ಯಡಿಯೂರಪ್ಪ ಹಾಗೂ ನಾನು ಮತ್ತು ಇಲ್ಲಿನ ಮುಖಂಡರು ಪ್ರಾಮಾಣಿಕ ಪ್ರಯತ್ನ ಮಾಡುತ್ತಲೇ ಬಂದಿದ್ದೇವೆ ಎಂದರು. 

ಒಂದು ವಾರ ಕಾಲಾವಕಾಶ ನೀಡಿ: ಕೇಂದ್ರ ಉಕ್ಕು ಸಚಿವರೂ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಖಾನೆಯನ್ನು ಡಿಸ್‌ ಇನ್ವೆಸ್ಟ್‌ಮೆಂಟ್‌ ಪಟ್ಟಿಯಿಂದ ಕೈ ಬಿಡುವ ಭರವಸೆ ದೊರಕಿದೆ. ಕಾರ್ಖಾನೆ ಎದುರಿಸುತ್ತಿದ್ದ ಅದಿರಿನ ಗಣಿ ಸಮಸ್ಯೆ ಸಹ ನಿವಾರಣೆಯಾಗಿದೆ. ಪಕ್ಷದ
ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೂ ಸಹ ಚರ್ಚಿಸಿದ್ದೇನೆ. ಆದರೆ ಆ ಪ್ರಯತ್ನಗಳೆಲ್ಲಾ ನಿರೀಕ್ಷಿತ ಅವಧಿಯೊಳಗೆ ಫಲಕಾರಿಯಾಗುತ್ತಿಲ್ಲ.  ಅಲ್ಲಿಯವರೆಗೆ ನೀವು ಕಾರ್ಮಿಕರು ಕಾಯುವ ಪರಿಸ್ಥಿತಿ ಇಲ್ಲ. ಹಾಗಾಗಿ ನನಗೆ ಒಂದು ವಾರ ಕಾಲಾವಕಾಶ ನೀಡಿ. ಸಂಬಂಧಪಟ್ಟ ಅಧಿಕಾರಿ, ಮಂತ್ರಿಗಳ ಬಳಿ ಈ ಬಗ್ಗೆ ಮತ್ತೂಮ್ಮೆ ಮಾತನಾಡಿ ಸಮಸ್ಯೆಯ ತೀವ್ರತೆ ಬಗ್ಗೆ ತಿಳಿಸುತ್ತೇನೆ ಎಂದರು.

ಚುನಾವಣೆ ಬಹಿಷ್ಕರಿಸುವುದು ನಿಮಗೆ ಬಿಟ್ಟ 
ವಿಷಯ: ಧರಣಿ ನಿರತ ಗುತ್ತಿಗೆ ಕಾರ್ಮಿಕರು ಸಂಸದರು ಮಾತನಾಡುವ ಮುನ್ನ ನಮ್ಮ ಸಮಸ್ಯೆ ಪರಿಹರಿಸಲು ಸಾಧ್ಯವಾಗುವುದಾದರೆ ಭಾಷಣ ಮಾಡಲಿ. ಇಲ್ಲವಾದರೆ ಮಾಡಬೇಡಿ. ನಮ್ಮ ಸಮಸ್ಯೆ ಬಗೆಹರಿಸಿದ್ದರೆ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ನಾವು ಮತದಾನವನ್ನು
ಬಹಿಷ್ಕರುತ್ತೇವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ನಿಮ್ಮ ನೋವು ನನಗೆ ಅರ್ಥವಾಗುತ್ತದೆ. ನಾನು ದೇವರು ಮೆಚ್ಚುವಂತೆ ಪ್ರಯತ್ನ ಮಾಡಿದ್ದೇನೆ. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ನೀವು ಮತದಾನ ಬಹಿಷ್ಕರಿಸುವುದರಿಂದ ನಿಮಗೆ ನ್ಯಾಯ ದೊರಕುತ್ತದೆ ಎಂದು ಅನಿಸಿದರೆ ಹಾಗೆಯೇ ಮಾಡಿ ಎಂದರು.

ಗುತ್ತಿಗೆ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಚಂದ್ರಹಾಸ ಮಾತನಾಡಿ, ಸಂಸದ ರಾಘವೇಂದ್ರ ಅವರು ಇದುವರೆಗೆ ಮಾಡಿರುವ ಪ್ರಯತ್ನ ನಮಗೆ ತಿಳಿದಿದೆ. ಆದರೆ ಅದು ಫಲಕಾರಿಯಾಗದಿರುವುದರಿಂದ ಹೋರಾಟ ಅನಿವಾರ್ಯವಾಗಿದೆ. ಮಾ. 1ರಿಂದ ಯಾರೂ ಕೆಲಸಕ್ಕೆ ಹೋಗುವುದಿಲ್ಲ ಎಂದರು. 

ಗುತ್ತಿಗೆ ಕಾರ್ಮಿಕರ ಸಂಘದ ಉಪಾಧ್ಯಕ್ಷ ರಾಕೇಶ್‌ ಮಾತನಾಡಿ, ಕೂಡಲೇ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಮಾತನಾಡಿ ತಿಂಗಳಿಗೆ 26 ದಿನ ಕೆಲಸ ನೀಡಬೇಕು. ಗುತ್ತಿಗೆ ಕಾರ್ಮಿಕರನ್ನು ಜೀತದಾಳಿನಂತೆ ನಡೆಸಿಕೊಳ್ಳುವ ಪರಿಪಾಠ ಕೊನೆಯಾಗಬೇಕು ಎಂದರು. 

ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಜಿ. ಆನಂದ ಕುಮಾರ್‌, ಗ್ರಾಮಾಂತರ ಅಧ್ಯಕ್ಷ ಮಂಗೋಟೆ ರುದ್ರೇಶ್‌, ಜಿಲ್ಲಾ ಕಾರ್ಯದರ್ಶಿ ಧರ್ಮಪ್ರಸಾದ್‌,ಪ್ರವೀಣ್‌ ಪಟೇಲ್‌ ಇದ್ದರು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.