ವೇದವ್ಯಾಸರ ಹೆಸರಿನಲ್ಲಿ ವಿವಿ ಸ್ಥಾಪನೆಯಾಗಲಿ: ವಿದ್ಯೇಶತೀರ್ಥ ಶ್ರೀ


Team Udayavani, Mar 8, 2019, 9:30 AM IST

cta-4.jpg

ಸಾಗರ: ವಿಶ್ವಕ್ಕೆ ಧಾರ್ಮಿಕ ಸಂಗತಿಯಲ್ಲಿ ಹೊಸ ಬೆಳಕು, ಹೊಳಹು ನೀಡಿ ಮಹಾಭಾರತವನ್ನು ರಚಿಸಿಕೊಟ್ಟ ವಿಶ್ವಗುರು ವೇದವ್ಯಾಸರ ಹೆಸರಿನಲ್ಲಿ ಭಾರತದಲ್ಲಿ ಒಂದೂ ವಿಶ್ವವಿದ್ಯಾಲಯವಿಲ್ಲ. ಈಗಲಾದರೂ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿತವಾಗಲಿ ಎಂದು ಉಡುಪಿಯ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಶ್ರೀಪಾದಂಗಳು ಹೇಳಿದರು.

ನಗರದಲ್ಲಿ ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಸಂಚಾರದಲ್ಲಿರುವ ಶ್ರೀಗಳು ಗುರುವಾರ ಭಕ್ತರನ್ನುದ್ದೇಶಿಸಿ ಮಾತನಾಡಿದರು. ನಿರಂತರವಾಗಿ ಜ್ಞಾನಸತ್ರಗಳು ನಡೆಯಬೇಕು. ಭಾಗವತವನ್ನು ತಿಳಿದುಕೊಳ್ಳುವ ಮನಸ್ಥಿತಿ ಎಲ್ಲರಲ್ಲಿಯೂ ಬೆಳೆಯಬೇಕು. 

ಅಂತರಂಗದ ಶುದ್ಧಿಯಾಗದೆ ಜ್ಞಾನದ ಹಾಲು ಒಳಗಿಟ್ಟುಕೊಂಡರೆ ಏನೂ ಪ್ರಯೋಜನವಿಲ್ಲ. ಹಾಗೆಯೇ ಭಕ್ತಿಯಿಲ್ಲದ ಭಗವಂತನ ಪ್ರಾರ್ಥನೆ ಎಷ್ಟು ಸಾರಿ ಮಾಡಿದರೂ ಏನೂ ಪ್ರಯೋಜನವಾಗುವುದಿಲ್ಲ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು. ಈ ವಿಚಾರದಲ್ಲಿ ಯೋಚನೆ ಮಾಡುವ ಪ್ರಶ್ನೆ ಇಲ್ಲ. ಇದು ಅಖಂಡ ಭಾರತದ ಸನಾತನ ಧರ್ಮದ ಪ್ರತೀಕ. ರಾಮಾಯಣ ಮತ್ತು ಮಹಾಭಾರತ ಪ್ರಪಂಚಕ್ಕೆ ನೀಡಿದ ಜ್ಞಾನದ ಕೊಡುಗೆ ಶ್ರೇಷ್ಠಮಟ್ಟದ್ದು ಎಂದರು.

ಭಕ್ತಿಯಿಂದ ಮುಕ್ತಿ ಕಾಣಬೇಕು. ಮನಃ ಶುದ್ಧಿಗೆ ಭಾಗವತದ ಮೊರೆ ಹೋಗಬೇಕು. ದೇವರ ಸಾಕ್ಷತ್ಕಾರವಾಗಬೇಕಾದರೆ ನಿರ್ಮಲವಾದ ಭಕ್ತಿ ಮುಖ್ಯ. ಗೊತ್ತಿಲ್ಲದೆ ಇರುವ ವಿಚಾರವನ್ನು ಇನ್ನೊಬ್ಬರಲ್ಲಿ ತಿಳಿದುಕೊಳ್ಳಬೇಕು ಎನ್ನುವ ಮನೋಚಿಂತನೆ ನಮ್ಮದಾಗಬೇಕು. ಇಲ್ಲವಾದರೆ ಅದು ಅಹಂಕಾರವಾಗಿಬಿಡುತ್ತದೆ. ಕೃಷ್ಣ ಅಂತರಂಗದ ಶುದ್ಧಿ, ಜ್ಞಾನದ ಅರಿವು, ಭಕ್ತಿಯಿಂದ ಮುಕ್ತಿ ಕಾಣುವುದು ಎಲ್ಲವನ್ನೂ ನಮಗೆ ಪರಿಚಯಿಸಿದ್ದಾನೆ ಎಂದರು.

ಭೂಮಿಯಲ್ಲಿ ಆನಂದದ ಅರಿವಾಗಬೇಕಾದರೆ ಆಧ್ಯಾತ್ಮದ ಅನುಸಂಧಾನವಾಗಬೇಕು. ಸ್ವಾರ್ಥದ ಮೂಸೆಯಿಂದ ಹೊರಬಂದು ಸಂಸ್ಕಾರಯುತರಾಗಿ ಜೀವನವನ್ನು ಭಕ್ತಿಮಾರ್ಗದೆಡೆಗೆ ತಿರುಗಿಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿ. ಬದುಕಿನಲ್ಲಿ ಎಲ್ಲವನ್ನೂ ಗಳಿಸುತ್ತೇವೆ. ಮುಂದೇನು ಎಂದರೆ ಯಾರಲ್ಲೂ ಉತ್ತರವಿಲ್ಲ. ಉತ್ತರದಾಯತ್ವವಿರುವುದು ಮುಕ್ತಿಯಲ್ಲಿ ಮಾತ್ರ. ಹಾಗಾಗಿ ಪ್ರತಿಯೊಬ್ಬರೂ ಭಗವಂತನನ್ನು ನೆನೆಯುವ ಚಿಂತನೆ ಮಾಡಬೇಕು ಎಂದರು.

ರಘುನಂದನ ಪುರೋಹಿತ್‌ ದಂಪತಿ ಶ್ರೀಗಳಿಗೆ ಗೌರವ ಸಮರ್ಪಿಸಿದರು. ಮಾಧ್ವ ಸಂಘದ ಅಧ್ಯಕ್ಷ ಡಾ| ಗುರುರಾಜ ಕಲ್ಲಾಪುರ, ಕಾರ್ಯದರ್ಶಿ ಅನಂತರಾವ್‌, ಶ್ರೀಶಾಚಾರ್‌, ವೈ. ಮೋಹನ್‌, ಆನಂದ ಕಲ್ಯಾಣಿ, ರೇವತಿ ಹತ್ವಾರ್‌, ರಮಾದೇವಿ, ಮಂಜುಳಾ, ಭಾರತಿಬಾಯಿ, ಸುಮಿತ್ರಾಬಾಯಿ, ಲಕ್ಷ್ಮೀ, ಸುಮ, ಭಾಗ್ಯಲಕ್ಷ್ಮೀ, ಕೆ.ಬಿ. ಕಲಘಟಗಿ, ವೆಂಕಟೇಶ ಕಟ್ಟಿ, ರಾಘವೇಂದ್ರ, ವಾದಿರಾಜ, ನಿರ್ಮಲ ಇತರರು ಇದ್ದರು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.