ಮೆಸ್ಕಾಂ ಕ್ರಮಕ್ಕೆ ಕಾಂಗ್ರೆಸ್ ಆಕ್ರೋಶ
Team Udayavani, Mar 17, 2019, 8:00 AM IST
ಸಾಗರ: ತಾಲೂಕಿನ ಗ್ರಾಮೀಣ ಭಾಗದ ರೈತರು ಮತ್ತು ವಿದ್ಯಾರ್ಥಿಗಳ ಸ್ಥಿತಿ ವಿದ್ಯುತ್ ಇಲ್ಲದೆ ಅತ್ಯಂತ ಶೋಚನೀಯವಾಗಿದೆ. ಮುಂದಿನ ಎಂಟು ದಿನಗಳೊಳಗೆ ಸರ್ಕಾರ ನಿಗದಿಪಡಿಸಿದ ವಿದ್ಯುತ್ ನೀಡದೆ ಹೋದಲ್ಲಿ ಮೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಎಚ್ಚರಿಕೆ ನೀಡಿದರು.
ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರ ಗ್ರಾಮೀಣ ಪ್ರದೇಶಗಳಿಗೆ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಬೇಕು ಎನ್ನುವ ಕಾಯ್ದೆ ಜಾರಿಗೆ ತಂದಿದೆ. ಆದರೆ ಮೆಸ್ಕಾಂ ತಾಲೂಕಿನ ಕಸಬಾ, ಭಾರಂಗಿ, ಆನಂದಪುರ, ಆವಿನಹಳ್ಳಿ ಸೇರಿದಂತೆ ಎಲ್ಲ ಭಾಗಗಳಿಗೂ ಕನಿಷ್ಟ ಎರಡು ಗಂಟೆ ವಿದ್ಯುತ್ ನೀಡುತ್ತಿಲ್ಲ. ರೈತರು ಪಂಪ್ಸೆಟ್ ನಂಬಿಕೊಂಡು ಬೆಳೆ ಬೆಳೆದಿದ್ದು, ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹಾಯಿಸಲಾಗದೆ ಅದು ಒಣಗಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಇದು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿದೆ. ವಿದ್ಯಾರ್ಥಿಗಳು ರಾತ್ರಿ ಹೊತ್ತು ಕುಳಿತುಕೊಂಡು ಓದಲು ಮೆಸ್ಕಾಂ ಶಾಪವಾಗಿ ಪರಿಣಮಿಸಿದ್ದು, ವಿದ್ಯುತ್ ಅಸಮರ್ಪಕತೆಯಿಂದ ವಿದ್ಯಾರ್ಥಿಗಳು ಓದಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮೆಸ್ಕಾಂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಸಮರ್ಪಕ ವಿದ್ಯುತ್ ನೀಡಲು ಮನವಿ ಮಾಡಿದ್ದರೂ ಅವರು ಕೇಳುವ ಸ್ಥಿತಿಯಲ್ಲಿ ಇಲ್ಲ. ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಕೊಟ್ಟರೆ ಮೆಸ್ಕಾಂ ವಿದ್ಯುತ್ ನೀತಿ ವಿರುದ್ಧ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಮುಖರಾದ ಜಿ.ಕೆ. ಭೈರಪ್ಪ, ಎನ್. ಲಲಿತಮ್ಮ, ಆನಂದ ಭೀಮನೇರಿ, ರವಿ ಜಂಬಗಾರು ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…