ಸರ್ಕಾರಿ ಯೋಜನೆಗಳ ಸದುಪಯೋಗಕ್ಕೆ ಕರ


Team Udayavani, Mar 18, 2019, 9:52 AM IST

shiv-1.jpg

ಸೊರಬ: ಕೃಷಿ ಕ್ಷೇತ್ರ ಉತ್ತೇಜಿಸುವ ಸಲುವಾಗಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದು ಕೃಷಿ ಅಧಿಕಾರಿ ಕಾಂತರಾಜ್‌ ಹೇಳಿದರು.

ತಾಲೂಕಿನ ದೇವತಿಕೊಪ್ಪ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್‌ ಹಾಗೂ ದೇವತಿಕೊಪ್ಪ ಗ್ರಾಮ ಸಮಿತಿ ವತಿಯಿಂದ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಸಾಹಿತ್ಯ ಬಗ್ಗೆ ಶುಕ್ರವಾರ ಸಂಜೆ ಏರ್ಪಡಿಸಿದ್ದ ದತ್ತಿನಿ  ಉಪನ್ಯಾಸ, ನಿವೃತ್ತ ಸೈನಿಕರಿಗೆ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಕೃಷಿ ಇಲಾಖೆಯ ಕಾರ್ಯಕ್ರಮಗಳು ಹಾಗೂ ಸವಲತ್ತುಗಳ ಬಗ್ಗೆ ಉಪನ್ಯಾಸ ನೀಡಿದರು. 

ಸರ್ಕಾರದ ಸವಲತ್ತುಗಳನ್ನು ಎಲ್ಲಾ ರೈತರು ಪಡೆಯಲು ಮುಂದಾಗಬೇಕು. ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೆಣಬು ಇತ್ಯಾದಿ ವಿತರಿಸಲಾಗುತ್ತಿದೆ. ಕೂಲಿಯಾಳುಗಳ ಕೊರತೆಯನ್ನು ಯಾಂತ್ರೀಕರಣ ಯೋಜನೆ ನಿಭಾಯಿಸಿದೆ. ಈ ಯೋಜನೆಯಿಂದ ದೇಶದಲ್ಲಿ 284 ಮಿಲಿಯನ್‌ ಟನ್‌ ಆಹಾರ ಸಂಗ್ರಹಿಸಲು ಸಾಧ್ಯವಾಗಿದೆ. ತಾಲೂಕಿನ ಕೃಷಿ ಭೂಮಿಯಲ್ಲಿ ಜಿಂಕ್‌ ಹಾಗೂ ಬೋರಾನ್‌ ಅಂಶ ಕಡಿಮೆಯಿದೆ. ಕೃಷಿ ಭಾಗ್ಯ ಯೋಜನೆಯಲ್ಲಿ 181 ಕೃಷಿಹೊಂಡ ನಿರ್ಮಿಸಲಾಗಿದೆ. ರೈತರು ಕೃಷಿ ಕ್ಷೇತ್ರವನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದರು.

ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷ ಹಾಗೂ ಕನ್ನಡ ಉಪನ್ಯಾಸಕ ಎಸ್‌.ಎಂ.ನೀಲೇಶ್‌ ಜನಪದ ಕೃಷಿಯ ಮೇಲೆ ಯಾಂತ್ರೀಕರಣದ ಪ್ರಭಾವದ ಬಗ್ಗೆ ಉಪನ್ಯಾಸ ನೀಡಿ, ಆಧುನೀಕರಣ, ಜಾಗತೀಕರಣ ಹಾಗೂ ಯಾಂತ್ರೀಕರಣ ಗ್ರಾಮೀಣ ಹಾಗೂ ರೈತ ಸಂಸ್ಕೃತಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿವೆ. ಕೃಷಿ ಕ್ಷೇತ್ರದ ಮೇಲಾದ ಯಾಂತ್ರೀಕರಣದ ಪ್ರಭಾವದಿಂದ ರೈತ ಸಂಸ್ಕೃತಿ ಬುಡಮೇಲಾಗಿವೆ. ಬೆಳ್ಳುಂಬು, ಕಣಬ್ಬ, ಗುತ್ತಿಗೆಗದ್ದೆ ಹಬ್ಬಗಳ ಜತೆಗೆ ನೇಗಿಲು, ನೊಗ, ಕೊರಡು, ಕುಂಟೆಗಳು ಕಣ್ಮರೆಯಾಗಿವೆ. ಇಂದು ಸಣ್ಣ ಪ್ರಮಾಣದ ರೈತರಿಗೂ ಕೂಲಿಯಾಳುಗಳ ಕೊರತೆ ಎದುರಾಗಿ ಅನಿವಾರ್ಯವಾಗಿ ಯಾಂತ್ರೀಕರಣಕ್ಕೆ ಮಾರುಹೋಗಿ ಆರ್ಥಿಕ ಹೊರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೂಲಿಯಾಳುಗಳ ಮೇಲೆ ಯಾಂತ್ರೀಕರಣ ವ್ಯತಿರಿಕ್ತ ಪರಿಣಾಮ ಬೀರಿದ್ದರಿಂದ ಉದ್ಯೋಗ ಅರಸಿ ಗುಳೇಹೋಗುವ ದುಸ್ಥಿತಿ ಎದುರಾಗಿದ್ದು ದುರಂತ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಅಧ್ಯಕ್ಷ ಹಾಲೇಶ್‌ ನವುಲೆ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯದ ಜತೆಗೆ ನೆಲ, ಜಲ, ರೈತರು ಹಾಗೂ ಸೈನಿಕರ ಬಗ್ಗೆ ಗೌರವ ಹಾಗೂ ಒತ್ತು ನೀಡುತ್ತಿದೆ. ರೈತರು ಕೃಷಿ ಚಟುವಟಿಕೆಗಳಲ್ಲಿ ಯಶಸ್ಸು ಹೊಂದಲು ಮಾರ್ಗದರ್ಶನದ ಅಗತ್ಯವಿದೆ ಎಂದರು.
 
ಗ್ರಾಮ ಸಮಿತಿ ಅಧ್ಯಕ್ಷ ಜಲದಿ ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಸಾಪ ಕಾರ್ಯದರ್ಶಿ ದೀಪಕ್‌ ಧೋಂಗಡೇಕರ್‌, ರೋಟರಿ ಕ್ಲಬ್‌ ಸದಸ್ಯ ರಾಜು ಹಿರಿಯಾವಲಿ, ಸಂಜಯ್‌, ನಿಂಗಪ್ಪ, ಈರಪ್ಪ ಗಣತಿ, ಗಣಪತಿ ತಡಗಣಿ, ಗಣಪತಿ ಬಣಗಾರ್‌, ಅಣ್ಣಪ್ಪ, ರಾಜು ಇತರರಿದ್ದರು.

ಕಲಾವಿದರಾದ ಚಂದ್ರಪ್ಪ ಅತ್ತಿಕಟ್ಟಿ, ಅಶೋಕ್‌ ತತ್ತೂರು, ಸೋಮಶೇಖರ್‌ ಹಾಗೂ ಬಸವಂತಪ್ಪ ಜನಪದ ಗಾಯನ ನೆರವೇರಿಸಿದರು. ವೇದಿಕೆ ವತಿಯಿಂದ ನಿವೃತ್ತ ಸೈನಿಕ ಆನಂದಪ್ಪ, ಪ್ರಗತಿಪರ ರೈತರಾದ ಗಣತಿ ಈರಪ್ಪ, ಜಲದಿ
ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.