ದಾರಿ ತಪ್ಪಿಸುತ್ತಿರುವ ದೃಶ್ಯ ಲೋಕ


Team Udayavani, Aug 2, 2018, 12:30 AM IST

20.jpg

ಸಿನೆಮಾ, ಟಿ.ವಿ. ಮಾಧ್ಯಮಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆನ್ನುವುದು ನಿಜ. ಆದರೆ ಅದಕ್ಕಿಂತಲೂ ಅವಕ್ಕೆ ಬಹುಮುಖ್ಯವಾಗಿ ಸಮಾಜದ ಹಿತ ಮುಖ್ಯವಾಗಬೇಕಲ್ಲವೇ? ಹಣಗಳಿಕೆಯ ಹಪಾಹಪಿಯಲ್ಲಿ ನೈತಿಕತೆಯ ಗೆರೆಯನ್ನು ದಾಟಿ ಮುಂದೋಡುವುದು ಎಷ್ಟು ಸರಿ? 

ಈಗೀಗ ಟೆಲಿವಿಷನ್‌ ಮತ್ತು ಸಿನೆಮಾ ಮಾಧ್ಯಮಗಳು ತಮ್ಮ ಮೂಲ ಉದ್ದೇಶವನ್ನೇ ಮರೆತು ಕೇವಲ ವಾಣಿಜ್ಯೋದ್ದೇಶ ಕ್ಕಾಗಿಯೇ ಅಸ್ತಿತ್ವದಲ್ಲಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಬಹು ಭಾಷೆಗಳ ನೆಲೆವೀಡಾಗಿರುವ ಭಾರತದಂಥ ದೇಶದ ವಿಶಾಲ ಪರಿಸರದಲ್ಲಿ ಒಂದೊಂದು ಭಾಷೆಗೂ ಪ್ರತ್ಯೇಕ ವಾಹಿನಿಗಳು(ಸುದ್ದಿ-ಸೀರಿಯಲ್‌) ಮತ್ತು ಸಿನೆಮಾ ಉದ್ಯಮಗಳಿವೆ. ಈ ಬೆಳವಣಿಗೆ ಸಹಜವೂ ಹೌದು. ಆದರೆ ಹೀಗೆ ಹುಟ್ಟಿಕೊಂಡ ಉದ್ಯಮವು ಅನಾರೋಗ್ಯಕರ ಸ್ಪರ್ಧೆಗೆ ಬಿದ್ದು ಅಪಾಯಕಾರಿ ಸನ್ನಿವೇಶಗಳನ್ನು ಸೃಷ್ಟಿಸುತ್ತಲೇ ಮುಂದೆ ಸಾಗಿದೆ. ಅಂತರ್ಜಾಲದ ವೇಗದ ಬೆಳವಣಿಗೆಯ ಹೊರತಾಗಿಯೂ  ದೇಶದಲ್ಲಿ ಈಗಲೂ ಬೇರುಮಟ್ಟದಲ್ಲಿ ಸಿನಿಮಾ ಮತ್ತು ಕಿರುತೆರೆ ಅತ್ಯಂತ ಯಶಸ್ವಿ ಮನೋರಂಜನಾ ಮಾಧ್ಯಮಗಳಲ್ಲೊಂದಾಗಿವೆ. ಇತರೆ ಸಂಪರ್ಕ ಮಾಧ್ಯಮಗಳಾದ ದಿನಪತ್ರಿಕೆ, ಆಕಾಶವಾಣಿಗಳಿಗಿಂತ ಹೆಚ್ಚು ಪ್ರಭಾವಶಾಲಿಗಳಿವು.  

ಆದರೆ ಇವುಗಳು ತಮ್ಮ ಮೂಲ ಉದ್ದೇಶವನ್ನು ಮರೆತು ಯಾವಾಗ ಹಣ ಮಾಡುವ ಪೈಪೋಟಿಗೆ ಬಿದ್ದವೋ ಆಗಲೇ ಅಪಾಯ ಆರಂಭವಾಗಿದ್ದು. ಇಂದು ಟೆಲಿವಿಷನ್‌, ಸಿನೆಮಾ, ನ್ಯೂಸ್‌ ಚಾನೆಲ್‌ಗ‌ಳ ಹಾವಳಿ ಎಷ್ಟಾಗಿಬಿಟ್ಟಿದೆಯೆಂದರೆ ಜನರನ್ನು ಸೆಳೆಯುವುದಕ್ಕಾಗಿ ಇವು ನೈತಿಕತೆಯ ಗೆರೆಯನ್ನು ದಾಟಿ ತುಂಬಾ ದೂರ ಮುನ್ನಡೆದುಬಿಟ್ಟಿವೆ. ಎಲ್ಲಾ ಕಾಲಕ್ಕೂ ಮನುಷ್ಯನ ನಡವಳಿಕೆಯನ್ನು ನಿರ್ಧರಿಸು ವುದರ‌ಲ್ಲಿ ಕಾಮದ ಪಾತ್ರ ಬಹು ದೊಡ್ಡದು ಎನ್ನುತ್ತಾನೆ ಖ್ಯಾತ ಮನಃಶಾಸ್ತ್ರಜ್ಞ ಸಿಗೆ¾ಂಡ್‌ ಫ್ರಾಯ್ಡ. ಆತನ ಪ್ರಕಾರ ಮಗು ವೊಂದರಲ್ಲಿ ಲೈಂಗಿಕ ತಿಳಿವಳಿಕೆ 5 ವರ್ಷದಿಂದ 13 ವರ್ಷದವರೆಗೆ ರೂಪುಗೊಳ್ಳುತ್ತಾ ಸಾಗುತ್ತದೆ. ಇದು ಮೊದಲು ಮೊಗ್ಗಿನಂತಿದ್ದು ಹರೆಯಕ್ಕೆ ಕಾಲಿಡುತ್ತಿದ್ದಂತೆ ಅರಳಿ ಹೂವಾಗಿ ಬಿಡುತ್ತದೆ. ಆಗ ಈ ಮುಕ್ತ ಮನಸ್ಸುಗಳ ಮೇಲೆ ಲೈಂಗಿಕ ಅಕರ್ಷಣೆ ಸಹಜವಾಗಿ ಮೂಡುತ್ತದೆ. ವಸ್ತುಸ್ಥಿತಿ ಹೀಗಿರು  ವಾಗ… ಆ ಮನಸ್ಸುಗಳನ್ನು ಅಡ್ಡದಾರಿಗೆಳೆಯುವುದಕ್ಕೇನೋ ಎಂಬಂತೆ ತಯಾರಾಗಿ ನಿಂತಿರುತ್ತವೆ ಈ ದೃಶ್ಯ ಮಾಧ್ಯಮಗಳು. ಇಂದು ಸಿನೆಮಾ, ಸೀರಿಯಲ್‌ ಅಥವಾ ಸುದ್ದಿ ವಾಹಿನಿಗಳೂ ಕೂಡ ಅಶ್ಲೀಲ ದೃಶ್ಯಾವಳಿಗಳನ್ನು ಬಿತ್ತರಿಸುತ್ತಾ ಹರೆಯದ ಮನಸ್ಸುಗಳನ್ನು ಚಂಚಲಗೊಳಿಸುತ್ತಿವೆ. ಇಂಥದ್ದನ್ನೆಲ್ಲ ನೋಡಿ ದಾಗ ಯುವ ಮನಸ್ಸು ನಿಯಂತ್ರಣಕ್ಕೆ ಬರಲಾಗದೇ ಅವಾಂತ ರಗಳಿಗೆ ಕಾರಣವಾಗಬಹುದು. 

ಅಮೆರಿಕದ ಸಮಾಜಶಾಸ್ತ್ರಜ್ಞ ಎಲಿಯಟ್‌, ಮಾನವ ತನ್ನ ವಿಶ್ರಾಂತ ಸಮಯದಲ್ಲಿ ದೇಹಕ್ಕೆ ಮನಸ್ಸಿಗೆ ಕೊಡುವ ಒಂದು ನೂತನ-ವಿಶೇಷ ಅನುಭವವೇ ಮನೋರಂಜನೆ ಎಂದಿದ್ದರು. ಆದರೆ ಇದೀಗ ಇದು ವಿಷಮಯ ಅನುಭವವಾಗಿ ಬದಲಾ ಗುತ್ತಿದೆ. ಲೈಂಗಿಕತೆ, ಕೊಲೆ, ಹಿಂಸೆಯಂಥ ಘಟನೆಗಳನ್ನು ವೈಭವೀಕರಿಸಿ ಯುವಮನಸ್ಸುಗಳ ಮೇಲೆ ದೃಶ್ಯ ಪ್ರಪಂಚ ಅತಿ ಕೆಟ್ಟ ಪರಿಣಾಮ ಬೀರುತ್ತಿದೆ. 

ಅಶ್ಲೀಲತೆ ಮತ್ತು ಹಿಂಸಾತ್ಮಕ ದೃಶ್ಯಗಳು ಕೇವಲ ಯಾವುದೇ ಒಂದು ಭಾಷೆಯ ಮಾಧ್ಯಮಗಳಿಗೆ ಸೀಮಿತವಾಗಿರದೆ ಇಡೀ ಭಾರತೀಯ ದೃಶ್ಯ ಮಾಧ್ಯಮವನ್ನು ಅವರಿಸಿದೆ. ಇಂದು ಯಾವುದಾದರೊಂದು ಒಳ್ಳೆಯ (ಅಶ್ಲೀಲರಹಿತ) ಚಲನಚಿತ್ರ ಬಂದಿದೆಯೆಂದರೆ ಅದು ನಮ್ಮ ಪುಣ್ಯ ಎಂಬಂತಹ ಸನ್ನಿವೇಶ ಸೃಷ್ಟಿಯಾಗಿದೆ. ಕೌಟುಂಬಿಕ ಕಥೆಯ ಹಿನ್ನೆಲೆಯನ್ನು ಹೊಂದಿರುವ ಕೆಲ ಚಿತ್ರಗಳಲ್ಲಿಯೂ ಬಾಕ್ಸಾಫೀಸ್‌ ದೃಷ್ಟಿಯನ್ನಿಟ್ಟುಕೊಂಡು ಮಸಾಲೆ ಸೇರಿಸಿ ಹಣ ಗಳಸಿಕೊಳ್ಳುವುದೊಂದು ಸಾಮಾನ್ಯ ಸಂಗತಿಯಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಕೂತು ನೋಡುವಂತಹ ಚಿತ್ರಗಳೇ ಭವಿಷ್ಯದಲ್ಲಿ ನೋಡಲು ಸಾಧ್ಯವಿಲ್ಲವೇನೋ ಎಂಬ ಪ್ರಶ್ನೆ ಮೂಡುತ್ತಿದೆ.

ಸಿನೆಮಾಗಳ ವಿಷಯವನ್ನೇ ನೋಡಿ… ಬಹುತೇಕ ಚಿತ್ರಗಳಲ್ಲಿ ಅರೆನಗ್ನತೆ, ವ್ಯಭಿಚಾರ, ಅತ್ಯಾಚಾರ, ವಂಚನೆ ಮತ್ತು ಹತ್ಯೆ ಸನ್ನಿವೇಶಗಳನ್ನು ಆ ಕಥೆಗೆ ಪೂರಕವಿರಲಿ, ಇಲ್ಲದಿರಲಿ ಮಿತಿ ಮೀರಿ ಬಳಸಲಾಗುತ್ತದೆ. ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗಬೇಕಿದ್ದ ಲೈಂಗಿಕತೆ, ಚುಂಬನದಂಥ ಕಾರ್ಯಗಳು ಈಗ ಬಹಿರಂಗವಾಗಿಯೇ ಪರದೆಯ ಮೇಲೆ ಪ್ರದರ್ಶ ನವಾಗುತ್ತವೆ. ಹೆಣ್ಣನ್ನು ದೇವತೆ ಎಂದು ಪೂಜಿಸುವ ಭಾರತೀಯ ಸಂಸ್ಕೃತಿಯ ಸಮಾಜದಲ್ಲಿ ಇದೇ ಮಹಿಳೆಯನ್ನು ಎಲ್ಲಾ ಮಾಧ್ಯಮದಲ್ಲೂ ಅತ್ಯಂತ ಕೀಳಾಗಿ ಚಿತ್ರಿಸಲಾಗುತ್ತಿದೆ. ಇದರ ನೇರ ಪರಿಣಾಮವು ಸಮಾಜದಲ್ಲಿ ಈಗಾಗಲೇ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ಇತರೆ ಅಪರಾಧ ಪ್ರಕರಣಗಳ ರೂಪದಲ್ಲಿ ಕಾಣಿಸುತ್ತಿದೆ.

ಇಂದು ಸಮಾಜದಲ್ಲಿ ಅನೀತಿಗಳ ಪ್ರಮಾಣ ಹೆಚ್ಚಳವಾಗಿದ್ದರೆ ಅದಕ್ಕೆ ಈ ಮಾಧ್ಯಮಗಳ ಕೊಡುಗೆಯೂ ಬಹಳಷ್ಟಿದೆ ಎನ್ನುವು ದನ್ನು ಅಲ್ಲಗಳೆಯಲಾಗದು. ಸಿನೆಮಾ, ಟಿ.ವಿ. ಮಾಧ್ಯಮಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವಿರ ಬೇಕೆನ್ನುವುದು ನಿಜ. ಆದರೆ ಅದಕ್ಕಿಂತಲೂ ಅವಕ್ಕೆ ಬಹು ಮುಖ್ಯವಾಗಿ ಸಮಾಜದ ಹಿತ ಮುಖ್ಯವಾಗಬೇಕಲ್ಲವೇ?

ಮಂಜುನಾಥ ಉಲುವತ್ತಿ ಶೆಟ್ಟರ್‌

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.