ಉದ್ಯಮಸ್ನೇಹಿ ದೇಶ: ಅಭಿವೃದ್ಧಿಗೆ ಪೂರಕ ನೆಗೆತ 


Team Udayavani, Nov 3, 2018, 12:30 AM IST

v-4.jpg

ವಿಶ್ವಬ್ಯಾಂಕ್‌ ಬಿಡುಗಡೆಗೊಳಿಸಿದ ಉದ್ಯಮಸ್ನೇಹಿ ದೇಶಗಳ ಪಟ್ಟಿಯಲ್ಲಿ ಭಾರತ ಕಂಡಿರುವ ನೆಗೆತ ಚೇತೋಹಾರಿಯಾಗಿದ್ದು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ. 190 ದೇಶಗಳ ಪೈಕಿ ಭಾರತ 77ನೇ ಸ್ಥಾನದಲ್ಲಿದೆ ಎನ್ನುವುದು ಕಡಿಮೆ ಸಾಧನೆಯಲ್ಲ. ಬರೀ ನಾಲ್ಕು ವರ್ಷದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎನ್ನುವುದು ಗಮನಾರ್ಹ ಅಂಶ. 2014ರಲ್ಲಿ ನಮ್ಮ ದೇಶ 142ನೇ ಸ್ಥಾನದಲ್ಲಿತ್ತು. ಈ ಸಂದರ್ಭದಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೇರಿದ ಮೋದಿಯವರು ಉದ್ಯಮ ಸ್ನೇಹಿ ವಾತಾವರಣದಲ್ಲಿ ಅಗ್ರ 50 ದೇಶಗಳ ಸಾಲಿಗೆ ಸೇರ್ಪಡೆಯಾಗುವುದು ನಮ್ಮ ಗುರಿ ಎಂದು ಹೇಳಿದಾಗ ಇದು ಸಾಧ್ಯವಾಗುವ ಮಾತಲ್ಲ ಎಂದು ಹೇಳಿದವರೇ ಹೆಚ್ಚು. ಆದರೆ ಇದೀಗ ಬಿಡುಗಡೆಯಾದ ಪಟ್ಟಿಯನ್ನು ನೋಡುವಾಗ 50ರೊಳಗೆ ಸೇರ್ಪಡೆ ಯಾಗುವುದು ಅಸಾಧ್ಯವಲ್ಲ ಎಂಬ ವಿಶ್ವಾಸ ಮೂಡಿರುವುದಂತೂ ಸತ್ಯ. ಹಾಗೆಂದು ಈ ಸಾಧನೆ ರಾತ್ರಿ ಬೆಳಗಾಗುವುದರೊಳಗೆ ಆಗಿದೆ ಎಂದು ಭಾವಿಸಬೇಕಿಲ್ಲ. ಇದರ ಹಿಂದೆ ನಿರಂತರ ಪ್ರಯತ್ನವಿದೆ. ವಿವಿಧ ಇಲಾಖೆಗಳ ನಡುವಿನ ಅವಿರತ ಶ್ರಮವಿದೆ. ಕೇಂದ್ರ -ರಾಜ್ಯ ಸರಕಾರಗಳ ಮಾತ್ರವಲ್ಲದೆ ಸ್ಥಳೀಯಾಡಳಿತಗಳ ಯೋಗದಾನವೂ ಇದೆ. 

ಪ್ರಸ್ತುತ ನಾವು ದಕ್ಷಿಣ ಏಶ್ಯಾದಲ್ಲಿ ಅಗ್ರಸ್ಥಾನದಲ್ಲಿದ್ದೇವೆ. ಮೂರು ವರ್ಷದಲ್ಲಿ 65 ಸ್ಥಾನ ಮೇಲೇರುವುದು ನಮ್ಮಿಂದ ಸಾಧ್ಯವಾಗಿದೆ. ಯಾವುದೇ ದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಕೈಗಾರಿಕೋದ್ಯಮಗಳು ಸ್ಥಾಪನೆಯಾಗುವುದು ಅಗತ್ಯ. ಸ್ವಾತಂತ್ರ್ಯ ಸಿಕ್ಕಿದ ಕಾಲಘಟ್ಟದಲ್ಲೇ ಕೈಗಾರಿಕೋದ್ಯಮಗಳ ಅಗತ್ಯವನ್ನು ಮನಗಂಡಿದ್ದರೂ ಅದನ್ನು ಕಾರ್ಯರೂಪಕ್ಕಿಳಿಸುವುದು ನಮ್ಮಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ನಾವು ಆಮದು ದೇಶವಾಗಿಯೇ ಉಳಿಯಬೇಕಾಯಿತು. ಬಹುರಾಷ್ಟ್ರೀಯ ಕಂಪೆನಿಗಳಿಗೆ ಭಾರತ ಎನ್ನುವುದು ತಮ್ಮ ಉತ್ಪನ್ನಗಳನ್ನು ಮಾರಲು ವಿಪುಲ ಅವಕಾಶವುಳ್ಳ ಮಾರುಕಟ್ಟೆಯಾಯಿತು. ಬೇರೆ ದೇಶಗಳು ಉತ್ಪಾದಿಸಿದ ಸರಕುಗಳನ್ನು ಬಳಸುವ ದೇಶವಾದವೆಯೇ ಹೊರತು ನಾವೇ ಉತ್ಪಾದಕ ದೇಶವಾಗುವಲ್ಲಿ ಸೋತೆವು. ಹೀಗಾಗಿ ಇಂದಿಗೂ ನಮ್ಮ ಆರ್ಥಿಕತೆ ಅಭಿವೃದ್ಧಿಶೀಲ ಹಂತದಲ್ಲೇ ಉಳಿದಿದೆ. 

ನಿಧಾನವಾಗಿಯಾದರೂ ಈ ಪರಿಸ್ಥಿತಿ ಬದಲಾಯಿಸುತ್ತಿದೆ ಎನ್ನುವುದು ಸಮಾಧಾನಕೊಡುವ ಸಂಗತಿ. ಉದ್ಯಮಸ್ನೇಹಿ ರ್‍ಯಾಂಕಿಂಗ್‌ನಂತಹ ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುವುದು ಎಂದರೆ ಹೂಡಿಕೆದಾರರ ವಿಶ್ವಾಸ ಗಳಿಸುವುದು ಎಂದು ಅರ್ಥ. ಭಾರತದಲ್ಲಿ ಹೂಡಿಕೆ ಮಾಡಲು ಉತ್ತಮ ವಾತಾವರಣ ಇದೆ ಎಂಬ ಸಂದೇಶ ಇದರಿಂದ ರವಾನೆಯಾಗುತ್ತದೆ. 

ಆದರೆ ನಮ್ಮ ಉದ್ಯಮ ಸ್ನೇಹಿ ವಾತಾವರಣ ನಗರ ಕೇಂದ್ರಿತವಾಗಿದೆ ಎನ್ನುವುದು ಕೂಡಾ ಗಮನಾರ್ಹ ಅಂಶ. ಮುಖ್ಯವಾಗಿ ಮುಂಬಯಿ, ದಿಲ್ಲಿಯಂಥ ಮಹಾನಗರಗಳನ್ನು ಆದ್ಯತೆಯಾಗಿರಿಸಿಕೊಂಡೇ ಉದ್ಯಮಗಳು ಬೆಳೆಯುತ್ತಿರುವುದು ಆರೋಗ್ಯಕಾರಿಯಲ್ಲ. ಮಹಾ ನಗರಗಳ ಮೇಲೆ ಬೀಳುವ ಒತ್ತಡ ಕಡಿಮೆಯಾಗಬೇಕಾದರೆ ಭುವನೇಶ್ವರ, ಲೂಧಿಯಾನ, ಹೈದರಾಬಾದ್‌ ಮತ್ತಿತರ ದ್ವಿತೀಯ ಸ್ತರದ ನಗರಗಳಲ್ಲೂ ಈ ವಾತಾವರಣ ಬೆಳೆಯಬೇಕಾಗಿದೆ. ಈ ಅಂಶದತ್ತ ಸರಕಾರ ಗಮನ ಹರಿಸಬೇಕು. 

ಹೂಡಿಕೆಗಳನ್ನು ಆಕರ್ಷಿಸುವಲ್ಲಿ ರಾಜ್ಯಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಆರೋಗ್ಯಕಾರಿ ಬೆಳವಣಿಗೆ. ಆದರೆ ಇದರಲ್ಲಿ ಕೆಲವೇ ರಾಜ್ಯಗಳು ಮಾತ್ರ ತೊಡಗಿಕೊಂಡಿದೆ. ಎಲ್ಲ 29 ರಾಜ್ಯಗಳೂ ಈ ಸ್ಪರ್ಧೆಯಲ್ಲಿ ಸಹಭಾಗಿಯಾದರೆ ಮಾತ್ರ ಇದು ಅರ್ಥಪೂರ್ಣ. ಅಂತೆಯೇ ಮುಂದಿನ ದಿನಗಳಲ್ಲಿ ಈ ಸ್ಪರ್ಧೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವ ಯೋಜನೆಯೂ ಸರಕಾರದ ಮುಂದಿದೆ. ಹೂಡಿಕೆಗೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಈ ಮಾದರಿಯ ಸ್ಪರ್ಧೆ ಪೂರಕವಾಗಲಿದೆ. ಹೀಗಾದರೆ ಭಾರತ ಉದ್ಯಮ ಪ್ರಾರಂಭಿಸಲು ಅತಿ ಸುಲಭವಾದ ಮತ್ತು ಸರಳ ಪ್ರಕ್ರಿಯೆಯನ್ನೊಳಗೊಂಡಿರುವ ದೇಶವನ್ನಾಗಿ ಮಾಡುವ ಕನಸು ನನಸಾದೀತು. 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.