ಧರೆಯೇ ಹತ್ತಿ ಉರಿಯುವಾಗ ಬದುಕಲೆಲ್ಲಿ ಓಡುವೆ?


Team Udayavani, Mar 21, 2019, 12:30 AM IST

fire-d.jpg

ಮಾ. 21, 22 ಮತ್ತು 23 ಕ್ರಮವಾಗಿ ವಿಶ್ವ ಅರಣ್ಯ ದಿನ, ವಿಶ್ವ ಜಲ ದಿನ ಮತ್ತು ವಿಶ್ವ ವಾತಾವರಣ ದಿನ. ಇವು ಜಗತøಸಿದ್ಧ ದಿನಾಚರಣೆಗಳಾಗಿವೆ. ಅರಣ್ಯಗಳು ಸಂಪತ್ತಿನ ಕಾಮಧೇನು. ಜಲವೇ ಜೀವಾಧಾರ, ವಾತಾವರಣವೇ ಉಸಿರು. ಈ ದಿನಾಚರಣೆಗಳು ನಮ್ಮನ್ನು ಮಾಲಿನ್ಯ ಕುರಿತಂತೆ ಎಚ್ಚರಿಸಬೇಕಾಗಿದೆ ಮತ್ತು ಈ ಬಗ್ಗೆ ಹಿಂದೆಂದಿಗಿಂತಲೂ ನಾವು ಹೆಚ್ಚು ತಿಳಿದು ಕೊಳ್ಳಬೇಕಾಗಿದೆ. ಈ ಭೂಮಿಗೆ ಎಲ್ಲರ ಆಸೆಗಳನ್ನು ಪೂರೈಸುವ ಸಾಮರ್ಥಯವಿದೆ. ಆದರೆ ದುರಾಸೆಗಳನ್ನು ಪೂರೈಸುವ ಸಾಮರ್ಥಯವಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಮಾನವ ತನ್ನ ಸ್ವಾರ್ಥವನ್ನು ಮರೆತು ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸಲೇ ಬೇಕು ಎಂಬ ಸಂದೇಶವನ್ನು ಸಾರುವ ದಿನಗಳಾಗಿವೆ.
 
ಮಾನವ ಇನ್ನೂ ಪ್ರಕೃತಿಯಿಂದ ಪಾಠ ಕಲಿತಂತೆ ಕಾಣುತ್ತಿಲ್ಲ. ಮಾನವನ ಹುಟ್ಟು, ಸಾವು, ಬದುಕು, ಸಾಧನೆ ಎಲ್ಲವೂ ಪ್ರಕೃತಿಯ ಪರಿಸರ ಮತ್ತು ಮಾನವ ನಿರ್ಮಿತ ಪರಿಸರದ ಮಧ್ಯೆ ಹಾದು ಹೋಗುತ್ತದೆ. ಪರಿಸರವೇ ನಮ್ಮ ಬದುಕು. ಪರಿಸರದಿಂದಲೇ ಮತ್ತು ಪರಿಸರಕ್ಕಾಗಿ ನಮ್ಮ ಬದುಕು. ಪ್ರಾಕೃತಿಕ ಸಂಪನ್ಮೂಲಗಳಾದ ಅರಣ್ಯ, ನೆಲ, ಜಲ, ವಾಯು ಸೃಷ್ಟಿಯ ನಿಜರೂಪಗಳು. ಪ್ರಕೃತಿ ಇದ್ದರೆ ನಾವು . ಅದನ್ನೆದುರಿಸಿ ಬದುಕಲು ಪ್ರಯತ್ನಿಸಿದರೆ ಪ್ರಕೃತಿ ವಿಕೋಪಗೊಳ್ಳುವುದರಲ್ಲಿ ಎರಡು ಮಾತಿಲ್ಲ. ಪ್ರಕೃತಿ ನಮಗೆದುರಾದರೆ ಅದು ಮನುಕುಲಕ್ಕೆ ಶಾಪವಾಗಿ ಪರಿಗಣಿಸುತ್ತದೆ. ದುರದೃಷ್ಟವೆಂದರೆ ಇದು ತಿಳಿದು ಮಾನವನು ಎಸಗುತ್ತಿರುವ ದುಷ್ಕೃತ್ಯಗಳಿಂದ ಪ್ರಕೃತಿ ತನ್ನ ಸಮತೋಲನವನ್ನು ಕಾಪಾಡುವುದರಲ್ಲಿ ವಿಫ‌ಲವಾಗಿ ಪ್ರಕೋಪಗಳಿಗೆ ಕಾರಣವಾಗಿದೆ. ಮರ, ಗಿಡ, ನೆಲ, ಜಲ ಮತ್ತು ವಾತಾವರಣದ ಮೇಲೆ ಮಾಡಿದ ದಾಳಿ ಬಿರುಗಾಳಿ, ಚಂಡಮಾರುತ, ಅತಿವೃಷ್ಟಿ, ಅನಾವೃಷ್ಟಿಗಳೆಲ್ಲವನ್ನು ಎದುರಿಸುವಂತೆ ಮಾಡಿದೆ. ಇನ್ನೊಂದೆಡೆ ಕೆರೆಕುಂಟೆ ಮತ್ತು ನದಿ ನೀರನ್ನು ಮಲೀನಗೊಳಿಸುತ್ತಿದ್ದಾನೆ. ಈ ದುಷ್ಕೃತ್ಯಗಳಿಗೆ ಮಾನವನು ದುಬಾರಿ ಬೆಲೆ ತೆರುತ್ತಿದ್ದಾನೆ ಹಾಗೂ ವಿನಾಶದ ಅಂಚಿಗೂ ತಲುಪುವುದರಲ್ಲಿದ್ದಾನೆ. ಇತ್ತೀಚಿನ ದಿನಗಳಲ್ಲಿ ನಾವು ರಾಜಕೀಯ ವೀಕ್ಷಿಸುವುದರಲ್ಲಿ ಮಗ್ನರಾಗಿದ್ದೇವೆ. ಈ ಮಧ್ಯೆ ಪ್ರಕೃತಿ ಮತ್ತು ಪರಿಸರದ ಬಗ್ಗೆ ಸ್ವಲ್ಪ ಬೆಳಕು ಚೆಲ್ಲುವುದು ಅಗತ್ಯ. 

ಕಾರ್ಬನ್‌ ಉತ್ಪತ್ತಿಯಲ್ಲಿ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಪ್ರಪಂಚದ 20 ಅತ್ಯಂತ ಮಾಲಿನ್ಯ ನಗರಗಳಲ್ಲಿ 15 ಭಾರತಲ್ಲಿಯೇ ಇದೆ. ದೆಹಲಿಗೆ ಹನ್ನೊಂದನೇ ಸ್ಥಾನವಾದರೆ ರಾಜಧಾನಿ ಪ್ರದೇಶಕ್ಕೆ ಸೇರಿದ ಗುರುಗ್ರಾಮ, ಗಾಜಿಯಾಬಾದ್‌, ಫ‌ರಿದಾಬಾದ್‌, ನೊಯ್ಡಾ ಕ್ರಮವಾಗಿ ಮೊದಲನೆಯ, ಎರಡನೆಯ, ನಾಲ್ಕನೆಯ ಮತ್ತು ಆರನೇಯ ಸ್ಥಾನದಲ್ಲಿವೆ ಎಂಬುದು ವಿಷಾದದ ವಿಚಾರ. ರಾಜಧಾನಿಯ ಏಳು ಪ್ರದೇಶಗಳಲ್ಲಿನ ಜೀವನವೇ ಅಪಾಯ ಎಂಬಂತಿದೆ. ಪರಿಸರ ಮಾಲಿನ್ಯದಿಂದಾಗಿ ಸಾವನ್ನಪ್ಪುತ್ತಿ ರುವವರು ಭಾರತದಲ್ಲಿ ಅತ್ಯಧಿಕ. ವಾಯು ಮಾಲಿನ್ಯದ ಸಾವುಗಳಲ್ಲಿ ಭಾರತದ ಪಾಲು ಶೇ. 28ರಷ್ಟಿದೆ, ಜನರ ಜೀವಿತಾವಧಿಯ ಮೇಲೆ ಧೂಮಪಾನ, ಭಯೋತ್ಪಾದನೆ, ಏಡ್ಸ್‌ಗಿಂತ ಹೆಚ್ಚು ದುಷ್ಪರಿಣಾಮ ಪರಿಸರ ಮಾಲಿನ್ಯದಿಂದ ಉಂಟಾಗುತ್ತದೆ.  
ನಿಸರ್ಗ, ಪ್ರಕೃತಿ ಮತ್ತು ಕಾಲದ ಎದುರು ಮಾನವನ ಎಲ್ಲಾ ನಾಟಕಗಳು ಶೂನ್ಯ. ಅರಣ್ಯಗಳ ನಾಶದಿಂದ ನೈಸರ್ಗಿಕ ಮಳೆಯ ಬದಲು ಕೃತಕ ಮಳೆಯನ್ನು ಸೃಷ್ಟಿಸಲು ಹೊರಟಿದ್ದಾನೆ. 

ಬ್ರಹ್ಮಾಂಡದ ಶಕ್ತಿ ಎಷ್ಟೊಂದು ಅದ್ಭುತವೆಂದರೆ ಪ್ರಕೃತಿ ಮತ್ತು ಕಾಲ ಎಲ್ಲಾ ಆಗುಹೋಗುಗಳಿಗೆ ಮತ್ತು ಅನಾಹುತಗಳಿಗೆ ತನ್ನದೇ ಆದ ನಿಜರೂಪದ ಉತ್ತರವನ್ನು ಕೊಡುತ್ತದೆ. ಇತ್ತೀಚಿಗಿನ ಕೇರಳ ಮತ್ತು ಕೊಡಗಿನ ದುರಂತಗಳೂ ಇದಕ್ಕೆ ಸಾಕ್ಷಿ. ಇತ್ತೀಚೆಗಿನ ಬಂಡೀàಪುರದ ಅರಣ್ಯಕ್ಕೆ ಬಿದ್ದ ಬೆಂಕಿ ನಿಜವಾಗಿ ನಾಡಿಗೇ ಬಿದ್ದ ಬೆಂಕಿ. ವಿಶ್ವದೆಲ್ಲಡೆ ವಾಯು ಮಾಲಿನ್ಯ ನಿರ್ವಹಿಸಲು ಹರಸಾಹಸ ಪಡುತ್ತಿರುವ ಈ ಕಾಲಘಟ್ಟದಲ್ಲಿ ಇತ್ತೀಚಿಗಿನ ನಮ್ಮ ಸಸ್ಯರಾಶಿಗೆ ಬಂದೊದಗಿದ ಪ್ರತ್ಯಕ್ಷ ಮತ್ತು ಪರೋಕ್ಷ ಅಪಾಯಗಳು ದುರದೃಷ್ಟಕರ. ಇದರಲ್ಲಿ ಮಾನವನ ವಿಕೃತ ಸ್ವಭಾವವೂ, ಹೊಣೆಗೇಡಿತನವೂ, ಸರಕಾರಿ ಇಲಾಖೆಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯೂ ಇದೆ. ನಮ್ಮ ಘನತೆ ಮತ್ತು ಸಂಸ್ಕೃತಿಯ ಹೆಮ್ಮೆಯೆನಿಸಿದ ಅರಣ್ಯ ಸಂಪತ್ತು ಬರಿದಾಗುವಂತೆ ಮಾಡಿದ ದುಷ್ಕೃತ್ಯಗಳಿಗೆ ಹವಾಮಾನ ಬದಲಾವಣೆಯು ನಮ್ಮನ್ನು ನೋಡಿ ಅಪಹಾಸ್ಯ ಮಾಡುವಂತಾಗಿದೆ. 

ಬೇಲಿ ಭದ್ರವಾಗಿದ್ದರೆ ನೆರೆಹೊರೆಯವರೂ ಒಳ್ಳೆಯವರು. ಬಂಡೀಪುರ ವಿಶಾಲ ಕಾಡಿನಲ್ಲಿ ಬೆಂಕಿಯ ರುದ್ರ ನರ್ತನಕ್ಕೆ 10 ಸಾವಿರ ಎಕ್ಕರೆಗಿತಲೂ ಹೆಚ್ಚಿನ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿ, ದಟ್ಟ ಅರಣ್ಯ ಬೂದಿಯಾಯಿತು. ಅದೇ ಸಮಯದಲ್ಲಿ ಕಾಡಿಗೆ ಬಿದ್ದ ಬೆಂಕಿಯು ಕಾರುಗಳಿಗೆ ಬಿದ್ದ ಬೆಂಕಿಯಷ್ಟು ಮಹತ್ವವನ್ನು ಪಡೆದುಕೊಳ್ಳಲಿಲ್ಲ. ರಾಜ್ಯದ ವಿಶ್ವವಿಖ್ಯಾತ ಹುಲಿ ಸಂರಕ್ಷಿತ ಅಭಯಾರಣ್ಯ ಐದು ದಿನಗಳವರೆಗೆ ನಿಯಂತ್ರಣಕ್ಕೆ ಬಾರದಿದ್ದದ್ದು ನಮ್ಮ ವೈಫ‌ಲ್ಯದ ಸಂಕೇತ. ಮುನ್ನಚ್ಚೆರಿಕೆಯ ಕ್ರಮ ವಹಿಸದಿರುವುದು, ಡ್ರೋನ್‌ ಕಾರ್ಯಾಚರಣೆ ನಿಲ್ಲಿಸಿರುವುದು, ಕಿಡಿಗೇಡಿಗಳ ಮೇಲೆ ನಿಗಾ ಇಡಲು ಭದ್ರತಾ ಸಿಬ್ಬಂದಿಯ ಕೊರತೆ ಈ ಅನಾಹುತಕ್ಕೆ ಕಾರಣವಾಗಿತ್ತು. ಅರಣ್ಯಕ್ಕೆ ತಗಲಿದ ಬೆಂಕಿಯನ್ನು ಸಂಪೂರ್ಣ ನಂದಿಸಲಾಗುವುದು ಎಂದು ಒಬ್ಬ ಮಂತ್ರಿಯೊಬ್ಬರು ಹೇಳಿದರೆ ಇನ್ನೊಬ್ಬರ ಕೇಂದ್ರದ ಜತೆ ಮಾತುಕತೆ ನಡೆಸಿ ಹೆಲಿಕಾಪ್ಟರ್‌ ತರಿಸಿಕೊಳ್ಳಲಾಗುವುದು ಎಂಬ ಹೇಳಿಕೆ ಕೇಳುವಾಗ ನಮ್ಮನ್ನಾಳುವವರ ಕಾಳಜಿ ಯಾವ ಮಟ್ಟದ್ದು ಎನ್ನುವುದು ಅರ್ಥವಾಗುತ್ತದೆ.  ಜಾಗತಿಕ ತಾಪಮಾನವನ್ನು ನಿಯಂತ್ರಣದಲ್ಲಿ ಇಡಬೇಕೆಂಬ ಚರ್ಚೆಗಳಾಗುತ್ತಿವೆ. ಪ್ಯಾರಿಸ್‌ ಒಪ್ಪಂದದಲ್ಲಿ ಎಲ್ಲಾ ದೇಶಗಳು ಇಂಗಾಲದ ಬಳಕೆಯನ್ನು ಕಡಿಮೆ ಮಾಡಬೇಕು. 

ಅಟೊಮೊಬೈಲ್‌ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಬೇಕು ಮತ್ತು ಇಂಗಾಲ ಹೊರಹೊಮ್ಮುವುದನ್ನು ಕಡಿಮೆ ಮಾಡಿ ಆಮ್ಲಜನಕ ಉತ್ಪಾದನೆ ಮತ್ತು ಸಂರಕ್ಷಣೆಯ ನಿರ್ಧಾರ ಕೈಗೊಳ್ಳಬೇಕೆಂಬ ಕೂಗು ತೀವ್ರಗೊಳ್ಳುತ್ತಿರುವ ಈ ಸಂದರ್ಭದಲ್ಲೂ ನಾವು ಎಚ್ಚೆತ್ತಿಲ್ಲ. 

ಅಭಯಾರಣ್ಯಗಳ ಉಳಿವಿಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು ವಿಶೇಷ ಕಾಳಜಿ ವಹಿಸಬೇಕು. ಮತ್ತು ಬೇಸಿಗೆಯ ಕಾಲದಲ್ಲಿ ಹೆಚ್ಚು ಜಾಗ್ರತರಾಗಬೇಕು. ಸೂಕ್ಷ್ಮ ಪ್ರದೇಶಗಳಾದ ಸಂಡೂರು ಕಾಡು, ಚಾಮುಂಡಿ ಬೆಟ್ಟದ ತಪ್ಪಲು, ನೀಲಗಿರಿ ತೋಪುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕಾಡುಗಳ ರಕ್ಷಣೆ ಜಲಮೂಲಗಳ ರಕ್ಷಣೆಯಿಂದ ಹವಾಮಾನ ನಿಯಂತ್ರಣ ಸಾಧ್ಯ. ಅರಣ್ಯ ಒತ್ತುವರಿ ತೆರವುಗೊಳಿಸಿ ಕಾಡು ನಾಶಕ್ಕೆ ತೆರೆ ಎಳೆಯಬೇಕು. ಹಸಿರೀಕರಣ ಯೋಜನೆ, ಅಂತರ್ಜಲ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. 

ನೆಲ, ಜಲ, ಕಾಡು, ಖನಿಜ ಸಂಪತ್ತು ನಾಶಗೊಳಿಸಬಾರದು. ಇವುಗಳಿಗೆಲ್ಲ ವಿವಿಧ ಯೋಜನೆಗಳಿದ್ದರೂ ಕೇವಲ ಆದೇಶ, ಅಪ್ಪಣೆ, ನಿಯಮಕ್ಕೆ ಸೀಮಿತವಾಗಿರುವುದು ದುರಂತ. ಸ್ಯಾಟಲೈಟ್‌, ಡ್ರೋನ್‌, ರೊಬೋಟ್‌ಗಳಂಥ ತಂತ್ರಜ್ಞಾನಗಳನ್ನು ಉಪಯೋಗಿಸಿ ಕಾಡ್ಗಿಚ್ಚನ್ನು ನಂದಿಸಲು ಯಾವತ್ತೂ ಸಜ್ಜಾಗಿರಬೇಕು. 

ಇದೀಗ ನಮ್ಮ ರಾಜಕೀಯ ಚಟುವಟಿಕೆಗಳ ಭರಾಟೆಯಲ್ಲಿ ದೇಶದ ಶೇ. 50ರಷ್ಟು ಪ್ರದೇಶ ತೀವ್ರ ಬರಪರಿಸ್ಥಿತಿಯನ್ನು ಎದುರಿಸುವ ಮುನ್ನೆಚ್ಚರಿಕೆಯನ್ನು ಮರೆತಂತೆ ಕಾಣುತ್ತದೆ. ಗಂಭೀರ ಬರಗಾಲದ ಛಾಯೆ ಕವಿದು ಪ್ರಕೃತಿ ವಿಕೋಪ ಸನ್ನಿವೇಶ ಸನ್ನಿಹಿತವಾಗುತ್ತಿದೆ ಎಂಬುದು ವಿಜ್ಞಾನಿಗಳು ನೀಡಿದ ಎಚ್ಚರಿಕೆ. ಈ ಭೂಮಿಗೆ ನಮ್ಮ ಅವಶ್ಯಕತೆ ಇರುವುದಕ್ಕಿಂತಲೂ ಹೆಚ್ಚು ನಮಗೆ ಈ ಭೂಮಿ ಮತ್ತು ಪ್ರಕೃತಿಯ ಅವಶ್ಯಕತೆ ಇದೆ. 

ಈ ನಿಟ್ಟಿನಲ್ಲಿ ಅರಣ್ಯ, ಸರೋವರ, ನದಿ ಮತ್ತು ವನ್ಯ ಮೃಗ ಇವುಗಳನ್ನೊಳಗೊಂಡಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುವುದು, ಸುಧಾರಣೆ ತರುವುದು ಮತ್ತು ಜೀವಿಗಳ ಬಗ್ಗೆ ಅನುಕಂಪ ತೋರುವುದರೊಂದಿಗೆ ಮಾನವ ಕುಲವನ್ನು ಅವನತಿಯಿಂದ ರಕ್ಷಿಸಬೇಕು. ನಿಸರ್ಗವನ್ನು ರಕ್ಷಿಸದಿದ್ದಲ್ಲಿ ಕಾಡೇಕೆ ಧರೆಯೇ ಹತ್ತಿ ಉರಿಯುವುದು. ಬದುಕಲೆಲ್ಲಿ ಓಡಲಿ?

– ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ 

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.