ಕೆರೆಕಟ್ಟೆ ಉತ್ಸವದಲ್ಲಿ ಬೆಳಗಿದ ಧನ್ಯಭಾವ

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ದ್ವಿತೀಯ ದಿನ

Team Udayavani, Nov 25, 2019, 5:26 AM IST

2411CH8_KEREKATTE–3

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಎರಡನೇ ದಿನವಾದ ಶನಿವಾರ ರಾತ್ರಿ ಕೆರೆಕಟ್ಟೆಉತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಗರ್ಭಗುಡಿಯಿಂದ ಹೊರಕ್ಕೆಚಿತ್ತೈಸಿ ಬ್ರಹ್ಮವಾಹಕರ ಶಿರದಲ್ಲಿ, ವೈಭವೋಪೇತ ಪಲ್ಲಕ್ಕಿಯಲ್ಲಿ ಆಸೀನನಾಗಿ ಶೋಭಿಸುವ ಮಂಜುನಾಥಸ್ವಾಮಿಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡು ಧನ್ಯರಾದರು.

ಕಾರ್ತಿಕ ಮಾಸದ ಕಡೆಯ ಐದು ದಿನಗಳ ಕಾಲ ನಡೆಯುವ ಈ ಲಕ್ಷ ದೀಪೋತ್ಸವದಲ್ಲಿ ಪ್ರತಿಯೊಂದು ದಿನವೂ ಅನನ್ಯ, ಅತಿವಿಶೇಷ.

ಈ ಉತ್ಸವದ ಪೂಜೆ ಒಂದೇ ರೀತಿಯಾಗಿದ್ದರೂ ಪಲ್ಲಕ್ಕಿಗಳು ಮಾತ್ರ ಬೇರೆ ಬೇರೆಯಾಗಿರುತ್ತವೆ. ಕೆರೆಕಟ್ಟೆ ಉತ್ಸವಕ್ಕೆ ದೇವರನ್ನು ಸ್ವರ್ಣಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ನಡೆಸಲಾಯಿತು.

ಇದಕ್ಕೂ ಮುನ್ನ ದೇಗುಲದ ಅಂಗಣದಲ್ಲಿ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ವರ ಸುತ್ತು, ಸಂಗೀತ ಸುತ್ತು, ಕೊಳಲು ಸುತ್ತು, ಶಂಖ ಸುತ್ತು, ಸರ್ವವಾದ್ಯ ಸುತ್ತು ಇತ್ಯಾದಿ ಹಲವು ನಾಮಗಳ ಒಟ್ಟು 16 ಸುತ್ತುಗಳಲ್ಲಿ ಸ್ವಾಮಿಯ ವಿಗ್ರಹವನ್ನು ಒಯ್ಯಲಾಯಿತು. ಉಡಿಕೆ 5 ಸುತ್ತುಗಳಿದ್ದು, ಎಲ್ಲ ಉತ್ಸವಗಳಿಗೂ ಒಂದೇ ತೆರನಾಗಿದೆ.
ಉತ್ಸವದ ಮೆರವಣಿಗೆ ಆರಂಭಕ್ಕೂ ಮುನ್ನ ಬಲಿ ಕಲ್ಲು ಶುದ್ಧೀಕರಿಸಿ ಕ್ಷೇತ್ರಪಾಲನಿಗೆ ಪೂಜೆ ಸಲ್ಲಿಸಿ, ಮಂಜುನಾಥ ಸ್ವಾಮಿಯ ವಿಗ್ರಹವನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ಕೂರಿಸಲಾಯಿತು. ಬಳಿಕ ಒಟ್ಟು 11 ಸುತ್ತುಗಳ ಅನಂತರ ದೇವಾಲಯದ ಮುಂಭಾಗದಿಂದ ವಿವಿಧ ತೆರನಾದ ವಾದ್ಯಗಳೊಂದಿಗೆ ವಿಜೃಂಭಣೆಯ ಮೆರವಣಿಗೆ ನಡೆಯಿತು.

ಮೆರವಣಿಗೆಯುದ್ದಕ್ಕೂ ಶ್ರೀಕ್ಷೇತ್ರದ ಆನೆಗಳಾದ ಲತಾ ಮತ್ತು ಲಕ್ಷ್ಮೀ ರಾಜಗಾಂಭೀರ್ಯದ ಹೆಜ್ಜೆಗಳೊಂದಿಗೆ ಜತೆಗೂಡಿದವು.ದೇವರನ್ನು ವಿಹಾರಕ್ಕೆ ಕರೆದುಕೊಂಡು ಹೋಗುವ ಸಂಪ್ರದಾಯವಿರುವುದರಿಂದ ದೇಗುಲದ ಮುಂಭಾಗದ ಕೆರೆ ಕಟ್ಟೆಯಲ್ಲಿ ಸ್ವಾಮಿಯನ್ನು ಇರಿಸಿ ಪೂಜೆ ಸಲ್ಲಿಸಲಾಯಿತು. ಅನಂತರ ರಥವನ್ನು ಭಕ್ತರು ದೇವಾಲಯದ ಸುತ್ತ ಒಂದು ಸುತ್ತು ಕರೆತಂದು ಮರಳಿ ಸಾನ್ನಿಧ್ಯಕ್ಕೆ ಕರೆತರುವುದರೊಂದಿಗೆ ಕೆರೆಕಟ್ಟೆ ಉತ್ಸವ ಪೂರ್ಣಗೊಂಡಿತು.

ಕಂಚಿಮಾರುಕಟ್ಟೆ ಉತ್ಸವ
ಸೋಮವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಜರಗಲಿದೆ. ಈ ಉತ್ಸವದಲ್ಲಿ ಶ್ರೀ ಮಂಜುನಾಥ ದೇವರ ಮೂರ್ತಿಯನ್ನು ನಂದಿ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ನಡೆಸಲಾಗುತ್ತದೆ. ದೇಗುಲದ ಹೊರಭಾಗದಲ್ಲಿ ಶುದ್ಧಿ ಕಾರ್ಯ ನಡೆದು, ಬಳಿಕ ಒಳಭಾಗದಲ್ಲಿ ಪಂಚವಾದ್ಯ
ಗಳೊಂದಿಗೆ 16 ಸುತ್ತುಗಳ ಮೆರವಣಿಗೆ ನಡೆಸುವುದು ವಿಶೇಷ. ವೈಶಾಲಿ ವಸತಿಗೃಹದ ಮುಂಭಾಗದಲ್ಲಿನ ಕಂಚಿಮಾರುಕಟ್ಟೆಯಲ್ಲಿ ಸ್ವಾಮಿಗೆ ಪೂಜೆ ನಡೆಸಲಾಗುತ್ತದೆ.

ಇಂದು ಸರ್ವಧರ್ಮ ಸಮ್ಮೇಳನ
ಅಮೃತವರ್ಷಿಣಿ ಸಭಾಭವನದಲ್ಲಿ ನ. 25ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 87ನೇ ಅಧಿವೇಶನವನ್ನು ನಿಕಟಪೂರ್ವ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ ಉದ್ಘಾಟಿಸುವರು. ಇಸ್ಕಾನ್‌ ಸಂಸ್ಥೆಯ ಗೌರ್‌ ಗೋಪಾಲದಾಸ್‌ ಅಧ್ಯಕ್ಷತೆ ವಹಿಸುವರು. ಮೈಸೂರಿನ ಫೋಕಸ್‌ ಅಕಾಡೆಮಿ ಸಿಇಒ ಡಿ.ಟಿ. ರಾಮಾನುಜಂ, ಲೇಖಕ ಕದ್ರಿ ನವನೀತ ಶೆಟ್ಟಿ ಮತ್ತು ಹೆಸರಾಂತ ಕತೆ-ಕಾದಂಬರಿಗಾರ ಬೊಳುವಾರು ಮಹಮದ್‌ ಕುಂಞಿ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8ರಿಂದ ವಿ| ಕೆ. ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ, ವಿ| ವಾಣಿ ಗೋಪಾಲ್‌ ಮತ್ತು ತಂಡದಿಂದ ಸಮೂಹ ನೃತ್ಯ ನೆರವೇರಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.