ಇಂಗ್ಲೆಂಡ್‌  ಟೆಸ್ಟ್‌  ನಾಯಕತ್ವಕ್ಕೆ ಕುಕ್‌ ರಾಜೀನಾಮೆ


Team Udayavani, Feb 7, 2017, 3:45 AM IST

06-SPO-7.jpg

ಲಂಡನ್‌: ದಾಖಲೆಯ 59 ಪಂದ್ಯಗಳಲ್ಲಿ  ನಾಯಕರಾಗಿ ಇಂಗ್ಲೆಂಡ್‌ ಟೆಸ್ಟ್‌ ತಂಡವನ್ನು ಮುನ್ನಡೆಸಿದ್ದ ಅಲಸ್ಟೇರ್‌ ಕುಕ್‌ ಸೋಮವಾರ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿ ದ್ದಾರೆ. ಇದೊಂದು ದುಃಖದ ದಿನ ಆದರೆ ತಂಡಕ್ಕಾಗಿ ಸರಿಯಾದ ನಿರ್ಧಾರ ವೆಂದು ಪ್ರತಿಕ್ರಿಯೆ ನೀಡಿದ್ದಾರೆ.

ಟೆಸ್ಟ್‌ನಲ್ಲಿ 11,057 ರನ್‌ ಪೇರಿಸುವ ಮೂಲಕ ಇಂಗ್ಲೆಂಡಿನ ಗರಿಷ್ಠ ರನ್‌ ಸ್ಕೋರರ್‌ ಎನಿಸಿಕೊಂಡಿರುವ ಕುಕ್‌ 2012ರ ಆಗಸ್ಟ್‌ನಲ್ಲಿ ಇಂಗ್ಲೆಂಡ್‌ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಅವರ ನಾಯಕತ್ವದಲ್ಲಿ ಇಂಗ್ಲೆಂಡ್‌ ತಂಡ 2013 ಮತ್ತು 2015ರಲ್ಲಿ ತವರಿ ನಲ್ಲಿ ಆ್ಯಶಸ್‌ ಸರಣಿ ಜಯಿಸಿತ್ತು ಮಾತ್ರವಲ್ಲದೇ ಭಾರತ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಸಾಧನೆ ಮಾಡಿತ್ತು.

ಯಾರ್ಕ್‌ಶೈರ್‌ ಬ್ಯಾಟ್ಸ್‌ಮನ್‌ ಜೋ ರೂಟ್‌ ಅವರು ಕುಕ್‌ ಅವರ ಉತ್ತರಾಧಿಕಾರಿಯಾಗುವ ಫೇವರಿಟ್‌ ಆಟಗಾರ ಆಗಿದ್ದಾರೆ. ಈ ಕುರಿತ ಪ್ರಕಟನೆ ಮುಂದಿನೆರಡು ವಾರಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.

ಇಂಗ್ಲೆಂಡ್‌ ತಂಡದ ನಾಯಕನಾಗಿ ರುವುದು ಮತ್ತುಕಳೆದ ಐದು ವರ್ಷ ಟೆಸ್ಟ್‌ ತಂಡವನ್ನು ಮುನ್ನಡೆಸಿರುವುದು ನನಗೆ ಸಿಕ್ಕಿದ ಬಲುದೊಡ್ಡ ಗೌರವ ವೆಂದು ಭಾವಿಸುತ್ತೇನೆ ಎಂದು 32ರ ಹರೆಯದ ಕುಕ್‌ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.

ನಾಯಕನ ಹುದ್ದೆಯಿಂದ ಕೆಳಗೆ ಇಳಿಯುವುದು ನಿಜವಾಗಿಯೂ ಕಠಿನ ನಿರ್ಧಾರ. ಆದರೆ ಇದು ಸರಿಯಾದ ನಿರ್ಧಾರ ಮತ್ತು ತಂಡಕ್ಕಾಗಿ ಸರಿ ಯಾದ ಸಮಯವೆಂದು ನನಗೆ ತಿಳಿದಿದೆ ಎಂದವರು ಪ್ರತಿಕ್ರಿಯೆ ನೀಡಿದರು.

2010ರಿಂದ 2014ರ ನಡುವೆ ಕುಕ್‌ ಅವರು ದಾಖಲೆಯ 69 ಏಕ ದಿನ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ವನ್ನು ಮುನ್ನಡೆಸಿದ್ದರು. ಅವರು ಗರಿಷ್ಠ ಸಂಖ್ಯೆಯ ಪಂದ್ಯಗಳಲ್ಲಿ ಟೆಸ್ಟ್‌ ನಾಯಕರಾಗಿ ತಂಡವನ್ನು ಮುನ್ನಡೆಸಿದ ಆಟಗಾರ ಆಗಿದ್ದು ಗರಿಷ್ಠ ಸಂಖ್ಯೆಯ ಟೆಸ್ಟ್‌ ಶತಕಗಳನ್ನು ಸಿಡಿಸಿದವರಾಗಿದ್ದಾರೆ. 

2012ರಲ್ಲಿ ಅವರು ವಿಸ್ಡನ್‌ ವರ್ಷದ ಶ್ರೇಷ್ಠ  ಕ್ರಿಕೆಟಿಗ ಮತ್ತು 2013ರಲ್ಲಿ ಐಸಿಸಿ ವಿಶ್ವದ ಶ್ರೇಷ್ಠ ಟೆಸ್ಟ್‌ ನಾಯಕರೆಂಬ ಗೌರವಕ್ಕೆ ಕುಕ್‌ ಪಾತ್ರರಾಗಿದ್ದರು.

ಕುಕ್‌ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಚೇರ್ಮನ್‌ ಕಾಲಿನ್‌ ಗ್ರೇವ್ಸ್‌ ಅವರಿಗೆ ರವಿವಾರ ರಾಜೀನಾಮೆ ಸಲ್ಲಿಸಿದ್ದರು. ಆದರೆ ಕುಕ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. 

ಹಲವು ಕಾರಣಗಳಿಗಾಗಿ ಇದೊಂದು ವೈಯಕ್ತಿಕವಾಗಿ ದುಃಖದ ದಿನ. ಆದರೆ ನಾನು ನಾಯಕತ್ವ ವಹಿಸಿದಾಗ ಸಹಕರಿಸಿದ ಎಲ್ಲರಿಗೂ, ಎಲ್ಲ ಕೋಚ್‌ಗಳಿಗೂ ಮತ್ತು ಬೆಂಬಲ ಸಿಬಂದಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವರ ಜತೆ ಇಂಗ್ಲೆಂಡಿನ ಅಭಿಮಾನಿಗಳಿಗೆ ಮತ್ತು ಬಾರ್ಮಿ ಆರ್ಮಿಗೆ ಕೂಡ ಕೃತಜ್ಞತೆ ಸಲ್ಲಿಸುವೆ
ಅಲಸ್ಟೇರ್‌ ಕುಕ್‌

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.