ದೇವಧರ್ ಟ್ರೋಫಿ ಕ್ರಿಕೆಟ್ ; ಇಂಡಿಯಾ ಬ್ಲೂ ತಂಡಕ್ಕೆ ರೋಹಿತ್ ನಾಯಕ
Team Udayavani, Mar 22, 2017, 3:50 AM IST
ಹೊಸದಿಲ್ಲಿ: ಗಾಯಾಳಾಗಿ ಭಾರತ ತಂಡದಿಂದ ಬೇರ್ಪಟ್ಟಿರುವ ರೋಹಿತ್ ಶರ್ಮ ಅವರ ಫಾರ್ಮ್ ಪ್ರದರ್ಶನಕ್ಕೆ ಮತ್ತೂಂದು ವೇದಿಕೆ ಸಿದ್ಧಗೊಂಡಿದೆ. ದೇವಧರ್ ಟ್ರೋಫಿ ಪಂದ್ಯಾವಳಿಗಾಗಿ ಮಂಗಳವಾರ ಪ್ರಕಟಿಸಲಾದ ತಂಡದಲ್ಲಿ ಅವರನ್ನು “ಇಂಡಿಯಾ ಬ್ಲೂ’ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.
ರೋಹಿತ್ ಶರ್ಮ ನಾಯಕತ್ವದ “ಇಂಡಿಯಾ ಬ್ಲೂ’ ತಂಡ ವಿಜಯ್ ಹಜಾರೆ ಟ್ರೋಫಿ ಚಾಂಪಿಯನ್ ತಮಿಳುನಾಡು ಮತ್ತು “ಇಂಡಿಯಾ ರೆಡ್’ ತಂಡವನ್ನು ಎದುರಿಸಲಿದೆ. “ಇಂಡಿಯಾ ರೆಡ್’ ತಂಡವನ್ನು ವಿಕೆಟ್ ಕೀಪರ್ ಬ್ಯಾಟ್ಸ್
ಮನ್ ಪಾರ್ಥಿವ್ ಪಟೇಲ್ ಮುನ್ನಡೆಸಲಿದ್ದಾರೆ. ಪಾರ್ಥಿವ್ ಸಾರಥ್ಯದಲ್ಲೇ ಈ ವರ್ಷ ಗುಜರಾತ್ ರಣಜಿ ಚಾಂಪಿಯನ್ ಆಗಿ ಮೂಡಿಬಂದಿತ್ತು.
ಕಳೆದ ಅಕ್ಟೋಬರ್ನಲ್ಲಿ ನಡೆದ ನ್ಯೂಜಿಲ್ಯಾಂಡ್ ಎದುರಿನ ತವರಿನ ಸರಣಿ ವೇಳೆ ರೋಹಿತ್ ಶರ್ಮ ಗಾಯಾಳಾಗಿ ಭಾರತ ತಂಡದಿಂದ ದೂರಾಗಿದ್ದರು. ಸೋಮವಾರವಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬಯಿ ಪರ 2 ಪಂದ್ಯಗಳನ್ನಾಡುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟಿಗೆ ವಾಪಸಾಗಿದ್ದರು. ಆದರೆ ಇದರಲ್ಲಿ ಗಳಿಸಿದ್ದು ಕೇವಲ 16 ಮತ್ತು 4 ರನ್ ಮಾತ್ರ.
ರೋಹಿತ್ ಶರ್ಮ ಪಾಲಿಗೆ ದೇವಧರ್ ಟ್ರೋಫಿ ಟೂರ್ನಮೆಂಟ್ ಮುಂಬರುವ ಐಪಿಎಲ್ಗೆ ಉತ್ತಮ ವೇದಿಕೆಯಾಗಬೇಕಿದೆ.
ಕರ್ನಾಟಕದ ಮನೀಷ್ ಪಾಂಡೆ, ಮಾಯಾಂಕ್ ಅಗರ್ವಾಲ್, ಪ್ರಸಿದ್ಧ್ ಕೃಷ್ಣ, ಟೀಮ್ ಇಂಡಿಯಾದಿಂದ ದೂರಾಗಿರುವ ಶಿಖರ್ ಧವನ್ ಮೊದಲಾದವರು ಈ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.
ಇಂಡಿಯಾ ಬ್ಲೂ ತಂಡ: ರೋಹಿತ್ ಶರ್ಮ (ನಾಯಕ), ಮನ್ದೀಪ್ ಸಿಂಗ್, ಶ್ರೇಯಸ್ ಅಯ್ಯರ್, ಅಂಬಾಟಿ ರಾಯುಡು, ಮನೋಜ್ ತಿವಾರಿ, ರಿಷಬ್ ಪಂತ್, ದೀಪಕ್ ಹೂಡಾ, ಹರ್ಭಜನ್ ಸಿಂಗ್, ಕೃಣಾಲ್ ಪಾಂಡ್ಯ, ಶಾಬಾಜ್ ನದೀಂ, ಸಿದ್ಧಾರ್ಥ ಕೌಲ್, ಶಾದೂìಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಪಂಕಜ್ ರಾವ್.
ಇಂಡಿಯಾ ರೆಡ್ ತಂಡ: ಪಾರ್ಥಿವ್ ಪಟೇಲ್ (ನಾಯಕ), ಶಿಖರ್ ಧವನ್, ಮನೀಷ್ ಪಾಂಡೆ, ಮಾಯಾಂಕ್ ಅಗರ್ವಾಲ್, ಕೇದಾರ್ ಜಾಧವ್, ಇಶಾಂಕ್ ಜಗ್ಗಿ, ಗುರುಕೀರತ್ ಮಾನ್, ಅಕ್ಷರ್ ಪಟೇಲ್, ಅಕ್ಷಯ್ ಕರ್ಣೆವಾರ್, ಅಶೋಕ್ ದಿಂಡ, ಕುಲವಂತ್ ಖೆಜೊಲಿಯ, ಧವಳ್ ಕುಲಕರ್ಣಿ, ಗೋವಿಂದ ಪೋದ್ದರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ