ಮರ್ರೆ-ನಡಾಲ್‌; ಫೆಡರರ್‌-ಜೊಕೋ ವಿಂಬಲ್ಡನ್‌ ಸೆಮಿಫೈನಲ್‌ ಸಾಧ್ಯತೆ


Team Udayavani, Jul 1, 2017, 3:45 AM IST

djokovic-and-federer-head-t.jpg

ಲಂಡನ್‌: ಪ್ರತಿಷ್ಠಿತ ವಿಂಬಲ್ಡನ್‌ ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಪಂದ್ಯಾವಳಿಗೆ ಕ್ಷಣಗಣನೆ ಆರಂಭಗೊಂಡಿದೆ. ಸೋಮವಾರದಿಂದ ಲಂಡನ್‌ನಲ್ಲಿ ರ್ಯಾಕೆಟ್‌ ಸಮರ ಆರಂಭವಾಗಲಿದ್ದು, ಗೆಲ್ಲುವ ಕುದುರೆಗಳ ಬಗ್ಗೆ ಟೆನಿಸ್‌ ಪಂಡಿತರು ಈಗಾಗಲೇ ನಾನಾ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಪುರುಷರ ಸಿಂಗಲ್ಸ್‌ ಸ್ಪರ್ಧೆಯ ಸಾಧ್ಯತೆಯ ಪ್ರಕಾರ ಹಾಲಿ ಚಾಂಪಿಯನ್‌ ಆ್ಯಂಡಿ ಮರ್ರೆ ಸೆಮಿಫೈನಲ್‌ನಲ್ಲಿ 2 ಬಾರಿಯ ಚಾಂಪಿಯನ್‌ ರಫೆಲ್‌ ನಡಾಲ್‌ ಅವರನ್ನು ಎದುರಿಸಬಹುದು. ಹಾಗೆಯೇ 8ನೇ ವಿಂಬಲ್ಡನ್‌ ಕಿರೀಟದ ಕನಸು ಕಾಣುತ್ತಿರುವ ಹಳೆ ಹುಲಿ ರೋಜರ್‌ ಫೆಡರರ್‌, 3 ಬಾರಿಯ ವಿಜೇತ ನೊವಾಕ್‌ ಜೊಕೋವಿಕ್‌ ಅವರನ್ನು ಉಪಾಂತ್ಯದಲ್ಲಿ ಎದುರಿಸುವ ಸಂಭವ ಇದೆ.

ಅಗ್ರ ಶ್ರೇಯಾಂಕದ ಆ್ಯಂಡಿ ಮರ್ರೆ ಸೋಮವಾರದಂದೇ ಅರ್ಹತಾ ಆಟಗಾರನೊಬ್ಬನ ವಿರುದ್ಧ ಮೊದಲ ಸುತ್ತಿನ ಪಂದ್ಯವನ್ನು ಆಡಲಿದ್ದಾರೆ. 2ನೇ ಶ್ರೇಯಾಂಕದ ಜೊಕೋವಿಕ್‌ ಸ್ಲೊವಾಕಿಯಾದ ಮಾರ್ಟಿನ್‌ ಕ್ಲಿಝಾನ್‌ ಅವರನ್ನು ಎದುರಿಸಲಿದ್ದು, 3ನೇ ಸುತ್ತಿನಲ್ಲಿ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಅವರೊಂದಿಗೆ ಮುಖಾಮುಖೀ ಆಗಬಹುದು.

3ನೇ ಶ್ರೇಯಾಂಕಿತ ಫೆಡರರ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಅವರನ್ನು, 4ನೇ ಶ್ರೇಯಾಂಕದ ನಡಾಲ್‌ ಆಸ್ಟ್ರೇಲಿಯದ ಜಾನ್‌ ಮಿಲ್‌ಮಾÂನ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಫೆಡರರ್‌ ಮತ್ತು ನಡಾಲ್‌ 4ನೇ ಸಲ ಫೈನಲ್‌ನಲ್ಲಿ ಎದುರಾಗಬಹುದು ಎಂಬುದು ಮತ್ತೂಂದು ಲೆಕ್ಕಾಚಾರ. ಇದಕ್ಕೂ ಮುನ್ನ ಇವರಿಬ್ಬರು 2006ರಿಂದ 2008ರ ತನಕ ಸತತ 3 ಪ್ರಶಸ್ತಿ ಸಮರದಲ್ಲಿ ಮುಖಾಮುಖೀಯಾಗಿದ್ದರು. 2008ರ ಕೊನೆಯ ಕಾದಾಟದಲ್ಲಿ 5 ಗಂಟೆಗಳ ಕಾಲ ಸಾಗಿದ 5 ಸೆಟ್‌ಗಳ ಮ್ಯಾರತಾನ್‌ ಹೋರಾಟದಲ್ಲಿ ನಡಾಲ್‌ ವಿಂಬಲ್ಡನ್‌ ಕಿರೀಟ ಏರಿಸಿಕೊಂಡಿದ್ದರು. ಇದು ಗ್ರ್ಯಾನ್‌ಸ್ಲಾಮ್‌ ಇತಿಹಾಸದ ಅಮೋಘ ಫೈನಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಸೆರೆನಾ, ಶರಪೋವಾ ಗೈರು
ಹಾಲಿ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಮತ್ತು ಮಾಜಿ ಚಾಂಪಿಯನ್‌ ಮರಿಯಾ ಶರಪೋವಾ ಈ ಬಾರಿ ಆಡದಿರುವುದರಿಂದ ವಿಂಬಲ್ಡನ್‌ ವನಿತಾ ಸ್ಪರ್ಧೆಗಳ ಆಕರ್ಷಣೆ ಅಷ್ಟರ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಪ್ರಶಸ್ತಿಯ ಹಾದಿ ಮುಕ್ತಗೊಂಡಿದೆ.

ಅಗ್ರ ಶ್ರೇಯಾಂಕಿತೆ, ಕಳೆದ ವರ್ಷದ ರನ್ನರ್ ಅಪ್‌ ಆ್ಯಂಜೆಲಿಕ್‌ ಕೆರ್ಬರ್‌, ಫ್ರೆಂಚ್‌ ಓಪನ್‌ ಚಾಂಪಿಯನ್‌ ಜೆಲೆನಾ ಒಸ್ಟಾಪೆಂಕೊ, ಸಿಮೋನಾ ಹಾಲೆಪ್‌, ಗಾರ್ಬಿನ್‌ ಮುಗುರುಜಾ, ಎಲಿನಾ ಸ್ವಿಟೋಲಿನಾ, ವೀನಸ್‌ ವಿಲಿಯಮ್ಸ್‌, ಪೆಟ್ರಾ ಕ್ವಿಟೋವಾ, ವಿಕ್ಟೋರಿಯಾ ಅಜರೆಂಕಾ ಅವರೆಲ್ಲ ವನಿತಾ ಸಿಂಗಲ್ಸ್‌ ಚಾಂಪಿಯನ್‌ಶಿಪ್‌ನ ಸ್ಟಾರ್‌ ಆಟಗಾರ್ತಿಯರಾಗಿದ್ದಾರೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.