“ಜಾತಿ, ಮತ, ಧರ್ಮ ಕಿತ್ತೂಗೆಯಲು ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳಿ’
Team Udayavani, Jul 31, 2017, 7:37 AM IST
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಮಗನೊಂದಿಗೆ ಚೆಸ್ ಆಡಿದ ಫೋಟೋ ಪ್ರಕಟಿಸಿ ಇಸ್ಲಾಂ ಮೂಲಭೂತವಾದಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಕ್ರಿಕೆಟಿಗ ಮೊಹಮ್ಮದ್ ಕೈಫ್ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.
ಮೂಲಭೂತವಾದಿಗಳ ವರ್ತನೆಯನ್ನು ಕಟು ಪದಗಳಿಂದ ಟೀಕಿಸಿದ್ದಾರೆ. ಅಷ್ಟೇ ಅಲ್ಲ ಜಾತಿ, ಮತ, ಧರ್ಮದ ಬೇಲಿಯನ್ನು ಕಿತ್ತೂಗೆಯಲು ಕ್ರೀಡೆಯಿಂದ ಸಾಧ್ಯ. ನೀವೆಲ್ಲ ಹೆಚ್ಚು ಕ್ರೀಡೆಯಲ್ಲಿ ಪಾಲ್ಗೊಳ್ಳಿ ಅಂಧತ್ವವನ್ನು ತೊಲಗಿಸಿರಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಈ ಮೂಲಕ ಮೂಲಭೂತವಾದಿಗಳಿಗೆ ಕೈಫ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಚೆಸ್ ಒಂದು ಅದ್ಭುತ ಆಟ. ಎಲ್ಲಕ್ಕಿಂತ ಮಿಗಿಲಾಗಿ ಇದು ಭಾರತದ ಆಟ. ಇದಕ್ಕೆ ಪುರಾತನ ಇತಿಹಾಸವಿದೆ. ಚೆಸ್ ಆಡುವ ಮೂಲಕ ನಾನು ಬುದ್ಧಿ ಶಕ್ತಿ ಹೆಚ್ಚಿಸಿಕೊಂಡಿದ್ದೇನೆ. ಹಲವು ಕಷ್ಟದ ಸಂದರ್ಭಗಳನ್ನು ಸಲೀಸಾಗಿ ಎದುರಿಸಿದ್ದೇನೆ. ಚೆಸ್ ಆಟ ಅಷ್ಟರ ಮಟ್ಟಿಗೆ ನನಗೆ ಸಹಾಯ ಮಾಡಿದೆ. ಇದನ್ನು ಆಡುವುದು ಕ್ರೈಂ ಮಾಡಿದಷ್ಟು ದೊಡ್ಡ ತಪ್ಪು ಎನ್ನುವ ಮಟ್ಟದ ಚಿತ್ರಣ ನೀಡಲಾಗಿದೆ ಎಂದು ಅವರು ಟ್ವೀಟರ್ನಲ್ಲಿ ಉತ್ತರಿಸಿದ್ದಾರೆ. ಮೂರು ದಿನಗಳ ಹಿಂದೆ ಕೈಫ್ ಮಗ ನೊಂದಿಗೆ ಚೆಸ್ ಆಡಿದ ಫೋಟೋ ಪ್ರಕಟಿಸಿ ದನ್ನು ಮುಸ್ಲಿಂ ಸಂಪ್ರದಾಯ ವಾದಿಗಳು ಖಂಡಿಸಿದ್ದರು. ಇಸ್ಲಾಂನಲ್ಲಿ ಚೆಸ್ ಆಡಬಾರದು ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ