ಟೈಟಾನ್ಸ್‌ಗೆ ಇಂದು ಪಾಟ್ನಾ ಎದುರಾಳಿ


Team Udayavani, Aug 3, 2017, 7:25 AM IST

edurali.jpg

ಹೈದರಾಬಾದ್‌: ಹಾಲಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ತಂಡವು ಗುರುವಾರ ನಡೆಯುವ ಪ್ರೊ ಕಬಡ್ಡಿ ಲೀಗ್‌ 5ರ ಹೈದರಾಬಾದ್‌ ಚರಣದ ಅಂತಿಮ ಪಂದ್ಯದಲ್ಲಿ ಆತಿಥೇಯ ತೆಲುಗು ಟೈಟಾನ್ಸ್‌ ತಂಡವನ್ನು ಎದುರಿಸಲಿದ್ದು ಗೆಲುವಿನ ಉತ್ಸಾಹದಲ್ಲಿದೆ.

ತನ್ನ ಮೊದಲ ಪಂದ್ಯದಲ್ಲಿ ಪಾಟ್ನಾ ತಂಡವು ತೆಲುಗು ತಂಡವನ್ನು 35-29 ಅಂಕಗಳಿಂದ ಉರುಳಿಸಿತ್ತು. ಪಾಟ್ನಾ ಗೆಲುವಿನಲ್ಲಿ ಪ್ರದೀಪ್‌ ನರ್ವಾಲ್‌ ಅವರ ಆಟ ನಿರ್ಣಾಯಕವಾಗಿತ್ತು. 15 ಅಂಕ ಗಳಿಸಿದ್ದ ನರ್ವಾಲ್‌ ತಂಡದ ಗೆಲುವಿನ ರೂವಾರಿಯಾಗಿದ್ದರು. ಆರಂಭದಲ್ಲಿ ಆತಿಥೇಯ ತೆಲುಗು ಮೇಲುಗೈ ಸಾಧಿಸಿದ್ದರೂ ಪಂದ್ಯ ಸಾಗುತಿªದ್ದಂತೆ ಪಾಟ್ನಾ ಹಿಡಿತ ಸಾಧಿಸುತ್ತ ಹೋಯಿತು. ಅಂತಿಮ ಹಂತದಲ್ಲಿ ಹಲವು ಅಂಕಗಳನ್ನು ಪಡೆಯುವ ಮೂಲಕ ಪಾಟ್ನಾ ಜಯಭೇರಿ ಬಾರಿಸಿತ್ತು. ಗುರುವಾರದ ಪಂದ್ಯ ದಲ್ಲಿಯೂ ಪಾಟ್ನಾ ಮತ್ತೆ ಜಯದ ವಿಶ್ವಾಸದಲ್ಲಿದೆ.

ತವರಿನಲ್ಲಿ ನಡೆಯುತ್ತಿರುವ ಈ ಕೂಟದಲ್ಲಿ ತೆಲುಗು ಟೈಟಾನ್ಸ್‌ಗೆ ಅದೃಷ್ಟ ಕೈಕೊಡುತ್ತಿದೆ. ಆರಂಭಿಕ ಪಂದ್ಯದಲ್ಲಿ ಹೊಸ ತಂಡವಾದ ತಮಿಳ್‌ ತಲೈವಾಸ್‌ ವಿರುದ್ಧ 32-27 ಅಂಕಗಳಿಂದ ಜಯ ಸಾಧಿಸಿದ್ದ ತೆಲುಗು ಈ ಬಳಿಕ ಸತತ ಮೂರು ಪಂದ್ಯಗಳಲ್ಲಿ ಸೋತು ಆಘಾತಕ್ಕೆ ಒಳಗಾಗಿದೆ. ಗುರುವಾರದ ಪಂದ್ಯ ಹೈದರಾಬಾದ್‌ ಚರಣದಲ್ಲಿ ನಡೆಯುವ ಅಂತಿಮ ಪಂದ್ಯವಾಗಿದೆ. 

ಆ. 4ರಿಂದ ಬೆಂಗಳೂರು ಚರಣದ ಪಂದ್ಯಗಳು ಆರಂಭವಾಗಲಿದೆ. ಕಂಠೀರವ ಕ್ರೀಡಾಂಗಣ ಲಭ್ಯವಿಲ್ಲದ ಕಾರಣ ಬೆಂಗಳೂರು ಚರಣದ ಪಂದ್ಯಗಳು ನಾಗ್ಪುರಕ್ಕೆ ಸ್ಥಳಾಂತರಗೊಂಡಿವೆ.

ತೆಲುಗು ಟೈಟಾನ್ಸ್‌ ಹೈದರಾಬಾದ್‌ ಚರಣದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಜಯ ಸಾಧಿಸಿ ಆರಂಕ ಪಡೆದಿದೆ. ವಲಯ “ಬಿ’ಯಲ್ಲಿ ಇರುವ ತೆಲುಗು ಸದ್ಯ ಅಗ್ರಸ್ಥಾನದಲ್ಲಿದೆ. ಒಂದೇ ಪಂದ್ಯ ಆಡಿರುವ ಪಾಟ್ನಾ ಐದಂಕ ಹೊಂದಿದೆ. ವಲಯ “ಎ’ಯಲ್ಲಿ ಎರಡು ಪಂದ್ಯ ಆಡಿರುವ ಡೆಲ್ಲಿ ದಬಾಂಗ್‌ ಆರಂಕದೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಯು ಮುಂಬಾ 5 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

ತವರಿನ ಪಂದ್ಯಗಳಲ್ಲಿ ಆತಿಥೇಯ ತಂಡ ಮೇಲುಗೈ ಸಾಧಿಸಬೇಕಿತ್ತು. ತವರಿನ ಅಂಗಣ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಪಂದ್ಯಗಳು ನಡೆಯುವ ಕಾರಣ ತೆಲುಗು ಟೈಟಾನ್ಸ್‌ ಭರ್ಜರಿ ಆಟ ಆಡಬೇಕಿತ್ತು. ಆದರೆ ಟೈಟಾನ್ಸ್‌ಗೆ ಅದೃಷ್ಟ ಕೈಕೊಟ್ಟಿದೆ. ಪಾಟ್ನಾ ಮತ್ತು ಬೆಂಗಳೂರು ಬುಲ್ಸ್‌ ವಿರುದ್ಧ ಸೋತಿದ್ದ ಟೈಟಾನ್ಸ್‌ ತಂಡವು ಮಂಗಳವಾರ ಇದೇ ಮೊದಲ ಬಾರಿ ಪ್ರೊ ಕಬಡ್ಡಿಯಲ್ಲಿ ಆಡಿದ ಯುಪಿ ಯೋಧಾಸ್‌ ವಿರುದ್ಧ ಸೋತಿದೆ. 

ಈ ಸೋಲಿನಿಂದ ತಂಡದ ಆತ್ಮವಿಶ್ವಾಸಕ್ಕೆ ದೊಡ್ಡ ಪೆಟ್ಟಾಗಿದೆ. ನಮ್ಮ ತಪ್ಪುಗಳೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ ತೆಲುಗು ಟೈಟಾನ್ಸ್‌ ತಂಡದ ಕೋಚ್‌ ನವೀನ್‌ ಕುಮಾರ್‌ ವೈಯಕ್ತಿಕ ಆಟಗಾರರ ವೈಫ‌ಲ್ಯಕ್ಕಿಂತ ನಮ್ಮ ಆಟದ ತಂತ್ರಗಳಲ್ಲಿ ಬದಲಾವಣೆ ಮಾಡಬೇಕಾದ ಅಗತ್ಯ ಕಾಣುತ್ತಿದೆ ಎಂದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.