ಬಿಸಿಸಿಐ ಪದಾಧಿಕಾರಿಗಳಿಗೆ ಮತ್ತೂಮ್ಮೆ ಪದಚ್ಯುತಿ ಭೀತಿ


Team Udayavani, Aug 17, 2017, 11:21 AM IST

17-ST-17.jpg

ನವದೆಹಲಿ: ಬಿಸಿಸಿಐ ಅಗ್ರ ನೇತಾರರಿಗೆ ಮತ್ತೂಮ್ಮೆ ಪದಚ್ಯುತಿಯ ಭೀತಿ ತಟ್ಟಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಹಂಗಾಮಿ ಅಧ್ಯಕ್ಷ, ಕಾರ್ಯದರ್ಶಿ ಸೇರಿ ಅಗ್ರ ಪದಾಧಿಕಾರಿಗಳನ್ನು ಪದಚ್ಯುತಿ ಮಾಡಲು ಅವಕಾಶ ನೀಡಿ ಎಂದು ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು ನ್ಯಾಯ ಪೀಠಕ್ಕೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ನ್ಯಾಯಪೀಠ ಇದನ್ನು ಪರಿಗಣಿಸಿ ದರೆ ಮತ್ತೂಂದು ಆಘಾತಕಾರಿ ಬೆಳವಣಿಗೆಗೆ ಬಿಸಿಸಿಐ ಸಿದ್ಧವಾಗಬೇಕಾಗುತ್ತದೆ.

ಈ ವರ್ಷಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ಆಡಳಿತಾತ್ಮಕ ಸುಧಾರಣೆಗೆ ಅಡ್ಡಿಯಾಗಿದ್ದಾರೆ ಎಂಬ ಕಾರಣದಿಂದ ಅನುರಾಗ್‌ ಠಾಕೂರ್‌ ಮತ್ತು ಅಜಯ್‌ ಶಿರ್ಕೆಯನ್ನು ಅಧ್ಯಕ್ಷ ಮತ್ತು ಕಾರ್ಯದರ್ಶಿ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿತ್ತು. ಆ ನೆನಪು ಇನ್ನೂ ಹಾಗೆಯೇ ಇರುವಾಗಲೇ ಮತ್ತೂಂದು ಬೆಳವಣಿಗೆ ನಡೆಯುತ್ತಿದೆ. ಆಡಳಿತಾಧಿಕಾರಿಗಳ ಸಿಟ್ಟಿಗೆ ಕಾರಣ, ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿಯನ್ನು ಜು.26ರಂದು ನಡೆದ ವಿಶೇಷ
ಸಭೆಯಿಂದ ಹೊರ ಕಳುಹಿಸಿದ್ದು. ಬಿಸಿಸಿಐನ ಎಲ್ಲ ಸಭೆಗಳಲ್ಲಿ ಸಿಇಒ ಕಡ್ಡಾಯವಾಗಿ ಇರಲೇಬೇಕೆಂದು ಹೇಳಿದ್ದರೂ ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿಯವರು ಜೊಹ್ರಿ ಸೇರಿದಂತೆ ಇನ್ನಿತರ ಕೆಲ ಕಾನೂನು ಸಲಹೆಗಾರರನ್ನು ಸಭೆಯಿಂದ ಹೊರ ಹೋಗಲು ಸೂಚಿಸಲಾಗಿತ್ತು! ಇದಕ್ಕೆ
ನ್ಯಾಯಪೀಠದ ಆದೇಶವನ್ನೇ ಆಧಾರವಾಗಿ ನೀಡಲಾಗಿತ್ತು!

ಮತ್ತೂಂದು ಕಡೆ ಸಭೆಯಲ್ಲಿ ಯಾವುದೇ ಸುಧಾರಣೆಗಳ ಬಗ್ಗೆ ಚರ್ಚೆ ನಡೆಸದೆ ಅವುಗಳನ್ನು ಇತರೆ ಪಟ್ಟಿಯಲ್ಲಿಡಲಾಗಿತ್ತು. ಪದಾಧಿಕಾರಿಗಳ ಅನರ್ಹತೆ, ಉನ್ನತ ಸಮಿತಿ ರಚನೆ, ಕಾರ್ಯ ಚಟುವಟಿಕೆಗಳ ಹಂಚಿಕೆ ಮುಂತಾದವುಗಳ ಕುರಿತು ತಟಸ್ಥ ನಿಲುವಿತ್ತು. ಅತ್ಯಂತ ಮಹತ್ವದ ಸ್ವಹಿತಾಸಕ್ತಿ
ವಿವಾದ, ವಿಶೇಷ ಅಧಿಕಾರಿ ನೇಮಕದ ಕುರಿತೂ ವಿಶೇಷ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎನ್ನುವುದು ಆಡಳಿತಾಧಿಕಾರಿಗಳ ಆರೋಪ. ಅಷ್ಟಲ್ಲದೇ ಸಭೆಯ ಪ್ರಕ್ರಿಯೆಗಳ ಕುರಿತು ಆಡಳಿತಾಧಿಕಾರಿಗಳಿಗೆ ಯಾವುದೇ ನೇರ ಮಾಹಿತಿ ಸಿಗದಂತೆ ನೋಡಿಕೊಳ್ಳಲಾಗಿದೆ. ಇದು ಆಡಳಿತಾಧಿಕಾರಿಗಳನ್ನು ದೂರ ವಿಡುವ ಸ್ಪಷ್ಟ ಯತ್ನ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.