ಬಿಸಿಸಿಐ ಜತೆ “ಸೆಟ್ಟಿಂಗ್‌’ ಮಾಡದ ಕಾರಣಕೋಚ್‌ ಆಗಲಿಲ್ಲ: ಸೆಹವಾಗ್‌


Team Udayavani, Sep 16, 2017, 6:00 AM IST

BCCI,-Virender-Sehwag.jpg

ಹೊಸದಿಲ್ಲಿ: ತನಗೆ ಭಾರತೀಯ ಕ್ರಿಕೆಟ್‌ ತಂಡದ ಕೋಚ್‌ ಆಗಲು ಸಾಧ್ಯವಾಗಲಿಲ್ಲ ಏಕೆ ಎಂಬುದನ್ನು ಮಾಜಿ ಆರಂಭಕಾರ ವೀರೇಂದ್ರ ಸೆಹವಾಗ್‌ ಟಿವಿ ಸಂದರ್ಶನವೊಂದರಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ. ತನಗೆ ಬಿಸಿಸಿಐ ಜತೆ ಯಾವುದೇ “ಸೆಟ್ಟಿಂಗ್‌’ ಮಾಡಲು ಸಾಧ್ಯವಾಗಲಿಲ್ಲ, ಮಂಡಳಿಯ ಕೃಪೆಯೂ ತನ್ನ ಮೇಲಿರಲಿಲ್ಲ ಎನ್ನುವ ಮೂಲಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ರಾಜಕೀಯವನ್ನು ಬಹಿರಂಗ ಮಾಡಿದ್ದಾರೆ.

“ನೋಡಿ… ನನಗೆ ಕೋಚ್‌ ಹುದ್ದೆ ಏಕೆ ಸಿಗಲಿಲ್ಲವೆಂದರೆ ನಾನು ಕೋಚ್‌ ಆಯ್ಕೆಗಾರರ ಜತೆ ಯಾವುದೇ ಸೆಟ್ಟಿಂಗ್‌ ಮಾಡಿಕೊಳ್ಳಲಿಲ್ಲ’ ಎಂದು ಡ್ಯಾಶಿಂಗ್‌ ಓಪನರ್‌ ಖ್ಯಾತಿಯ ವೀರೇಂದ್ರ ಸೆಹವಾಗ್‌ “ಇಂಡಿಯಾ ಟಿವಿ’ ಜತೆ ನಡೆಸಿದ ಸಂದರ್ಶನವೊಂದರಲ್ಲಿ ಮಾರ್ಮಿಕವಾಗಿ ಹೇಳಿದರು.

“ನಾನು ಭಾರತ ತಂಡದ ಕೋಚಿಂಗ್‌ ಬಗ್ಗೆ ಆಲೋಚಿಸಿದವನೇ ಅಲ್ಲ. ಬಿಸಿಸಿಐ ಪ್ರಭಾರ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಮತ್ತು ಜಿಎಂ (ಗೇಮ್‌ ಡೆವಲಪ್‌ಮೆಂಟ್‌) ಎಂ.ವಿ. ಶ್ರೀಧರ್‌ ಅವರು ನನ್ನಲ್ಲಿ ಬಂದು ಕೋಚ್‌ ಹುದ್ದೆಗೆ ನೀವೇಕೆ ಪ್ರಯತ್ನಿಸಬಾರದು ಎಂದು ಕೇಳಿ “ಆಫ‌ರ್‌’ ಒಂದನ್ನು ಕೊಟ್ಟರು. ನಾನು ನನ್ನದೇ ಆದ ನಿಗದಿತ ಸಮಯ ತೆಗೆದುಕೊಂಡು ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದೆ…’ ಎಂಬುದಾಗಿ ಸೆಹವಾಗ್‌ ಹೇಳಿದರು.

ಮುಂದುವರಿಯಲು ಕೊಹ್ಲಿ ಸೂಚನೆ
ಈ ಸಂದರ್ಭದಲ್ಲಿ ಸೆಹವಾಗ್‌ ಇನ್ನೂ ಒಂದು ವಿಷಯವನ್ನು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಸುವ‌ ಮೊದಲು ವಿರಾಟ್‌ ಕೊಹ್ಲಿ ಜತೆ ಮಾತನಾಡಿದ್ದಾಗಿಯೂ ತಿಳಿಸಿದರು.

“ಕೋಚ್‌ ಆಫ‌ರ್‌ ಬಂದಾಗ ನಾನು ನಾಯಕ ವಿರಾಟ್‌ ಕೊಹ್ಲಿ ಜತೆ ಮಾತಾಡಿದ್ದೆ. ಅವರು ಮುಂದುವರಿಯುವಂತೆ ಸಲಹೆಯಿತ್ತರು. ಅನಂತರವೇ ನಾನು ಅರ್ಜಿ ಸಲ್ಲಿಸಿದ್ದು. ನನ್ನ ಅಭಿಪ್ರಾಯವೇನಿತ್ತು ಎಂದು ನೀವು ಕೇಳಿದ್ದೇ ಆದರೆ ನಾನು ಹೇಳುವುದೊಂದೇ, ನನಗೆ ಎಂದೂ ಇದರಲ್ಲಿ ಆಸಕ್ತಿ ಇರಲಿಲ್ಲ…’ ಎಂಬುದಾಗಿ ಸೆಹವಾಗ್‌ ಹೇಳಿದರು.

ಮತ್ತೆ ತಪ್ಪು ಮಾಡಲಾರೆ ಎಂದಿದ್ದ ರವಿಶಾಸ್ತ್ರಿ
ಈ ಸಂದರ್ಭದಲ್ಲಿ ರವಿಶಾಸ್ತ್ರಿ ಜತೆ ನಡೆಸಿದ ಮಾತುಕತೆಯನ್ನೂ ಸೆಹವಾಗ್‌ ಬಿಚ್ಚಿಟ್ಟಿದ್ದಾರೆ.”ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ ವೇಳೆ ಇಂಗ್ಲೆಂಡ್‌ನ‌ಲ್ಲಿದ್ದ ನಾನು ರವಿಶಾಸ್ತ್ರಿ ಜತೆಯೂ ಮಾತಾಡಿದ್ದೆ. ನೀವೇಕೆ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಕೇಳಿದ್ದೆ. ಆಗ ಅವರು, ಒಮ್ಮೆ ತಾನು ತಪ್ಪು ಮಾಡಿ ಆಗಿದೆ, ಇದನ್ನು ಪುನರಾವರ್ತಿಸಲು ಬಯಸುವುದಿಲ್ಲ ಎಂದರು. ಅಕಸ್ಮಾತ್‌ ರವಿಶಾಸ್ತ್ರಿ ಮೊದಲೇ ಅರ್ಜಿ ಸಲ್ಲಿಸಿದ್ದರೆ ನಾನು ಖಂಡಿತ ಮುಂದುವರಿಯುತ್ತಿರಲಿಲ್ಲ…’ ಎಂಬುದಾಗಿ ಸೆಹವಾಗ್‌ ಹೇಳಿದರು.

“ಅವರು ನನ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ, ಹೀಗಾಗಿ ಅವರ ಮಾತನ್ನು ಪಾಲಿಸಿ ಸಹಾಯ ಮಾಡೋಣ ಎನಿಸಿತು. ಆದರೆ ನಾನಾಗಿ ಯಾವತ್ತೂ ಕೋಚ್‌ ಹುದ್ದೆಗೆ ಮುಂದಾಗುತ್ತಿರಲಿಲ್ಲ. ಭವಿಷ್ಯದಲ್ಲೂ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇನೆ…’ ಎಂದರು ಸೆಹವಾಗ್‌.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.