ಹೈದರಾಬಾದ್‌ನ ಮಾಜಿ ಕ್ರಿಕೆಟಿಗ ಎಂ.ವಿ. ಶ್ರೀಧರ್‌ ನಿಧನ


Team Udayavani, Oct 31, 2017, 6:45 AM IST

MV-Sridhar.jpg

ಹೈದರಾಬಾದ್‌: ಹೈದರಾಬಾದ್‌ ರಣಜಿ ತಂಡದ ಮಾಜಿ ನಾಯಕ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಜನರಲ್‌ ಮ್ಯಾನೇಜರ್‌ ಆಗಿಯೂ ಕರ್ತವ್ಯ ನಿಭಾಯಿಸಿದ್ದ ಎಂ.ವಿ. ಶ್ರೀಧರ್‌ ಸೋಮವಾರ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 51 ವರ್ಷವಾಗಿತ್ತು.

ಮಧ್ಯಾಹ್ನ ಹೈದರಾಬಾದ್‌ ನಿವಾಸದಲ್ಲಿದ್ದಾಗ ಶ್ರೀಧರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಶ್ರೀಧರ್‌ ಅಗಲಿದ್ದಾರೆ.

1966ರಲ್ಲಿ ವಿಜಯವಾಢದಲ್ಲಿ ಜನಿಸಿದ ಮಟುರಿ ವೆಂಕಟ ಶ್ರೀಧರ್‌ ಆಕರ್ಷಕ ಶೈಲಿಯ ಬಲಗೈ ಬ್ಯಾಟ್ಸ್‌ಮನ್‌ ಆಗಿದ್ದರು. 1988-2000ದ ಅವಧಿಯಲ್ಲಿ ಹೈದರಾಬಾದ್‌ ಪರ ರಣಜಿ ಆಡಿದ ಅವರು ತಂಡದ ನಾಯಕನಾಗಿಯೂ ಉತ್ತಮ ನಿರ್ವಹಣೆ ತೋರಿದರು. 97 ಪ್ರಥಮ ದರ್ಜೆ ಪಂದ್ಯಗಳಿಂದ 6,701 ರನ್‌ ಬಾರಿಸಿದ ಹೆಗ್ಗಳಿಕೆ ಶ್ರೀಧರ್‌ ಅವರದು. 1994ರಲ್ಲಿ ಆಂಧ್ರಪ್ರದೇಶ ವಿರುದ್ಧ 366 ರನ್‌ ಬಾರಿಸಿದ್ದು ಅವರ ಜೀವನಶ್ರೇಷ್ಠ ಸಾಧನೆ. ಇದು ರಣಜಿ ಇತಿಹಾಸದ 3ನೇ ಸರ್ವಾಧಿಕ ವೈಯಕ್ತಿಕ ಮೊತ್ತವಾಗಿದೆ. ಒಟ್ಟು 21 ಶತಕ ಬಾರಿಸಿದ್ದಾರೆ.

ಶ್ರೀಧರ್‌ ವೃತ್ತಿಯಲ್ಲಿ ವೈದ್ಯರೆಂಬುದು ಅನೇಕರಿಗೆ ತಿಳಿದಿರದ ಸಂಗತಿ. ಹೈದರಾಬಾದ್‌ ಕ್ರಿಕೆಟ್‌ ಮಂಡಳಿಯಲ್ಲಿ (ಎಚ್‌ಸಿಎ) ವಿವಿಧ ಹುದ್ದೆ ಅಲಂಕರಿಸಿದ ಬಳಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 2013ರಲ್ಲಿ ಎನ್‌. ಶ್ರೀನಿವಾಸನ್‌ ಕಾರ್ಯಾವಧಿಯಲ್ಲಿ ಜಿಎಂ ಆಗಿ ಬಿಸಿಸಿಐ ಪ್ರವೇಶಿಸಿದ್ದರು. ಕ್ರಿಕೆಟ್‌ ವಕ್ತಾರನಾಗಿ ಕರ್ತವ್ಯ ನಿಭಾಯಿಸುವಲ್ಲಿ ಶ್ರೀಧರ್‌ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು.

ಮಗಳ ಬರ್ತ್‌ಡೇ ತಯಾರಿ
ಹೈದರಾಬಾದ್‌ ಕ್ರಿಕೆಟ್‌ ಮಂಡಳಿಯ ಸದಸ್ಯ, ಶ್ರೀಧರ್‌ ಅವರ ಗೆಳೆಯರೂ ಆಗಿರುವ ಡಿ. ನರಸಿಂಗ ರಾವ್‌ ಈ ಕುರಿತು ಮಾಧ್ಯಮಗಳೊಂದಿಗೆ ಮಾತಾಡಿದ್ದಾರೆ. “ಶ್ರೀಧರ್‌ ನನ್ನ ಜತೆ ಬೆಳಗ್ಗೆ ದೂರವಾಣಿಯಲ್ಲಿ ಮಾತಾಡುತ್ತ, ಕಳೆದೊಂದು ವಾರದಿಂದ ಆರೋಗ್ಯ ಸರಿ ಇಲ್ಲ ಎಂದಿದ್ದರು. 12.30ರ ವೇಳೆ ಆರೋಗ್ಯ ಬಿಗಡಾಯಿಸಿದ್ದರಿಂದ ಸಂಬಂಧಿ ಒಬ್ಬರನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ. ಊಟವನ್ನೂ ಮಾಡಿದ್ದಾರೆ. ಆದರೆ ಒಂದು ಗಂಟೆ ಬಳಿಕ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಅವರು ತಮ್ಮ ಮಗಳ ಹುಟ್ಟಿದ ಹಬ್ಬದ ತಯಾರಿಯಲ್ಲಿದ್ದರು. ನ. 2ಕ್ಕೆ ಮಗಳ ಬರ್ತ್‌ಡೇ ಇತ್ತು. ಘಟನೆಯ ವೇಳೆ ಮಗಳೂ ಮನೆಯಲ್ಲಿದ್ದರು’ ಎಂದು ನರಸಿಂಗ ರಾವ್‌ ತಿಳಿಸಿದರು. ಶ್ರೀಧರ್‌ ಅಂತ್ಯಕ್ರಿಯೆ ಮಂಗಳವಾರ ಹೈದರಾಬಾದ್‌ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.