ಅಸೂಯೆಯಿಂದ ಧೋನಿಯನ್ನು ಟೀಕಿಸುತ್ತಿದ್ದಾರೆ: ರವಿಶಾಸ್ತ್ರಿ ವ್ಯಂಗ್ಯ


Team Udayavani, Nov 11, 2017, 7:00 AM IST

Ravishastri,-Mahendra-Singh.jpg

ಕೋಲ್ಕತಾ: ಇತ್ತೀಚೆಗೆ ನ್ಯೂಜಿಲೆಂಡ್‌ ವಿರುದ್ಧ ಟಿ20ಯಲ್ಲಿ ಧೋನಿ ವಿಫ‌ಲರಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ಬೆನ್ನಲ್ಲೇ ಧೋನಿಯನ್ನು ಸಮರ್ಥಿಸಿಕೊಂಡು ನಾಯಕ ಕೊಹ್ಲಿ ಮಾತನಾಡಿದ್ದರು. ಆದರೆ ಟಿ20 ಮಾದರಿಯಿಂದ ಧೋನಿಯನ್ನು ಕೈಬಿಡಬೇಕೆಂಬ ಆಗ್ರಹ ಜೋರಾಗಿದೆ. ಇದಕ್ಕೆ ಅಷ್ಟೇ ಕಟು ಪ್ರತ್ಯುತ್ತರ ನೀಡಿರುವ ಭಾರತ ತಂಡದ ಕೋಚ್‌ ರವಿಶಾಸ್ತ್ರಿ, ಧೋನಿ ಟೀಕಾಕಾರರು ಅಸೂಯಾಪೀಡಿತರು ಎಂದು ವ್ಯಂಗ್ಯವಾಡಿದ್ದಾರೆ.

ಕೆಲವರು ಧೋನಿ ಕೆಟ್ಟ ಆಟವಾಡಲಿ ಎಂದು ಬಯಸುತ್ತಿದ್ದಾರೆ. ಅವರು ಧೋನಿಯ ವೃತ್ತಿ ಜೀವನವನ್ನು ಅಂತ್ಯಗೊಳಿಸಲು ಬಯಸುತ್ತಿದ್ದಾರೆ. ಆದರೆ ಧೋನಿಯಂತಹ ದಿಗ್ಗಜರು ತಮ್ಮ ಅಂತ್ಯವನ್ನು ತಾವೇ ನಿರ್ಧರಿಸುತ್ತಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಧೋನಿ ವಿರುದ್ಧ ಯಾರು ಏನೇ ಹೇಳಲಿ ಅದು ನಮ್ಮಲ್ಲಿ ಯಾವುದೇ ವ್ಯತ್ಯಾಸ ಮಾಡುವುದಿಲ್ಲ. ಧೋನಿ ಸ್ಥಾನವೇನು ಎನ್ನುವುದು ನಮಗೆ ಗೊತ್ತಿದೆ. ಅವರು ತಂಡಕ್ಕೋಸ್ಕರ ಆಡುವ ವ್ಯಕ್ತಿ. ಹಿಂದೆ ಶ್ರೇಷ್ಠ ನಾಯಕರಾಗಿದ್ದರು. ಈಗ ತಂಡಕ್ಕೋಸ್ಕರ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ ಎಂದು ರವಿಶಾಸ್ತ್ರಿ ಮಾಜಿ ನಾಯಕನ ಬೆನ್ನಿಗೆ ಬಲವಾಗಿ ನಿಂತಿದ್ದಾರೆ.

ಕೆಲವೇ ಸಮಯದ ಹಿಂದೆ ನಾನೂ ಟಿವಿಯಲ್ಲಿ ಕಾಣಿಸಿಕೊಳ್ಳುತ್ತಿದ್ದೆ. ಜನ ನನಗೆ ಪ್ರಶ್ನೆ ಕೇಳುತ್ತಿದ್ದರು. ಟೀವಿ ಕಾರ್ಯಕ್ರಮ ನಡೆಯಲು ಪ್ರಶ್ನೆಗಳಿಗೆ ಉತ್ತರಿಸಲೇಬೇಕು. ಧೋನಿ ಅಸಾಮಾನ್ಯ ಆಟಗಾರ. ನಮ್ಮ ಅತ್ಯದ್ಭುತ ಆಟಗಾರರಲ್ಲಿ ಒಬ್ಬರು. ಆದ್ದರಿಂದ ಅವರು ಯಾವಾಗಲೂ ಟೀವಿ ಕಾರ್ಯಕ್ರಮಗಳಲ್ಲಿ ಮುಖ್ಯ ಚರ್ಚಾ ವಿಷಯವಾಗಿರುತ್ತಾರೆ. ಅವರು ದಂತಕಥೆ ಎಂಬ ಕಾರಣಕ್ಕೆ ಅಂತಹ ಪ್ರಾಮುಖ್ಯತೆ ಬಂದಿದೆ. ಅವರ ಎತ್ತರಕ್ಕೆ ನೀವೂ ಏರಿದಾಗ ನಿಮಗೂ ಟಿವಿಯಲ್ಲಿ ಅಂತಹದ್ದೇ ಮಹತ್ವ ದೊರೆಯುತ್ತದೆ ಎಂದು ರವಿಶಾಸ್ತ್ರಿ ಧ್ವನಿಪೂರ್ಣವಾಗಿ ಹೇಳಿದ್ದಾರೆ.

ಇತ್ತೀಚೆಗೆ ಧೋನಿ ಟಿ20ಯಲ್ಲಿ ಬಹಳ ನಿಧಾನವಾಗಿ ಆಡಿದ್ದನ್ನು ಪ್ರಸ್ತಾಪಿಸಿರುವ ವಿವಿಎಸ್‌ ಲಕ್ಷ್ಮಣ್‌, ಅಜಿತ್‌ ಅಗರ್ಕರ್‌, ಆಕಾಶ್‌ ಚೋಪ್ರಾ ಟಿ20ಯಿಂದ ಅವರನ್ನು ಕೈಬಿಡುವುದು ಸರಿ ಎಂದಿದ್ದರು. ಇದಕ್ಕೆ ಸೈಯದ್‌ ಕೀರ್ಮಾನಿ, ಪ್ರಗ್ಯಾನ್‌ ಓಜಾ, ನಮನ್‌ ಓಜಾ ಸೇರಿ ಹಲವರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಧೋನಿ ವಿರುದ್ಧ ಸ್ವರವೆದ್ದಾಗೆಲ್ಲ ರವಿಶಾಸ್ತ್ರಿ ಬಲವಾಗಿ ಧ್ವನಿ ಎತ್ತಿರುವುದನ್ನು ನಾವು ನೆನಪಿಸಿಕೊಳ್ಳಬಹುದು. ಈ ಹಿಂದೆ ಧೋನಿಯನ್ನು ಕೈಬಿಡುವ ಬಗ್ಗೆ ಚರ್ಚೆ ನಡೆದಾಗ 2019ರ ವಿಶ್ವಕಪ್‌ವರೆಗೆ ಧೋನಿ ತಂಡದಲ್ಲಿರುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.