ಭಾರತದ ಆತಿಥ್ಯದಲ್ಲಿ 2023ರ ವಿಶ್ವಕಪ್‌!


Team Udayavani, Dec 12, 2017, 6:15 AM IST

2023-World-Cup-in-India!.jpg

ಹೊಸದಿಲ್ಲಿ: ಭಾರತದ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಒಂದು ಸಿಹಿ ಸುದ್ದಿ. ಆದರೆ ಇದು ಸಾಕಾರಗೊಳ್ಳಬೇಕಾದರೆ ಇನ್ನೂ 6 ವರ್ಷಗಳ ತನಕ ಕಾಯಬೇಕು. ಅದೇನೆಂದರೆ, 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಭಾರತದ ಆತಿಥ್ಯದಲ್ಲಿ ನಡೆಯಲಿದೆ!

ಐಸಿಸಿ ಹಾಗೂ ಬಿಸಿಸಿಐ ಇದಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಲಿದ್ದು, ಐಸಿಸಿ ಸಭೆಯಲ್ಲಿ ವಿಷಯ ಪ್ರಸ್ತಾವನೆ ಆಗಲಿದೆ. ಬಳಿಕ ಅಂಗೀಕಾರದ ಮುದ್ರೆ ಬೀಳಲಿದೆ ಎನ್ನಲಾಗಿದೆ. ಮುಂದಿನ ವಿಶ್ವಕಪ್‌ ಪಂದ್ಯಾವಳಿ 2019ರಲ್ಲಿ ಇಂಗ್ಲೆಂಡ್‌ನ‌ಲ್ಲಿ ನಡೆಯಲಿದ್ದು, ಅಷ್ಟರಲ್ಲಿ 2023ರ ವಿಶ್ವಕಪ್‌ ಕೂಟದ ಆತಿಥೇಯ ರಾಷ್ಟ್ರವನ್ನು ಅಧಿಕೃತವಾಗಿ ಪ್ರಕಟಿಸಬೇಕಿದೆ.

ಇದರ ಜತೆಯಲ್ಲೇ ಮಿನಿ ವಿಶ್ವಕಪ್‌ ಎಂದೇ ಗುರುತಿಸಲ್ಪಡುವ “ಐಸಿಸಿ ಚಾಂಪಿಯನ್ಸ್‌ ಟ್ರೋಫಿ’ ಪಂದ್ಯಾವಳಿಯನ್ನೂ ಭಾರತ ಆಯೋಜಿಸಲಿದೆ. ಇದರ ಮುಂದಿನ ಆವೃತ್ತಿ 2021ರಲ್ಲಿ ನಡೆಯುವ ಸಂಭವವಿದೆ.

ಕಪಿಲ್‌ ಪಡೆಯ ಗೆಲುವಿನ ಸ್ಫೂರ್ತಿ
1983ರಲ್ಲಿ ಕಪಿಲ್‌ದೇವ್‌ ಸಾರಥ್ಯದ ಭಾರತ 2 ಬಾರಿಯ ಹಾಲಿ ಚಾಂಪಿಯನ್‌ ವೆಸ್ಟ್‌ ಇಂಡೀಸನ್ನು ಉರುಳಿಸಿ ವಿಶ್ವಕಪ್‌ ಗೆದ್ದು ಕ್ರಿಕೆಟ್‌ ಜಗತ್ತನ್ನೇ ಅಚ್ಚರಿಯಲ್ಲಿ ಮುಳುಗಿಸಿದ್ದು ಈಗ ಇತಿಹಾಸ. ಇಲ್ಲಿಂದ ಭಾರತದಲ್ಲಿ ಏಕದಿನ ಕ್ರಿಕೆಟ್‌ ಕ್ರೇಜ್‌ ತಾರಕಕ್ಕೇರಿತು ಎನ್ನಲಡ್ಡಿಯಿಲ್ಲ. ಇದರಿಂದ ಸ್ಫೂರ್ತಿ ಪಡೆ ಭಾರತ 1987ರಲ್ಲಿ ಮೊದಲ ವಿಶ್ವಕಪ್‌ ಕೂಟವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಕ್ರಿಕೆಟ್‌ ಜನಕರ ನಾಡಾದ ಇಂಗ್ಲೆಂಡಿನಿಂದ ಈ ಪ್ರತಿಷ್ಠಿತ ಪಂದ್ಯಾವಳಿಯನ್ನು ಮೊದಲ ಬಾರಿಗೆ ಬೇರೆ ಕ್ರಿಕೆಟ್‌ ರಾಷ್ಟ್ರದ ಆತಿಥ್ಯದಲ್ಲಿ ನಡೆಸಲಾಗಿತ್ತು. ಬಳಿಕ 1996 ಮತ್ತು 2011ರಲ್ಲೂ ವಿಶ್ವಕಪ್‌ ಪಂದ್ಯಾವಳಿ ಭಾರತದ ಪ್ರಧಾನ ಆತಿಥ್ಯದಲ್ಲಿ ಸಾಗಿತು.

ಈ ಸಂದರ್ಭದಲ್ಲೆಲ್ಲ ಒಂದಕ್ಕಿಂತ ಹೆಚ್ಚು ರಾಷ್ಟ್ರಗಳು ಸೇರಿಕೊಂಡು ವಿಶ್ವಕಪ್‌ ಆಯೋಜಿಸಿದ್ದವು. ಭಾರತದೊಂದಿಗೆ ಪಾಕಿಸ್ಥಾನ, ಶ್ರೀಲಂಕಾ, ಬಾಂಗ್ಲಾದೇಶ ಕೂಡ ಕೈಜೋಡಿಸಿದ್ದವು. ಆದರೆ 2023ರ ವಿಶ್ವಕಪ್‌ ಆತಿಥ್ಯದಲ್ಲಿ ಒಂದು ವೈಶಿಷ್ಟéವಿದೆ. ಇದನ್ನು ಭಾರತವೊಂದೇ ನಡೆಸಿಕೊಳ್ಳಲಿದೆ!

ಇದೇ ವೇಳೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಆತಿಥ್ಯ ಕೂಡ ಭಾರತದ ಪಾಲಾಗಲಿದೆ. ಆದರೆ ಇದರ ಮುಂದಿನ ಆವೃತ್ತಿ ನಡೆಯುವುದು ಯಾವಾಗ ಎಂಬುದು ಇನ್ನೂ ಅಧಿಕೃತಗೊಂಡಿಲ್ಲ. ಬಹುಶಃ 2021ರಲ್ಲಿ ನಡೇದಿತೆಂಬ ನಿರೀಕ್ಷೆ ಇದೆ.

ಈ ಬಾರಿ ಇಂಗ್ಲೆಂಡಿನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ಪಾಕಿಸ್ಥಾನಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.