ಅಖಾಡದಲ್ಲೇ ಹೊಡೆದಾಡಿದ ಸುಶೀಲ್‌, ರಾಣಾ ಬೆಂಬಲಿಗರು


Team Udayavani, Dec 30, 2017, 6:25 AM IST

Commonwealth-Games,.jpg

ಹೊಸದಿಲ್ಲಿ: ಮುಂದಿನ ವರ್ಷದ ಕಾಮನ್‌ವೆಲ್ತ್‌ ಗೇಮ್ಸ್‌ಗಾಗಿ ಶುಕ್ರವಾರ ನಡೆದ ಆಯ್ಕೆ ಟ್ರಯಲ್ಸ್‌ ಬಳಿಕ ಒಲಿಂಪಿಕ್ಸ್‌ನಲ್ಲಿ ಅವಳಿ ಪದಕ ಗೆದ್ದಿರುವ ಸುಶೀಲ್‌ ಕುಮಾರ್‌ ಮತ್ತು ಕುಸ್ತಿಪಟು ಪರ್ವೀನ್‌ ರಾಣ ಅವರ ಬೆಂಬಲಿಗರ ನಡುವೆ ಗುದ್ದಾಟ ನಡೆದ ಘಟನೆ ಸಂಭವಿಸಿದೆ.

ಮುಂದಿನ ವರ್ಷದ ಎಪ್ರಿಲ್‌ನಲ್ಲಿ ನಡೆಯುವ ಗೋಲ್ಡ್‌ ಕೋಸ್ಟ್‌ ಗೇಮ್ಸ್‌ಗೆ ಶುಕ್ರವಾರ ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯ್ಕೆ ಟ್ರಯಲ್ಸ್‌ ನಡೆಯಿತು. ಭಾರತೀಯ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿ| ಭೂಷಣ್‌ ಸಿಂಗ್‌ ಶರಣ್‌ ಸಹಿತ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರಯಲ್ಸ್‌ ಬಳಿಕ ಸುಶೀಲ್‌ ಮತ್ತು ರಾಣ ಬೆಂಬಲಿಗರ ನಡುವೆ ತೀವ್ರ ಹೊಡೆದಾಟ ನಡೆಯಿತು. ಆಯ್ಕೆ ಟ್ರಯಲ್ಸ್‌ನಲ್ಲಿ ಗೆಲುವು ಸಾಧಿಸಿರುವ ಸುಶೀಲ್‌ ಕುಮಾರ್‌ ಮುಂಬರುವ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಸಸತ ಮೂರನೇ ಚಿನ್ನಕ್ಕಾಗಿ ಪ್ರಯತ್ನಿಸಲಿದ್ದಾರೆ.

ಮೂರು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಸ್ಪರ್ಧೆಗೆ ಮರಳಿ ಕಾಮನ್‌ವೆಲ್ತ್‌ ಚಾಂಪಿಯನ್‌ಶಿಪ್‌ನ ಚಿನ್ನ ಜಯಿಸಿದ್ದ ಸುಶೀಲ್‌ 74 ಕೆ.ಜಿ. ವಿಭಾಗದಲ್ಲಿ ನಡೆದ ಎಲ್ಲ ಕಾದಾಟಗಳಲ್ಲಿ ಜಯ ಸಾಧಿಸಿದ್ದರು. ಆದರೆ ಸೆಮಿಫೈನಲ್‌ನಲ್ಲಿ ಸುಶೀಲ್‌ ವಿರುದ್ಧ ಸೋತ ಬಳಿಕ ರಾಣ ಅವರು ಸುಶೀಲ್‌ ಬೆಂಬಲಿಗರು ನನ್ನ ಮತ್ತು ಹಿರಿಯ ಸಹೋದರನಿಗೆ ಹೊಡೆದಿದ್ದಾರೆ ಮಾತ್ರವಲ್ಲದೇ ರಿಂಗ್‌ಗೆ ಪ್ರವೇಶಿಸಿದರೆ ಸುಮ್ಮನೆ ಬಿಡುವುದಿಲ್ಲವೆಂದು ಹೆದರಿಸಿದ್ದರು ಎಂದು ದೂರಿದರು.

ಇದಕ್ಕೆ ಉತ್ತರವಾಗಿ ಸುಶೀಲ್‌ ಕೂಡ ಕಾದಾಟದ ವೇಳೆ ರಾಣ ನನಗೆ ಕಚ್ಚಿದರು. ಆದರೆ ಇದರಿಂದ ತೊಂದರೆ ಇಲ್ಲ. ಉತ್ತಮ ನಿರ್ವಹಣೆ ನೀಡದಂತೆ ಮಾಡಲು ಇದು ಅವರು ಮಾಡಿದ ತಂತ್ರವಾಗಿರಬಹುದು. ಇದೆಲ್ಲ ಆಟದ ಅಂಗವೆಂದು ಹೇಳಿದ್ದರು.  ಇಲ್ಲಿ ಏನು ನಡೆಯಿತೋ ಅದು ತಪ್ಪು. ಇದನ್ನು ನಾನು ಖಂಡಿಸುತ್ತೇನೆ. ಕಾದಾಟ ಮುಗಿದ ಬಳಿಕ ತೀರ್ಪನ್ನು ಪರಸ್ಪರ ಗೌರವಿಸಬೇಕಿತ್ತು ಎಂದವರು ತಿಳಿಸಿದರು.

ಕೆಲವು ವಾರಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಕಾಮನ್‌ವೆಲ್ತ್‌ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ 34 ವರ್ಷದ ಸುಶೀಲ್‌ ಅವರು ರಾಣ ಅವರನ್ನು ಸೋಲಿಸಿ ಚಿನ್ನ ಜಯಿಸಿದ್ದರು. ಆಬಳಿಕ ರಾಣ ಸಹಿತ ಮೂವರು ಕುಸ್ತಿಪಟುಗಳು ಕಳೆದ ತಿಂಗಳು ನಡೆದ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಕುಸ್ತಿಪಟುವಿಗೆ “ಗೌರವ’ ಸಲ್ಲಿಸುವ ಕಾರಣಕ್ಕಾಗಿ ವಾಕ್‌ಓವರ್‌ ನೀಡಿದ್ದರು.

ಆದರೆ ಶುಕ್ರವಾರ ನಡೆದ ಆಯ್ಕೆ ಟ್ರಯಲ್ಸ್‌ ಬಳಿಕ ರಾಣ ಅವರು ಸುಶೀಲ್‌ ವಿರುದ್ಧ ಹರಿಹಾಯ್ದರು. ಸುಶೀಲ್‌ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ ಮತ್ತು ಮುಂಬರುವ ಪ್ರೊ ಕುಸ್ತಿ ಲೀಗ್‌ನಲ್ಲಿ ಭಾಗವಹಿಸಿದರೆ ಸುಮ್ಮನೆ ಬಿಡುವುದಿಲ್ಲವೆಂದು ಬೆದರಿಸಿದ್ದಾರೆ ಎಂದು ರಾಣ ದೂರಿದ್ದಾರೆ.

ಕುಸ್ತಿ ಸ್ಪರ್ಧೆ ನಡೆದ ತಾಣದ ಹೊರಗಡೆ ಬೆಂಬಲಿಗರು ಗುದ್ದಾಟ ನಡೆಸಿದ್ದಾರೆ. ಇದನ್ನು ನಾನು ನೋಡಿಲ್ಲ. ಆದರೆ ಫೆಡರೇಶನ್‌ಗೆ ಯಾರಾದರೂ ಅಧಿಕೃತವಾಗಿ ದೂರನ್ನು ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಫೆಡರೇಶನ್‌ ಅಧ್ಯಕ್ಷ ಶರಣ್‌ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.