ಸುಶೀಲ್‌- ಪ್ರವೀಣ್‌ ನಡುವೆ ಕದನ


Team Udayavani, Jan 10, 2018, 1:14 PM IST

10-34.jpg

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಒಂದು ಬೆಳ್ಳಿ, ಒಂದು ಕಂಚು ಗೆದ್ದಿರುವ ಕುಸ್ತಿತಾರೆ ಸುಶೀಲ್‌ ಕುಮಾರ್‌ ಮತ್ತು ಕಾಮನ್‌ ವೆಲ್ತ್‌ ಚಿನ್ನ ವಿಜೇತ ಪ್ರವೀಣ್‌ ರಾಣಾ ನಡುವೆ ರೋಚಕ ಕುಸ್ತಿಪಂದ್ಯವೊಂದಕ್ಕೆ ವೇದಿಕೆ ನಿರ್ಮಾಣವಾಗಿದೆ. ಜ.9ರಿಂದ 24ರವರೆಗೆ ನಡೆಯಲಿರುವ ಪ್ರೊ ಕುಸ್ತಿ ಲೀಗ್‌ನಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕೆ ಯಾಕೆ ಇಷ್ಟು ಮಹತ್ವವೆಂಬ ಪ್ರಶ್ನೆಯೆ? ಈ ಇಬ್ಬರ ನಡುವೆ ಇತ್ತೀಚೆಗಷ್ಟೆ ಭಾರೀ ಗಲಾಟೆಯಾಗಿತ್ತು. ಒಬ್ಬರು ಇನ್ನೊಬ್ಬರ ಮೇಲೆ ಆಕ್ರೋಶದ ಕಿಡಿಗಳನ್ನು ಹಾರಿಸಿದ್ದರು.

ಪ್ರವೀಣ್‌ ರಾಣಾ ಒಂದು ಹೆಜ್ಜೆ ಮುಂದೆ ಹೋಗಿ, ಕ್ಯಾನ್ಸರ್‌ ಪೀಡಿತ ತನ್ನ ತಾಯಿಗಾಗಿ ಸುಶೀಲ್‌ ಕುಮಾರ್‌ರನ್ನು ಸೋಲಿಸಿಯೇ ತೀರುತ್ತೇನೆಂದು ಶಪಥ ಮಾಡಿದ್ದರು. ಇದಕ್ಕೆಲ್ಲ ಕಾರಣವೂ ಇದೆ. ಇತ್ತೀಚೆಗಷ್ಟೇ ಈ ವರ್ಷದ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಅರ್ಹತಾ ಕುಸ್ತಿ ಪಂದ್ಯ ನಡೆದಿತ್ತು. ಆ ವೇಳೆ ಪ್ರವೀಣ್‌ ರಾಣಾರನ್ನು ಸುಶೀಲ್‌ ಕುಮಾರ್‌ ಸೋಲಿಸಿದ್ದರು. ಪಂದ್ಯ ಮುಗಿದ ನಂತರ ಸುಶೀಲ್‌ ಕುಮಾರ್‌ ಬೆಂಬಲಿಗರು ಪ್ರವೀಣ್‌ ರಾಣಾ ಮೇಲೆ ಹಲ್ಲೆ ನಡೆಸಿದ್ದರು. ಆಗ ಪ್ರತಿಕ್ರಿಯಿಸಿದ್ದ ಸುಶೀಲ್‌, ತಾನು ತಪ್ಪಿತಸ್ಥ ಎಂದು ಸಾಬೀತುಪಡಿಸಿದರೆ ಕುಸ್ತಿಯಿಂದಲೇ ನಿವೃತ್ತನಾಗುವುದಾಗಿ ತಿಳಿಸಿದ್ದರು. ಇದಕ್ಕೆ ಪ್ರವೀಣ್‌ ರಾಣಾ ಉತ್ತರಿಸಿ, ತನ್ನ ತಾಯಿಗೆ ಸುಶೀಲ್‌ ಬೆಂಬಲಿಗರು ತನ್ನ ಮೇಲೆ ಹಲ್ಲೆ ನಡೆಸಿರುವುದು ನೋವು ತರಿಸಿದೆ. ಆಕೆ ಕ್ಯಾನ್ಸರ್‌ ಪೀಡಿತೆ. ಅಂತಹ ತಾಯಿ ನೊಂದುಕೊಂಡಿರುವುದರಿಂದ ಸುಶೀಲ್‌ ಕುಮಾರ್‌ರನ್ನು ಸೋಲಿಸಿಯೇ ತೀರುತ್ತೇನೆಂದು ಹೇಳಿಕೊಂಡಿದ್ದರು. ಇದೇ ಕಾರಣಕ್ಕೆ ಪ್ರಸ್ತುತ ಪ್ರೊ ಕುಸ್ತಿ ಲೀಗ್‌ ಪಂದ್ಯ ಭಾರೀ ಮಹತ್ವ ಪಡೆದುಕೊಂಡಿದೆ. ಜ.21ರಂದು ಸುಶೀಲ್‌ ಅವರ ಡೆಲ್ಲಿ ಸುಲ್ತಾನ್ಸ್‌ ಮತ್ತು ರಾಣಾ ಅವರ ವೀರ್‌ ಮರಾಠಾಸ್‌ ನಡುವೆ ದೆಹಲಿಯಲ್ಲಿಯೇ ಪಂದ್ಯ  ನಡೆಯಲಿದೆ. ಆಗ ತೀವ್ರ ಕದನ ಕುತೂಹಲವನ್ನು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.