ಪ್ರೊ ಕಬಡ್ಡಿಗೆ ಎದುರಾಗಿ ಹೇ ಕಬಡ್ಡಿ ಆರಂಭ


Team Udayavani, Jan 21, 2018, 12:54 PM IST

pro-kabaddi.jpg

ಬೆಂಗಳೂರು: ಒಂದು ಕಡೆ ಪ್ರೊಕಬಡ್ಡಿ ದಿನಾಂಕ ಪ್ರಕಟವಾಗಿದೆ. ಈ ಬೆನ್ನಲ್ಲೇ ದೇಶದಲ್ಲಿ ಅದೇ ಮಾದರಿಯಲ್ಲಿ ಮತ್ತೂಂದು ಕಬಡ್ಡಿ ಲೀಗ್‌ ಆಯೋಜನೆಗೊಳ್ಳಲಿದೆ ಎನ್ನುವ ಅಧಿಕೃತ ಸುದ್ದಿ ಹೊರಬಿದ್ದಿದೆ. 

ಈ ವಿಷಯವನ್ನು ಬೆಂಗಳೂರಿನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಬಡ್ಡಿ ಸಂಸ್ಥೆ ಅಧ್ಯಕ್ಷ ಎಂ.ವಿ.ಪ್ರಸಾದ್‌ಬಾಬು ಹೇಳಿದ್ದಾರೆ. ದೇಶದಲ್ಲಿ ಪ್ರೊ ಕಬಡ್ಡಿ ಮಾದರಿಯಲ್ಲಿಯೇ ಅದ್ಧೂರಿಯಾಗಿ ಹೇ ಕಬಡ್ಡಿ ಕೂಟ ಆರಂಭಿಸಲಿದ್ದೇವೆ. ಇದಕ್ಕಾಗಿ ಎಲ್ಲ ತಯಾರಿ ನಡೆಸಿಕೊಂಡಿದ್ದೇವೆ ಎಂದು ತಿಳಿಸಿದರು. 

ಬೆಂಗಳೂರಲ್ಲಿ ಏಷ್ಯನ್‌ ಕೂಟ: ಫೆ.8ರಿಂದ 11ರವರೆಗೆ ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ 2ನೇ  ರಾಷ್ಟ್ರೀಯ ಕಬಡ್ಡಿ ಕೂಟವನ್ನು ಜೈಪುರದಲ್ಲಿ ಆಯೋಜಿಸುತ್ತಿದ್ದೇವೆ. ಇದಕ್ಕೂ ಮೊದಲು ಈ ಕೂಟಕ್ಕೆ ಕರ್ನಾಟಕ ತಂಡವನ್ನು ರಚಿಸಬೇಕಿದೆ. ಇದಕ್ಕಾಗಿ ಅವಿಘ್ನ ನ್ಪೋರ್ಟ್ಸ್ ಕ್ಲಬ್‌ ಸಹಕಾರದೊಂದಿಗೆ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೂಟ ಏರ್ಪಡಿಸುತ್ತಿದ್ದೇವೆ ಎಂದು ಬಾಬು ತಿಳಿಸಿದರು.

ಇಲ್ಲಿ ಉತ್ತಮ ಪ್ರದರ್ಶನ ನೀಡಿದ ಪುರುಷರ ಮತ್ತು ಮಹಿಳಾ ಆಟಗಾರ್ತಿಯರು ರಾಜ್ಯ ತಂಡವನ್ನು ರಾಷ್ಟ್ರೀಯ ಕೂಟದಲ್ಲಿ ಪ್ರತಿನಿಧಿಸಲಿದ್ದಾರೆ. ಇದಾದ ಬಳಿಕ ಭಾರತ ತಂಡಕ್ಕೆ ಕ್ರಮವಾಗಿ ಪುರುಷರ ಹಾಗೂ ಮಹಿಳಾ ತಂಡ ಪ್ರಕಟವಾಗಲಿದೆ. ಮೇ ಅಂತ್ಯದಲ್ಲಿ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಶಿಪ್‌ ನಡೆಯಲಿದೆ.

ಬಳಿಕವಷ್ಟೇ ಹೇ ಕಬಡ್ಡಿ ಕೂಟಕ್ಕೆ ದಿನಾಂಕ ಪ್ರಕಟವಾಗಲಿದೆ. ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಬೆಂಗಳೂರು ಸೇರಿದಂತೆ ಒಟ್ಟಾರೆ 5 ಕಡೆ ಕೂಟ ಆಯೋಜಿಸಲಾಗುತ್ತಿದೆ. ಖ್ಯಾತ ಖಾಸಗಿ ವಾಹಿನಿಯೊಂದು ಕೂಟದ ನೇರ ಪ್ರಸಾರಕ್ಕೆ ಮುಂದೆ ಬಂದಿದೆ ಎಂದು ಬಾಬು ವಿವರಿಸಿದರು. 

ಗೆಹ್ಲೋಟ್‌ ವಿರುದ್ಧ ಹರಿಹಾಯ್ದ ಬಾಬು: ಇದೇ ವೇಳೆ ಹಾಲಿ ಅಂತಾರಾಷ್ಟ್ರೀಯ ಕಬಡ್ಡಿ ಒಕ್ಕೂಟದ ಅಧ್ಯಕ್ಷ ಜನಾರ್ದನ್‌ ಸಿಂಗ್‌ ಗೆಹ್ಲೋಟ್‌ಗೆ ವಿರುದ್ಧ ಪ್ರಸಾದ್‌ಬಾಬು ಹರಿಹಾಯ್ದರು. ಗೆಹ್ಲೋಟ್‌ ಮತ್ತು ಅವರ ಕುಟುಂಬ ದೇಶದ ಕಬಡ್ಡಿಯನ್ನು 54 ವರ್ಷದಿಂದ ಆಡಳಿತ ನಡೆಸಿಕೊಂಡು ಬಂದಿದ್ದಾರೆ. ಅವರ ಇಡೀ ಕುಟುಂಬ ಅಧಿಕಾರಕ್ಕೆ ಅಂಟಿ ಕುಳಿತಿದೆ.  ಪರಿಣಾಮ ಕಬಡ್ಡಿ ದೇಶದಲ್ಲಿ ಕುಸಿದೆ.

ಇದೇ ಕಾರಣದಿಂದ ಮಾಜಿ ಕಬಡ್ಡಿ ಪಟುಗಳಾದ ಅರ್ಜುನ ಪ್ರಶಸ್ತಿ ವಿಜೇತ ಸಿ.ಹೊನ್ನಪ್ಪ ಗೌಡ, ಸೀತಾರಾಮ್‌, ಗೋಪಾಲಪ್ಪ, ಚಿನ್ನಸ್ವಾಮಿ ಸೇರಿದಂತೆ ಅನೇಕ ಮಾಜಿ ಕಬಡ್ಡಿ ಪಟುಗಳ ಜತೆಗೂಡಿ ಯುವಕರಿಗೆ ಹೆಚ್ಚಿನ ಅವಕಾಶ ಮಾಡಿಕೊಡುವುದಕ್ಕಾಗಿ ಕಬಡ್ಡಿ ಲೀಗ್‌ ಆಯೋಜಿಸುತ್ತಿರುವುದಾಗಿ ತಿಳಿಸಿದರು. 

ಸದ್ಯ ಭಾರತದಲ್ಲಿ ಎರಡು ಬಣಗಳಿವೆ. ಒಂದು ಜನಾರ್ದನ್‌ ಸಿಂಗ್‌ ಗೆಹ್ಲೋಟ್‌ ಅವರ ಎಕೆಎಫ್ಐ  (ಅಖೀಲ ಭಾರತೀಯ ಕಬಡ್ಡಿ ಒಕ್ಕೂಟ) ಮತ್ತೂಂದು ನ್ಯೂ ಕಬಡ್ಡಿ ಫೆಡರೇಷನ್‌ ಆಫ್ ಇಂಡಿಯಾ (ಎನ್‌ಕೆಎಫ್ಐ). ಪ್ರಸಾದ್‌ ಬಾಬು ಅವರು ಹಾಲಿ ಎನ್‌ಕೆಎಫ್ಐನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಸದ್ಯ ಈ ಎರಡು ಬಣಗಳಲ್ಲಿ ಸ್ಟಾರ್‌ ನ್ಪೋರ್ಟ್ಸ್ ಜತೆಗೂಡಿ ಪ್ರೊಕಬಡ್ಡಿ ನಡೆಸುತ್ತಿರುವುದು ಎಕೆಎಫ್ಐ. 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.