ಅಪರಿಚಿತ ಚುಂಗ್‌ ಬಲೆಗೆ ಬಿದ್ದ ಜೊಕೋವಿಕ್‌!


Team Udayavani, Jan 23, 2018, 7:45 AM IST

Djokovic-Chung-Hyeon.jpg

ಮೆಲ್ಬರ್ನ್: ದಕ್ಷಿಣ ಕೊರಿಯಾದ ಅಪರಿಚಿತ ಟೆನಿಸಿಗ ಚುಂಗ್‌ ಹೈಯಾನ್‌ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಭಾರೀ ದೊಡ್ಡ ಬೇಟೆಯಾಡಿದ್ದಾರೆ. 12 ಗ್ರ್ಯಾನ್‌ಸ್ಲಾಮ್‌ಗಳ ಒಡೆಯ ನೊವಾಕ್‌ ಜೊಕೋವಿಕ್‌ ಅವರನ್ನು ಮಣಿಸಿ ಆಘಾತಕಾರಿ ಫ‌ಲಿತಾಂಶಕ್ಕೆ ಸಾಕ್ಷಿಯಾಗಿದ್ದಾರೆ. 

ಸೋಮವಾರದ ತೃತೀಯ ಸುತ್ತಿನ ಕದನದಲ್ಲಿ ಅವರು ಟೈಬ್ರೇಕರ್‌ ಹೋರಾಟದಲ್ಲಿ ಮೇಲುಗೈ ಸಾಧಿಸಿ 7-6 (7-4), 7-5, 7-6 (7-3) ಅಂತರದ ಅಸಾಮಾನ್ಯ ಗೆಲುವಿನೊಂದಿಗೆ ಕ್ವಾರ್ಟರ್‌ ಫೈನಲಿಗೆ ನೆಗೆದರು.

ಶ್ರೇಯಾಂಕ ರಹಿತ ಟೆನಿಸಿಗನಾಗಿರುವ ಚುಂಗ್‌ ಇದಕ್ಕೂ ಮುನ್ನ ಅಲೆಕ್ಸಾಂಡರ್‌ ಜ್ವೆರೇವ್‌ (ಜೂ.), ಮಿಶಾ ಜ್ವೆರೇವ್‌ ಹಾಗೂ ಮೆಡ್ವೆಡೇವ್‌ ಅವರಿಗೆ ಸೋಲುಣಿಸಿದ್ದರು. ಇದು ಚುಂಗ್‌ ಕಾಣುತ್ತಿರುವ ಮೊದಲ ಗ್ರ್ಯಾನ್‌ಸ್ಲಾಮ್‌ ಕ್ವಾರ್ಟರ್‌ ಫೈನಲ್‌. ಈ ಕೊರಿಯನ್‌ ಟೆನಿಸಿಗ ಫ್ರೆಂಚ್‌ ಓಪನ್‌ನಲ್ಲಿ 3ನೇ ಸುತ್ತು ಮುಟ್ಟಿದ್ದೇ ಈವರೆಗಿನ ದೊಡ್ಡ ಸಾಧನೆಯಾಗಿತ್ತು. ಯುಎಸ್‌ ಓಪನ್‌ನಲ್ಲಿ 2ನೇ ಸುತ್ತು, ವಿಂಬಲ್ಡನ್‌ನಲ್ಲಿ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದರು.

ಇನ್ನೊಂದು ಗಮನಾರ್ಹ ಸಂಗತಿಯೆಂದರೆ, 2 ವರ್ಷಗಳ ಹಿಂದೆ ಇದೇ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಚುಂಗ್‌ ಅವರನ್ನು ಜೊಕೋವಿಕ್‌ ಮೊದಲ ಸುತ್ತಿನಲ್ಲೇ ಸೋಲಿಸಿ ಮನೆಗೆ ಕಳುಹಿಸಿದ್ದರು. ಟೆನಿಸ್‌ ಕಾಲಚಕ್ರ ತಿರುಗಿದೆ. ಚುಂಗ್‌ ಸೇಡು ತೀರಿಸಿಕೊಂಡು ಮೆರೆದಿದ್ದಾರೆ!

“ನಾನು ಇಂದಿನ ಪಂದ್ಯವನ್ನು ಗೆಲ್ಲುತ್ತೇನೆಂದು ಭಾವಿಸಿರಲಿಲ್ಲ. ಮಹಾನ್‌ ಟೆನಿಸಿಗ ಜೊಕೋವಿಕ್‌ ವಿರುದ್ಧ ಆಡುವುದೇ ನನಗೊಂದು ಹೆಮ್ಮೆ ಹಾಗೂ ಗೌರವದ ಸಂಗತಿ ಆಗಿತ್ತು’ ಎಂದು ಚುಂಗ್‌ ಗೆಲವಿನ ಬಳಿಕ ಪ್ರತಿಕ್ರಿಯಿಸಿದ್ದಾರೆ.

14ರಷ್ಟು ಕೆಳ ಶ್ರೇಯಾಂಕದೊಂದಿಗೆ ಮೆಲ್ಬರ್ನ್ ಪಾರ್ಕ್‌ನಲ್ಲಿ ಆಡಲಿಳಿದ ಜೊಕೋವಿಕ್‌ ಒಟ್ಟು 6 ಸಲ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಆಗಿ ಮೂಡಿಬಂದಿದ್ದರು. ಕೊನೆಯ ಸಲ ಇಲ್ಲಿ ಪ್ರಶಸ್ತಿ ಎತ್ತಿದ್ದು 2016ರಲ್ಲಿ.

ಸುಂಗ್‌ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ ಏರಿಹೋದ ಮೊದಲ ದಕ್ಷಿಣ ಕೊರಿಯಾ ಆಟಗಾರ. ಇಲ್ಲಿ ಅವರು ಮತ್ತೂಬ್ಬ “ಅಪರಿಚಿತ ಆಟಗಾರ’ ಅಮೆರಿಕದ ಟೆನ್ನಿಸ್‌ ಸ್ಯಾಂಡ್‌ಗೆÅನ್‌ ವಿರುದ್ಧ ಹೋರಾಡಬೇಕಿದೆ. ಸ್ಯಾಂಡ್‌ಗೆÅನ್‌ 5 ಸೆಟ್‌ಗಳ ಮ್ಯಾರಥಾನ್‌ ಹೋರಾಟದ ಬಳಿಕ ಡೊಮಿನಿಕ್‌ ಥೀಮ್‌ ಅವರನ್ನು 6-2, 4-6, 7-6 (7-4), 6-7 (7-9), 6-3 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು.

ಫೆಡರರ್‌ ಗೆಲುವಿನ ಓಟ
ಹಾಲಿ ಚಾಂಪಿಯನ್‌ ರೋಜರ್‌ ಫೆಡರರ್‌ ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೂಂದು ಹೆಜ್ಜೆ ಮುಂದಿರಿಸಿ ಕ್ವಾರ್ಟರ್‌ ಫೈನಲ್‌ ಮುಟ್ಟಿದರು. ಆದರೆ 80ನೇ ರ್‍ಯಾಂಕಿಂಗ್‌ ಆಟಗಾರ, ಹಂಗೇರಿಯ ಮಾರ್ಟನ್‌ ಫ‌ುಕೊÕàವಿಕ್‌ ಅವರೆದುರು ಗೆಲುವು ನಿರೀಕ್ಷಿಸಿದಷ್ಟು ಸುಲಭವಾಗಿರಲಿಲ್ಲ. ಅಂತರ 6-4, 7-6 (7-3), 6-2. ಫೆಡರರ್‌ ಪಾಲಿಗೆ ಇದು 14ನೇ ಆಸ್ಟ್ರೇಲಿಯನ್‌ ಓಪನ್‌ ಕ್ವಾರ್ಟರ್‌ ಫೈನಲ್‌. 1977ರ ಬಳಿಕ ಇಲ್ಲಿ ಎಂಟರ ಸುತ್ತು ಪ್ರವೇಶಿಸಿದ ಅತಿ ಹಿರಿಯ ಆಟಗಾರನೆಂಬ ದಾಖಲೆ ಈಗ ಫೆಡರರ್‌ ಪಾಲಾಗಿದೆ. ಅಂದು ಕೆನ್‌ ರೋಸ್‌ವಾಲ್‌ ಈ ಸಾಧನೆ ಮಾಡಿದ್ದರು.

ರೋಜರ್‌ ಫೆಡರರ್‌ ಅವರ ಕ್ವಾರ್ಟರ್‌ ಫೈನಲ್‌ ಎದುರಾಳಿ ಜೆಕ್‌ ಗಣರಾಜ್ಯದ ಥಾಮಸ್‌ ಬೆರ್ಡಿಶ್‌. ಇನ್ನೊಂದು ಪಂದ್ಯದಲ್ಲಿ ಬೆರ್ಡಿಶ್‌ ಇಟೆಲಿಯ ಫ್ಯಾಬಿಯೊ ಫೊಗಿನಿ ವಿರುದ್ಧ 6-1, 6-4, 6-4 ಅಂತರದ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.