ಅಂತಿಮ ಟೆಸ್ಟ್‌ಗೆ ರಹಾನೆ, ಯಾದವ್‌?


Team Udayavani, Jan 23, 2018, 7:05 AM IST

Ajinkya-Rahane,-Umesh-Yadav.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಈಗಾಗಲೇ 2 ಪಂದ್ಯ ಸೋತು ಸರಣಿ ಕಳೆದುಕೊಂಡಿರುವ ಭಾರತ ತಂಡ ಅಂತಿಮ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳುವ ತುಡಿತದಲ್ಲಿದೆ. ಹೀಗಾಗಿ ತಂಡದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಅಜಿಂಕ್ಯ ರಹಾನೆ, ಆಲ್‌ರೌಂಡರ್‌ ರವೀಂದ್ರ ಜಡೇಜ ಹಾಗೂ ವೇಗಿ ಉಮೇಶ್‌ ಯಾದವ್‌ ಕೊನೆಯ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂವರೂ ಮೊದಲೆರಡು ಟೆಸ್ಟ್‌ಗಳಲ್ಲಿ ಆಡಿರಲಿಲ್ಲ. ಅಂತಿಮ ಟೆಸ್ಟ್‌ ಭಾರತದ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದು, ನಾಯಕ ಕೊಹ್ಲಿ ಹಾಗೂ ಕೋಚ್‌ ರವಿಶಾಸಿŒ ಈ ಮೂವರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳಲು ಚಿಂತಿಸಿದ್ದಾರೆ ಎನ್ನಲಾಗಿದೆ.

ಸೋಮವಾರ ಜಡೇಜ ಹಾಗೂ ಯಾದವ್‌ ನೆಟ್‌ನಲ್ಲಿ ಸುದೀರ್ಘ‌ ಅಭ್ಯಾಸ ನಡೆಸಿರುವುದು ಇದಕ್ಕೆ ಪುಷ್ಟಿ ಕೊಡುತ್ತದೆ.
ಈ ನಡುವೆ ಕೀಪರ್‌ ದಿನೇಶ್‌ ಕಾರ್ತಿಕ್‌ ಹೆಸರು ಕೂಡ ಹರಿದಾಡುತ್ತಿದೆ. ಹೀಗಾಗಿ ಬುಧವಾರದಿಂದ ಆರಂಭವಾಗಲಿರುವ ಟೆಸ್ಟ್‌ ಪಂದ್ಯದಲ್ಲಿ ಭಾರತ 4 ಬದಲಾವಣೆ ಮಾಡಿಕೊಂಡರೂ ಅಚ್ಚರಿನ ಇಲ್ಲ.

ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಭಾರತ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಟೆಸ್ಟ್‌ ಪಂದ್ಯದಲ್ಲಿ ಹೀನಾಯ ಸೋಲುಂಡಿರುವ ಕೊಹ್ಲಿ ಪಡೆ ವಾಂಡರರ್ನಲ್ಲಿ ಗೆದ್ದು ಮಾನ ಉಳಿಸಿಕೊಳ್ಳಬೇಕಿದೆ. ಸರಣಿ ಸೋಲಿಗೆ ಎಲ್ಲಡೆಯಿಂದ ಟೀಕೆಗಳು ಕೇಳಿ ಬರುತ್ತಿವೆ. ಆದರೆ ಕೊಹ್ಲಿ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಿಲ್ಲ. ಸೋಮವಾರ ನೆಟ್ಸ್‌ನಲ್ಲಿ ನಿರಾಳವಾಗಿ ತಮ್ಮ ತಂಡದೊಂದಿಗೆ ಅಭ್ಯಾಸ ನಡೆಸಿದರು. ಈ ವೇಳೆ ಆಟಗಾರರು ಪರಸ್ಪರ ತಮಾಷೆ ಮಾಡಿಕೊಂಡು ಅಭ್ಯಾಸವನ್ನು ಆನಂದಿಸಿದರು. ಬೌಲಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ನೆಟ್‌ ಬೌಲರ್‌ ಆಗಿ ಕಾಣಿಸಿಕೊಂಡರು. ರೋಹಿತ್‌ ಶರ್ಮ ನಗುತ್ತಲೇ ಬಂಗಾರ್‌ ಬೌಲಿಂಗನ್ನು ಸ್ವಾಗತಿಸಿದರು. ಕೊಹ್ಲಿ, ಪಾರ್ಥಿವ್‌, ಧವನ್‌ ಹಾಗೂ ಜಡೇಜ ಈ ವೇಳೆ ಅಭ್ಯಾಸ ನಡೆಸುತ್ತಿದ್ದರು.

ಪಿಚ್‌ ಬಗ್ಗೆ ಮತ್ತೆ ಅಸಮಾಧಾನ
ಭಾರತ ಕ್ರಿಕೆಟಿಗರು ಟೆಸ್ಟ್‌ ಆರಂಭದಲ್ಲೇ ಆಫ್ರಿಕಾ ಪಿಚ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ 3ನೇ ಟೆಸ್ಟ್‌ ಆರಂಭಕ್ಕೂ ಮೊದಲು ಭಾರತೀಯರು ಮತ್ತೂಮ್ಮೆ ಪಿಚ್‌ ಬಗ್ಗೆ ಅತೃಪ್ತರಾಗಿದ್ದಾರೆ. ಸೋಮವಾರ ಭಾರತ ಬಹುತೇಕ ಆಟಗಾರರು ಅಭ್ಯಾಸದ ಅವಧಿಯಲ್ಲಿ ಫ‌ುಟ್‌ಬಾಲ್‌ ಆಡಿದರು. ಆದರೆ ಶಮಿ, ಭುವನೇಶ್ವರ್‌, ಇಶಾಂತ್‌ ಹಾಗೂ ಉಮೇಶ್‌ ಯಾದವ್‌ ನೆಟ್‌ನಲ್ಲಿ ಬೌಲಿಂಗ್‌ ನಡೆಸಿದರು.

ಈ ವೇಳೆ ಅಸಮರ್ಪಕ ಪಿಚ್‌ ಬಗ್ಗೆ ಬೌಲಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಕೋಚ್‌ ರವಿ ಶಾಸಿŒ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಾಸಿŒ ಮುಖ್ಯ ಕ್ಯುರೇಟರ್‌ ಅವರನ್ನು ಕರೆದು ಮತ್ತೂಮ್ಮೆ ರೋಲಿಂಗ್‌ ಮಾಡಲು ಹೇಳಿದ್ದಾರೆ. ಹೀಗೆ ರೋಲಿಂಗ್‌ ಮಾಡುತ್ತಲೇ ಭಾರತದ ಬೌಲರ್‌ಗಳ ನೆಟ್‌ ಅಭ್ಯಾಸ ನಡೆಯಿತು. ಇದು ಅಸಮಾಧಾನಕ್ಕೆ ಕಾರಣವಾಯಿತು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.