“ಹಿಂದೂ ಕಾರ್ಯಕರ್ತನ ಹತ್ಯೆಯಾಗಿರುವುದು ದುರಂತ’
Team Udayavani, Feb 2, 2018, 6:50 AM IST
ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಮತ್ತೂಂದು ಹಿಂದೂ ಕಾರ್ಯಕರ್ತನ ಹೆಣ ಬಿದ್ದಿರುವುದು ದುರಂತ. ಇದರಿಂದ ರಾಜಧಾನಿ ಬೆಂಗಳೂರು ಸುರಕ್ಷಿತವಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.
ಗೃಹ ಸಚಿವರ ಜಿಲ್ಲೆಯಲ್ಲಿ ಹಾಡ ಹಗಲೇ ಹೆಣ ಬೀಳುತ್ತಿದ್ದರೂ ಸರಕಾರ ಕಠಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆಗೊಳಗಾದ ಸಂತೋಷ್ ದಲಿತ ಯುವಕ. ಹತ್ಯೆ ಆರೋಪಿ ವಾಸಿಂ ಎಸ್ಡಿಪಿಐ ಕಾರ್ಯಕರ್ತ. ಸಚಿವ ರೋಷನ್ ಬೇಗ್ ಅವರ ಕ್ಷೇತ್ರದಲ್ಲಿ ನಡೆದಿರುವ ಎರಡನೇ ಹತ್ಯೆ ಇದಾಗಿದ್ದು, ಇಷ್ಟಾದರೂ ಸರಕಾರ ನಿದ್ದೆಯಿಂದ ಎಚ್ಚೆತ್ತಿಲ್ಲ ಎಂದು ಆರೋಪಿಸಿದರು. ಸಂತೋಷ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು.ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡಬೇಕುಎಂದವರು ಆಗ್ರಹಿಸಿದರು.