ಹುಡುಗರ ಸಾಧನೆಗೆ ಹೆಮ್ಮೆಯಾಗುತ್ತಿದೆ: ದ್ರಾವಿಡ್‌


Team Udayavani, Feb 6, 2018, 6:00 AM IST

PTI2_5_2018_000175B.jpg

ಮುಂಬಯಿ: ದಾಖಲೆ 4ನೇ ಬಾರಿಗೆ ವಿಶ್ವಕಪ್‌ ಗೆದ್ದ ಭಾರತದ ಅಂಡರ್‌-19 ಕ್ರಿಕೆಟ್‌ ವೀರರು ಸೋಮವಾರ ಸಂಜೆ ತವರಿಗೆ ಆಗಮಸಿದರು. ಕೋಚ್‌ ರಾಹುಲ್‌ ದ್ರಾವಿಡ್‌ ಗರಡಿಯಲ್ಲಿ ಪಳಗಿ ಇತಿಹಾಸ ನಿರ್ಮಿಸಿದ ಪೃಥ್ವಿ ಶಾ ಬಳಗಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ನಾಯಕ ಶಾ ಮತ್ತು ಕೋಚ್‌ ದ್ರಾವಿಡ್‌ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ತಮ್ಮ ಅನುಭವ ಹಾಗೂ ಯಶೋಗಾಥೆಯನ್ನು ಬಣ್ಣಿಸತೊಡಗಿದರು.

ಈ ಸಂದರ್ಭದಲ್ಲಿ ಮಾತಾಡಿದ ದ್ರಾವಿಡ್‌, ಹುಡುಗರ ಈ ಅಮೋಘ ಸಾಧನೆಯಿಂದ ಹೆಮ್ಮೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. “ನನಗೆ ವಿಶ್ವಕಪ್‌ ಗೆಲ್ಲಲಾಗಲಿಲ್ಲ ಎಂಬ ನೋವು ಖಂಡಿತ ಇಲ್ಲ. ನನ್ನ ಕ್ರಿಕೆಟ್‌ ಆಟದ ಬದುಕು ಈಗಾಗಲೇ ಮುಗಿದಿದೆ. ಹೀಗಾಗಿ ಅದನ್ನೆಲ್ಲ ನಾನು ಮರೆತು ಬಿಟ್ಟಿದ್ದೇನೆ. ಈಗ ಈ ಹುಡುಗರ ಸಾಧನೆಯನುನ ಕಂಡು ಹೆಮ್ಮೆಯಾಗುತ್ತಿದೆ. ಹುಡುಗರೆಲ್ಲ ಗುರಿ ಮುಟ್ಟುವ ಹಾದಿಯಲ್ಲಿ ಕಠನ ಸವಾಲುಗಳನ್ನು ಎದುರಿಸಿದರು. ಭಾರೀ ಪರಿಶ್ರಮ ಹಾಕಿದರು. ಚಾಂಪಿಯನ್ನರಾಗಿ ಹೊರಹೊಮ್ಮಿರುವ ಇವರನ್ನು ನೋಡುವುದೇ ಒಂದು ಖುಷಿ…’ ಎಂದರು.

“ಫೈನಲ್‌ ಸಂದರ್ಭದಲ್ಲೇ ಐಪಿಎಲ್‌ ಹರಾಜು ಕೂಡ ಇದ್ದುದರಿಂದ ನಾನು ಸ್ವಲ್ಪ ಚಿಂತೆಗೊಳಗಾಗಿದ್ದೆ. ಉಳಿದಂತೆ ಈ ಪಂದ್ಯಾವಳಿಯ ಯಾವುದೇ ಹಂತದಲ್ಲೂ ನಾನು ಚಿಂತೆ ಮಾಡಲಿಲ್ಲ’ ಎಂದರು.

“ಪ್ರತಿಯೊಂದು ತಂಡದಲ್ಲೂ ಪ್ರತಿಭಾನ್ವಿತ ಆಟಗಾರರಿದ್ದಾರೆ. ನಾನು ಪಾಕಿಸ್ಥಾನದ ಎಡಗೈ ಪೇಸ್‌ ಬೌಲರ್‌ ಒಬ್ಬನನ್ನು ಭೇಟಿಯಾಗಿದ್ದೆ. ಆತ ಪಂದ್ಯಾವಳಿಯುದ್ದಕ್ಕೂ ನನ್ನ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದ. ಓರ್ವ ಕೋಚ್‌ ಆಗಿ ಎಲ್ಲ ಕಡೆ ಕ್ರಿಕೆಟ್‌ ಪ್ರತಿಭೆಗಳನ್ನು ಕಾಣುವುದು ನಿಜಕ್ಕೂ ಖುಷಿ ಕೊಡುವ ಸಂಗತಿ. ನಮ್ಮ ಹುಡುಗರ ಸಾಧನೆ ಬಗ್ಗೆ ಪಾಕ್‌ ತರಬೇತುದಾರರೂ ಪ್ರಶಂಸೆ ವ್ಯಕ್ತಪಡಿಸಿದರು. ನಿಮ್ಮ ಹುಡುಗರ ಆಟ ಎಲ್ಲರಿಗೂ ಮಾದರಿ ಎಂದು ಅವರು ಹೇಳಿದರು…’ ಎಂಬುದಾಗಿ ದ್ರಾವಿಡ್‌ ನೆನಪಿಸಿಕೊಂಡರು.

ಪಾಕ್‌ ಪಂದ್ಯದ ಕುರಿತು…
“ಪಾಕಿಸ್ಥಾನ ವಿರುದ್ಧದ ಸೆಮಿಫೈನಲ್‌ ವೇಳೆ ನಾವು ವಿಶೇಷ ಸಿದ್ಧತೆಯನ್ನೇನೂ ಮಾಡಿಕೊಳ್ಳಲಿಲ್ಲ. ಬಾಂಗ್ಲಾದೇಶ ಅಥವಾ ಪಪುವಾ ನ್ಯೂ ಗಿನಿ ಎದುರಿನ ಪಂದ್ಯಕ್ಕೂ ಮುನ್ನ ನಮ್ಮ ತಯಾರಿ ಹೇಗಿತ್ತೋ, ಪಾಕ್‌ ವಿರುದ್ಧವೂ ಹಾಗೆಯೇ ಇತ್ತು. ಇದೊಂದು ದೊಡ್ಡ ಪಂದ್ಯ ಎಂದು ಹುಡುಗರಿಗೆ ತಿಳಿದಿತ್ತು. ಆದರೆ ಭಾರತ-ಪಾಕಿಸ್ಥಾನ ಪಂದ್ಯದ ಒತ್ತಡ ಹೇಗಿರುತ್ತದೆ ಎಂಬುದನ್ನು ಇವರೆಲ್ಲ ತಿಳಿದುಕೊಂಡದ್ದಕ್ಕೆ ಹಾಗೂ ಇದನ್ನು ನಿಭಾಯಿಸಿದ ರೀತಿಗೆ ನಿಜಕ್ಕೂ ಖುಷಿಯಾಗುತ್ತದೆ. ಸೆಮಿಫೈನಲ್‌ ವೇಳೆ ಎಲ್ಲರೂ ಶಾಂತಚಿತ್ತರಾಗಿ ಆಡಿದ್ದಕ್ಕೆ ಇವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ…’ ಎಂದು ದ್ರಾವಿಡ್‌ ಹೇಳಿದರು.

ಈ ಸಂದರ್ಭದಲ್ಲಿ ಮಾತಾಡಿದ ನಾಯಕ ಪೃಥ್ವಿ ಶಾ, “ನನಗೆ ಈ ಕ್ಷಣವನ್ನು ಬಣ್ಣಿಸಲು ಪದಗಳು ಸಿಗುತ್ತಿಲ್ಲ. ನನ್ನ ಮೇಲೆ ನಂಬಿಕೆ ಇರಿಸಿದ್ದಕ್ಕಾಗಿ ಎಲ್ಲ ಆಟಗಾರರಿಗೂ ಥ್ಯಾಂಕ್ಸ್‌ ಹೇಳಬಯಸುತ್ತೇನೆ’ ಎಂದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.