ಗೆಲ್ಲಬೇಕಾಗಿದ್ದ ಪಂದ್ಯದಲ್ಲೇ ಡ್ರಾ ಮಾಡಿಕೊಂಡ ಭಾರತ


Team Udayavani, Mar 5, 2018, 6:20 AM IST

ddd.jpg

ಇಪೋ (ಮಲೇಶ್ಯ): ಸುಲ್ತಾನ್‌ ಅಜ್ಲಾನ್‌ ಷಾ ಹಾಕಿ ಪಂದ್ಯಾವಳಿಯಲ್ಲಿ ಭಾರತದ ನಿರಾಶಾದಾಯಕ ಪ್ರದರ್ಶನ ಮುಂದುವರಿದಿದೆ. ಶನಿವಾರ ಆರ್ಜೆಂಟೀನಾ ವಿರುದ್ಧ ಎಡವಿದ ಸರ್ದಾರ್‌ ಸಿಂಗ್‌ ಪಡೆ ರವಿವಾರದ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್‌ ಎದುರು ಲಭಿಸಿದ ಅವಕಾಶಗಳನ್ನೆಲ್ಲ ಕೈಚೆಲ್ಲಿ 1-1 ಡ್ರಾಗೆ ಸಮಾಧಾನಪಟ್ಟಿದೆ.

ಯುವ ಆಟಗಾರ ಶೈಲೇಂದ್ರ ಲಾಕ್ರಾ ಪಂದ್ಯದ 14ನೇ ನಿಮಿಷದಲ್ಲೇ ಗೋಲಿನ ಖಾತೆ ತೆರೆದು ಭಾರತಕ್ಕೆ ಮುನ್ನಡೆ ಒದಗಿಸಿದರು. ಇದು ಶೈಲೇಂದ್ರ ಬಾರಿಸಿದ ಮೊದಲ ಅಂತಾರಾಷ್ಟ್ರೀಯ ಗೋಲೆಂಬುದು ವಿಶೇಷ. 53ನೇ ನಿಮಿಷದ ತನಕ ಭಾರತ ಈ ಮುನ್ನಡೆಯನ್ನು ಉಳಿಸಿಕೊಂಡಿತ್ತು. ಆದರೆ ಈ ಅವಧಿಯಲ್ಲಿ ಲಭಿಸಿದ ಕನಿಷ್ಠ 9 ಪೆನಾಲ್ಟಿ ಕಾರ್ನರ್‌ ಹಾಗೂ ಕೆಲವು ಫೀಲ್ಡ್‌ ಗೋಲ್‌ ಅವಕಾಶಗಳನ್ನು ವ್ಯರ್ಥಗೊಳಿಸಿತು. 

ಇದರಿಂದ ಭಾರತದ ಗೈಲುವು ಕೈಜಾರಿತು.53ನೇ ನಿಮಿಷದಲ್ಲಿ ಇಂಗ್ಲೆಂಡಿನ ಮಾರ್ಕ್‌ ಗ್ಲೆಗ್‌ಹೋಮ್‌ ಪೆನಾಲ್ಟಿ ಸ್ಟ್ರೋಕ್‌ ಮೂಲಕವೇ ಗೋಲೊಂದನ್ನು ಸಿಡಿಸಿ ಪಂದ್ಯವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾದರು. ಈ ಫ‌ಲಿತಾಂಶದಿಂದ ಭಾರತ 6 ತಂಡಗಳ ಈ ಪಂದ್ಯಾವಳಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ. ಮಂಗಳವಾರ ವಿಶ್ವದ ಅಗ್ರಮಾನ್ಯ ತಂಡವಾದ ಆಸ್ಟ್ರೇಲಿಯವನ್ನು ಸರ್ದಾರ್‌ ಪಡೆ ಎದುರಿಸಲಿದೆ.

ಪೆನಾಲ್ಟಿ ಕಾರ್ನರ್‌ಗಳೆಲ್ಲ ವಿಫ‌ಲ!
ಮೊದಲ ಅವಧಿಗೆ ಇನ್ನೇನು ಒಂದು ನಿಮಿಷ ಬಾಕಿ ಇರುವಾಗ ಭಾರತಕ್ಕೆ 2-0 ಮುನ್ನಡೆಯ ಸುವರ್ಣಾವಕಾಶವೊಂದಿತ್ತು. ತಲ್ವಿಂದರ್‌ ಸಿಂಗ್‌ ಬಾರಿಸಿದ ಚೆಂಡನ್ನು ಇಂಗ್ಲೆಂಡ್‌ ಗೋಲ್‌ಕೀಪರ್‌ ಹ್ಯಾರಿ ಗಿಬ್ಸನ್‌ ಅಮೋಘ ರೀತಿಯಲ್ಲಿ ತಡೆದರು.ದ್ವಿತೀಯ ಕ್ವಾರ್ಟರ್‌ನಲ್ಲಂತೂ ಭಾರತದ್ದೇ ಮೇಲುಗೈ ಆಗಿತ್ತು. ಈ ಅವಧಿಯೊಂದರಲ್ಲೇ ಭಾರತಕ್ಕೆ 8 ಪೆನಾಲ್ಟಿ ಕಾರ್ನರ್‌ ಅವಕಾಶಗಳು ಲಭಿಸಿದ್ದವು. ಆದರೆ ಡ್ರ್ಯಾಗ್‌ ಫ್ಲಿಕರ್‌ಗಳಾದ ವರುಣ್‌ ಕುಮಾರ್‌ ಮತ್ತು ಅಮಿತ್‌ ರೋಹಿದಾಸ್‌ ಇವನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫ‌ಲರಾದರು. ಗಿಬ್ಸನ್‌ ಜಾಗಕ್ಕೆ ಬಂದ ಗೋಲಿ ಜಾರ್ಜ್‌ ಪಿನ್ನರ್‌ ಭಾರತದ ನಿರೀಕ್ಷೆಯ ಬಲೂನಿಗೆ “ಪಿನ್‌’ ಚುಚ್ಚಿದರು.

ತೃತೀಯ ಕ್ವಾರ್ಟರ್‌ನಲ್ಲಿ ಇತ್ತಂಡಗಳದ್ದೂ ಭರ್ಜರಿ ಹೋರಾಟವಾಗಿತ್ತು. ಇಂಗ್ಲೆಂಡ್‌ ಸಮಬಲಕ್ಕಾಗಿ ಭಾರೀ ಪ್ರಯತ್ನ ಪಟ್ಟಿತು. ಆದರೆ ಲಭಿಸಿದ ಪೆನಾಲ್ಟಿ ಕಾರ್ನರ್‌ ಒಂದು ಕೈಕೊಟ್ಟಿತು.

ಕೊನೆಗೂ ಅಂತಿಮ ಕ್ವಾರ್ಟರ್‌ನಲ್ಲಿ ಇಂಗ್ಲೆಂಡಿನ ಪ್ರಯತ್ನ ಕೈಗೂಡಿತು. ಪಂದ್ಯದ ಮುಕ್ತಾಯಕ್ಕೆ 7 ನಿಮಿಷಗಳಿರುವಾಗ ಗ್ಲೆನ್‌ಹೋಮ್‌ ಅವರ ಪೆನಾಲ್ಟಿ ಹೊಡೆದ ಭಾರತದ ಗೋಲಿ ಕೃಷ್ಣ ಬಿ. ಪಾಠಕ್‌ ಅವರನ್ನು ವಂಚಿಸಿತು. ಪಂದ್ಯ 1-1 ಸಮಬಲಕ್ಕೆ ಬಂತು. ಇಲ್ಲಿಂದ ಮುಂದೆ ಎರಡೂ ತಂಡಗಳು ಗೆಲುವಿನ ಗೋಲ್‌ಗಾಗಿ ಪ್ರಯತ್ನಿಸಿದರೂ ಯಶಸ್ಸು ಸಿಗದೇ ಹೋಯಿತು.

ಶನಿವಾರದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ 1-4 ಗೋಲುಗಳಿಂದ ಆಸ್ಟ್ರೇಲಿಯಕ್ಕೆ ಶರಣಾಗಿತ್ತು. ಇನ್ನೊಂದು ಪಂದ್ಯದಲ್ಲಿ ಮಲೇಶ್ಯ ಇಷ್ಟೇ ಅಂತರದಿಂದ ಅಯರ್‌ಲ್ಯಾಂಡನ್ನು ಮಗುಚಿತ್ತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.