ಹಾಕಿ: ವನಿತೆಯರಿಗೆ ಮೊದಲ ಸೋಲು


Team Udayavani, Mar 9, 2018, 6:50 AM IST

Indian-women-suffer-first.jpg

ಸಿಯೋಲ್‌: ದಕ್ಷಿಣ ಕೊರಿಯಾ ಪ್ರವಾಸದಲ್ಲಿ ಭಾರತದ ವನಿತಾ ಹಾಕಿ ತಂಡ ಮೊದಲ ಸೋಲನುಭವಿಸಿದೆ. ಗುರುವಾರ ಸಿಯೋಲ್‌ನ “ಜಿಂಚುನ್‌ ನ್ಯಾಷನಲ್‌ ಆ್ಯತ್ಲೆಟಿಕ್‌ ಸೆಂಟರ್‌’ನಲ್ಲಿ ನಡೆದ 3ನೇ ಪಂದ್ಯದಲ್ಲಿ ದಕ್ಷಿಣ ಕೊರಿಯಾ 2-1 ಗೋಲುಗಳಿಂದ ರಾಣಿ ರಾಮ್‌ಪಾಲ್‌ ಪಡೆಯನ್ನು ಮಣಿಸಿತು.

ಮೊದಲೆರಡು ಪಂದ್ಯಗಳನ್ನು ಗೆದ್ದ ಭಾರತ 2-0 ಮುನ್ನಡೆಯಲ್ಲಿತ್ತು. ಗುರುವಾರದ ಪಂದ್ಯವನ್ನೂ ಜಯಿಸಿದ್ದರೆ ಸರಣಿ ವಶಪಡಿಸಿಕೊಳ್ಳಬಹುದಿತ್ತು. ಆದರೆ ಆತಿಥೇಯ ಪಡೆ ಮೊದಲ ಗೆಲುವಿನೊಂದಿಗೆ ಸರಣಿಯನ್ನು ಜೀವಂತವಾಗಿ ಇರಿಸಿದೆ. 5 ಪಂದ್ಯಗಳ ಸರಣಿಯ 4ನೇ ಮುಖಾಮುಖೀ ಶುಕ್ರವಾರ ನಡೆಯಲಿದೆ.

ಕೊರಿಯಾ ಆಕ್ರಮಣಕಾರಿ ಆರಂಭ
ಅತ್ಯಂತ ಆಕ್ರಮಣಕಾರಿಯಾಗಿ ಆಟ ಆರಂಭಿಸಿದ ಕೊರಿಯನ್‌ ವನಿತೆಯರು ಪಂದ್ಯದ 2 ಗೋಲುಗಳನ್ನು ಮೊದಲ ಕ್ವಾರ್ಟರ್‌ನಲ್ಲೇ ಬಾರಿಸಿ ಪ್ರಾಬಲ್ಯ ಮೆರೆದರು. ಪಂದ್ಯದ 12ನೇ ನಿಮಿಷದಲ್ಲಿ ಸಿಯುಲ್‌ ಕಿ ಚಿಯಾನ್‌, ಎರಡೇ ನಿಮಿಷದಲ್ಲಿ ಯುರಿಮ್‌ ಲೀ ಗೋಲುಗಳನ್ನು ಸಿಡಿಸಿ ಕೊರಿಯಾಕ್ಕೆ 2-0 ಮುನ್ನಡೆ ಒದಗಿಸಿದರು. ಎರಡೂ ಗೋಲುಗಳು ಪೆನಾಲ್ಟಿ ಕಾರ್ನರ್‌ ಮೂಲಕವೇ ಬಂದವು. ಈ ಸಂದರ್ಭದಲ್ಲಿ ಭಾರತದ ರಕ್ಷಣಾ ವಿಭಾಗ ಬಹಳ ದುರ್ಬಲವಾಗಿ ಗೋಚರಿಸಿತು. ಭಾರತದ ಆಟಗಾರ್ತಿಯರು ಕೊರಿಯಾದ ಮಿಡ್‌ ಫೀಲ್ಡ್‌ ಮೇಲೆ ಒತ್ತಡ ಹೇರಿದರೂ ಇದನ್ನು ಮೀರಿ ನಿಲ್ಲುವ ಮೂಲಕ ಆತಿಥೇಯರು ಪಾರಮ್ಯ ಸಾಧಿಸಿದರು.

ಭಾರತ ದ್ವಿತೀಯ ಕ್ವಾರ್ಟರ್‌ನಲ್ಲಿ ತಿರುಗಿ ಬಿತ್ತು. 16ನೇ ನಿಮಿಷದಲ್ಲಿ ಲಾಲ್ರೆಮಿÕಯಾಮಿ ಭಾರತದ ಪರ ಗೋಲಿನ ಖಾತೆ ತೆರೆದರು. ಅನಂತರ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತಾದರೂ ಅವಕಾಶಗಳನ್ನು ಕೈಚೆಲ್ಲುವ ಮೂಲಕ ನಿರಾಸೆ ಮೂಡಿಸಿತು. ದಕ್ಷಿಣ ಕೊರಿಯಾದ ಗೋಲ್‌ಕೀಪರ್‌ ಹೀಬಿನ್‌ ಜಂಗ್‌ ಅಮೋಘ ಪ್ರದರ್ಶನದ ಮೂಲಕ ಪ್ರವಾಸಿಗರ ಪ್ರಯತ್ನವನ್ನು ವಿಫ‌ಲಗೊಳಿಸಿದರು.

ತೃತೀಯ ಕ್ವಾರ್ಟರ್‌ನಲ್ಲಿ ಕೊರಿಯಾಕ್ಕೆ ಗೋಲು ಗಳಿಕೆಯ ಸಾಕಷ್ಟು ಅವಕಾಶಗಳಿದ್ದವು. 3 ಪೆನಾಲ್ಟಿ ಕಾರ್ನರ್‌ ಸಹಿತ ಎಲ್ಲ ಅವಕಾಶಗಳು ಕೈಕೊಟ್ಟವು. ಭಾರತದ ಗೋಲು ಪೆಟ್ಟಿಗೆಯ ಮುಂದೆ ನಿಂತಿದ್ದ ನೀಳಕಾಯದ ರಜನಿ ಎಟಿಮರ್ಪು ಕೊರಿಯನ್ನರಿಗೆ ಕಂಟಕವಾಗಿ ಪರಿಣಮಿಸಿದರು.

ಸಾಧ್ಯವಾಗಲಿಲ್ಲ ಸಮಬಲ
ಕೊನೆಯ ಕ್ವಾರ್ಟರ್‌ನಲ್ಲಿ ಭಾರತದ ಪ್ರದರ್ಶನ ಉತ್ತಮ ಮಟ್ಟದಲ್ಲಿತ್ತು. ಪಂದ್ಯವನ್ನು ಸಮಬಲಕ್ಕೆ ತರಲು ಇನ್ನಿಲ್ಲದ ಪ್ರಯತ್ನ ಮಾಡಿತು. ಪಂದ್ಯದ ಕೊನೆಯ 4 ನಿಮಿಷಗಳಲ್ಲಿ ಲಭಿಸಿದ 2 ಪೆನಾಲ್ಟಿ ಕಾರ್ನರ್‌ಗಳು ವ್ಯರ್ಥವಾದವು. ಗೋಲಿ ಹೀಬಿನ್‌ ಜಂಗ್‌ ಜಬರ್ದಸ್ತ್ ಪ್ರದರ್ಶನ ನೀಡಿ ತಂಡವನ್ನು ಬಚಾಯಿಸಿದರು.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.