ವಿಂಡೀಸ್‌ ಆಟಗಾರರಿಂದ ಹೆಚ್ಚಿನ ಲಾಭ: ರೋಹಿತ್‌


Team Udayavani, Apr 19, 2018, 6:00 AM IST

20.jpg

ಮುಂಬಯಿ: ಮುಂಬೈ ಇಂಡಿಯನ್ಸ್‌ ಸಹಿತ ಐಪಿಎಲ್‌ನ ಹೆಚ್ಚಿನೆಲ್ಲ ತಂಡಗಳಿಗೆ ವೆಸ್ಟ್‌ ಇಂಡೀಸ್‌ನ ಕ್ರಿಕೆಟಿಗರ ಸ್ಫೋಟಕ ಆಟದಿಂದಾಗಿ ಹೆಚ್ಚಿನ ಲಾಭವಾಗಿದೆ. ಟ್ವೆಂಟಿ20 ಮಾದರಿಯ ಕ್ರಿಕೆಟಿಗೆ ಬೇಕಾದ ಒಳ್ಳೆಯ ಗುಣಮಟ್ಟದ ಆಟ ಅವರಿಗೆ ಕರಗತವಾಗಿದೆ. ಅವರಿಗೆ ಈ ಕುರಿತು ಯಾವುದೇ ಮಾರ್ಗದರ್ಶನದ ಅಗತ್ಯವೂ ಇಲ್ಲ. ಚೆಂಡನ್ನು ಶಕ್ತಿಯುತವಾಗಿ ಹೊಡೆಯುವ ಸಾಮರ್ಥ್ಯ ಹೊಂದಿರುವ ವಿಂಡೀಸ್‌ ಆಟಗಾರರು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಬಲ್ಲರು ಮತ್ತು ಚುರುಕಿನ ಫೀಲ್ಡಿಂಗ್‌ಗೂ ಸೈ ಎನಿಸಿಕೊಂಡಿದ್ದಾರೆ.

ಆಲ್‌ರೌಂಡರ್‌ ಕೈರನ್‌ ಪೋಲಾರ್ಡ್‌ 2010 ರಿಂದ ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವೊಂದು ಪಂದ್ಯಗಳಲ್ಲಿ ಗೆಲುವಿಗೆ ಕಠಿನ ಪರಿಸ್ಥಿತಿಯಿದ್ದರೂ ತಂಡವನ್ನು ದಡ ಮುಟ್ಟಿಸಿದ ಸಾಧನೆಯನ್ನು ಅವರು ಮಾಡಿದ್ದಾರೆ. ಕಳೆದ ಕೆಲವು ವರ್ಷ ಲೆಂಡ್ಲ್ ಸಿಮನ್ಸ್‌ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದ್ದರು. ಆಶ್ಚರ್ಯವೆಂಬಂತೆ ಮುಂಬೈ ಈ ಬಾರಿ ಸಿಮನ್ಸ್‌ ಅವರನ್ನು ಉಳಿಸಿಕೊಂಡಿಲ್ಲ. ಆದರೆ ಟ್ರಿನಿಡಾಡ್‌ನ‌ ಇನ್ನೋರ್ವ ಆಕ್ರಮಣಕಾರಿ ಆಟಗಾರ ಎವಿನ್‌ ಲೆವಿಸ್‌ ಅವರನ್ನು ಸೇರಿಸಿಕೊಂಡಿತ್ತು. 2016ರ ಆಗಸ್ಟ್‌ನಲ್ಲಿ ಭಾರತ ವಿರುದ್ಧ ನಡೆದ ಟಿ20 ಪಂದ್ಯಗಳಲ್ಲಿ ಎರಡು ಶತಕ ಸಿಡಿಸಿದ್ದ ಲೆವಿಸ್‌ ಕಳೆದ ವರ್ಷ ಕಿಂಗ್‌ಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಅಜೇಯ 125 ರನ್‌ ಸಿಡಿಸಿರುವುದು ರೋಹಿತ್‌ ಅವರಿಗೆ ಮೆಚ್ಚುಗೆಯಾಗಿತ್ತು.

ಮಂಗಳವಾರ ವಾಂಖೆಡೆಯಲ್ಲಿ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲೆವಿಸ್‌ 42 ಎಸೆತಗಳಿಂದ 65 ರನ್‌ ಸಿಡಿಸಿ ತಂಡದ ದೊಡ್ಡ ಮೊತ್ತಕ್ಕೆ ನೆರವಾಗಿದ್ದರು. ಕೆರಿಬಿಯನ್‌ನ ಆರಂಭಿಕ ಆಟಗಾರನಿಗೆ ನೀವು ಏನು ಸಲಹೆ ನೀಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌ ಅವರು ವೆಸ್ಟ್‌ಇಂಡೀಸ್‌ನ ಆಟಗಾರರಿಗೆ ಮಾರ್ಗದರ್ಶನ ನೀಡುವ ಅಗತ್ಯವಿಲ್ಲ. ಅವರು ಮುಕ್ತವಾಗಿ ಆಡಲು ನಾವು ಅವಕಾಶ ಕಲ್ಪಿಸಬೇಕು. ಹೀಗೆ ಆಡಬೇಕು ಎಂದು ಹೇಳಿದರೆ ಅವರಿಗೆ ಸಮಸ್ಯೆಯಾಗಬಹುದು. ಅದಕ್ಕಿಂತ ಬದಲು ಅವರಿಗೆ ಇಷ್ಟವಾದ ರೀತಿಯಲ್ಲಿ ಆಡಲು ಬಿಡಬೇಕು ಎಂದರು.

ಕಳೆದ ಆರು ವರ್ಷ ಪೋಲಾರ್ಡ್‌ ಜತೆಗಿನ ಮಾತುಕತೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ. ನಾನು ಆಟದ ಬಗ್ಗೆ ಅವರಿಗೆ ಏನನ್ನೂ ಹೇಳಲಿಲ್ಲ. ಅವರಿಗೆ ಯಾವ ರೀತಿ ಆಡಬೇಕೆಂದು ತಿಳಿದಿದೆ. ಹಾಗೆಯೇ ಲೆವಿಸ್‌ ಅವರ ಪಾಡಿಗೆ ಬಿಟ್ಟಿದ್ದೇನೆ ಎಂದು ರೋಹಿತ್‌ ತಿಳಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.