ಸರಿಯಾದ ದಿಕ್ಕಿನತ್ತ ಸಾಗುತ್ತಿದ್ದೇವೆ: ಕಾರ್ತಿಕ್‌


Team Udayavani, Apr 20, 2018, 6:10 AM IST

Dinesh-KKR.jpg

ಜೈಪುರ: ಸತತ 2 ಪಂದ್ಯಗಳನ್ನು ಗೆದ್ದಿರುವ ಕೋಲ್ಕತಾ ನೈಟ್‌ರೈಡರ್ ಸದ್ಯ ಈ ಐಪಿಎಲ್‌ನಲ್ಲಿ ಅತ್ಯಂತ ಖುಷಿಯಲ್ಲಿರುವ ತಂಡಗಳಲ್ಲೊಂದು. ಬುಧವಾರ ರಾತ್ರಿ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಅವರದೇ ಅಂಗಳದಲ್ಲಿ ಮಣಿಸುವ ಮೂಲಕ ಕೆಕೆಆರ್‌ ಈಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ತಂಡವೀಗ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎಂಬುದಾಗಿ ನಾಯಕ ದಿನೇಶ್‌ ಕಾರ್ತಿಕ್‌ ಹೇಳಿದ್ದಾರೆ.

“ನಾವೀಗ ಸತತವಾಗಿ 2 ಪಂದ್ಯಗಳನ್ನು ಜಯಿಸಿದ್ದೇವೆ. ಇದೊಂದು ಒಳ್ಳೆಯ ಬೆಳವಣಿಗೆ. ನಾವು ನಿಧಾನವಾಗಿ ಲಯ ಕಂಡುಕೊಳ್ಳುತ್ತಿದ್ದೇವೆ. ಸರಿಯಾದ ದಿಕ್ಕಿನತ್ತ ಸಾಗತೊಡಗಿದ್ದೇವೆ…’ ಎಂದು ದಿನೇಶ್‌ ಕಾರ್ತಿಕ್‌ ಹೇಳಿದರು.

ರಾಜಸ್ಥಾನ್‌ ವಿರುದ್ಧ ಇಲ್ಲಿನ “ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂ’ನಲ್ಲಿ ನಡೆದ ಬುಧವಾರ ರಾತ್ರಿಯ ಮುಖಾಮುಖೀಯಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಮೊದಲು ಬ್ಯಾಟ್‌ ಮಾಡಿದ ರಹಾನೆ ಪಡೆ 8 ವಿಕೆಟಿಗೆ 160 ರನ್‌ ಬಾರಿಸಿದರೆ, ಕೆಕೆಆರ್‌ 18.5 ಓವರ್‌ಗಳಲ್ಲಿ 3 ವಿಕೆಟಿಗೆ 163 ರನ್‌ ಪೇರಿಸಿ ಗೆದ್ದು ಬಂದಿತು.ಆರಂಭಕಾರ ಕ್ರಿಸ್‌ ಲಿನ್‌ ಶೂನ್ಯಕ್ಕೆ ಔಟಾದರೂ ಸುನೀಲ್‌ ನಾರಾಯಣ್‌ 35, ರಾಬಿನ್‌ ಉತ್ತಪ್ಪ 48, ನಿತೀಶ್‌ ರಾಣಾ ಅಜೇಯ 35 ಮತ್ತು ದಿನೇಶ್‌ ಕಾರ್ತಿಕ್‌ ಅಜೇಯ 42 ರನ್‌ ಮಾಡಿ ತಂಡಕ್ಕೆ ಸುಲಭ ಜಯ ಒದಗಿಸಿದರು. ಬೌಲಿಂಗಿನಲ್ಲೂ ಮಿಂಚಿ 2 ವಿಕೆಟ್‌ ಕಿತ್ತ ರಾಣಾ ಪಂದ್ಯಶ್ರೇಷ್ಠರಾಗಿ ಮೂಡಿಬಂದರು. ಇದು ರಾಣಾಗೆ ಒಲಿದ ಸತತ 2ನೇ ಪಂದ್ಯಶ್ರೇಷ್ಠ ಗೌರವವಾಗಿದೆ.

“ನಾನು ನೆಟ್ಸ್‌ನಲ್ಲಿ ಸತತವಾಗಿ ಬೌಲಿಂಗ್‌ ಅಭ್ಯಾಸವನ್ನೂ ನಡೆಸುತ್ತಿರುತ್ತೇನೆ. ನಮ್ಮ ಪಾಲಿಗೆ ಈ ಎರಡೂ ಪಂದ್ಯಗಳು ಅತ್ಯಂತ ಮಹತ್ವದ್ದಾಗಿದ್ದವು. ನಾನಂತೂ ತುಂಬು ಆತ್ಮವಿಶ್ವಾಸದಲ್ಲಿದ್ದೆ. ಅದೃಷ್ಟವಶಾತ್‌ ಎರಡರಲ್ಲೂ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರನಾದೆ. ನನ್ನ ಪಾಲಿಗೆ ಇದೊಂದು ದೊಡ್ಡ ಅಡಿಪಾಯ…’ ಎಂಬುದಾಗಿ ನಿತೀಶ್‌ ರಾಣಾ ಹೇಳಿದರು.

ಡೆಲ್ಲಿ ಡೇರ್‌ಡೆವಿಲ್ಸ್‌ ವಿರುದ್ಧ ಎ. 16ರ ಪಂದ್ಯದಲ್ಲಿ ಕೆಕೆಆರ್‌ ಸಾಧಿಸಿದ 71 ರನ್‌ ಗೆಲುವಿನಲ್ಲೂ ನಿತೀಶ್‌ ರಾಣಾ ಪಾತ್ರ ನಿರ್ಣಾಯಕವಾಗಿತ್ತು. 35 ಎಸೆತಗಳಿಂದ 59 ರನ್‌ (5 ಬೌಂಡರಿ, 4 ಸಿಕ್ಸರ್‌) ಬಾರಿಸಿ ಪಂದ್ಯಶ್ರೇಷ್ಠರಾಗಿ ಮೂಡಿಬಂದಿದ್ದರು.

ಸ್ಪಿನ್ನರ್‌ಗಳಿಗೆ 14 ಓವರ್‌!
ಈ ಪಂದ್ಯದಲ್ಲಿ ಕೆಕೆಆರ್‌ ಸ್ಪಿನ್‌ ದಾಳಿಗೆ ಹೆಚ್ಚಿನ ಒತ್ತು ನೀಡಿದ್ದು ವಿಶೇಷ. ಸ್ಪಿನ್ನರ್‌ಗಳಿಗೆ ಒಟ್ಟು 14 ಓವರ್‌ಗಳ ಅವಕಾಶ ಕಲ್ಪಿಸಿ ರಾಜಸ್ಥಾನವನ್ನು ನಿಯಂತ್ರಿಸಿತು. ಈ ಕುರಿತು ಪ್ರತಿಕ್ರಿಯಿಸಿದ ದಿನೇಶ್‌ ಕಾರ್ತಿಕ್‌, “ರಿಸ್ಟ್‌ ಸ್ಪಿನ್ನರ್‌ಗಳನ್ನು ಎದುರಿಸುವುದು ಸುಲಭವಲ್ಲ. ಹೀಗಾಗಿ ಇವರನ್ನು ಆರಂಭದಿಂದಲೇ ದಾಳಿಗಿಳಿಸಲಾಯಿತು. ಸುನೀಲ್‌ ನಾರಾಯಣ್‌ ದುಬಾರಿಯಾದರೂ ಪೀಯೂಷ್‌ ಚಾವ್ಲಾ ಮತ್ತು ಕುಲದೀಪ್‌ ಯಾದವ್‌ ಉತ್ತಮ ನಿಯಂತ್ರಣ ಸಾಧಿಸಿದರು…’ ಎಂದರು.

15-20 ರನ್‌ ಕೊರತೆ: ರಹಾನೆ
ಒಟ್ಟಾರೆ ಹೇಳುವುದಾದರೆ ನಾವು 15ರಿಂದ 20 ರನ್ನುಗಳ ಕೊರತೆ ಅನುಭವಿಸಿದೆವು ಎಂಬುದು ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ಅಜಿಂಕ್ಯ ರಹಾನೆ ಹೇಳಿಕೆ.

“ಮೊದಲ ಪಂದ್ಯದ ವೇಳೆ ಜೈಪುರ ಟ್ರ್ಯಾಕ್‌ನಲ್ಲಿ ಉತ್ತಮ ಮಟ್ಟದ ಬೌನ್ಸ್‌ ಇತ್ತು. ಆದರೆ ಇಂದು ಪಿಚ್‌ ನಿಧಾನ ಗತಿಯಿಂದ ಕೂಡಿತ್ತು. ಚೆಂಡು ಬಹಳ ಕೆಳ ಮಟ್ಟದಿಂದ ಬರುತ್ತಿತ್ತು. ಇದು ದೂರಲ್ಲ. ನಮ್ಮ ಆರಂಭ ಉತ್ತಮವಾಗಿಯೇ ಇತ್ತು. ಕೊನೆಯಲ್ಲಿ 15-20 ರನ್ನುಗಳ ಕೊರತೆ ಎದುರಾಯಿತು…’ ಎಂದು ರಹಾನೆ ಹೇಳಿದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.