ರಜತ ಕುವರ ಗುರುರಾಜ್‌ಗೆ ತವರೂರ ಸ್ವಾಗತ


Team Udayavani, Apr 20, 2018, 6:25 AM IST

1904kdm1.jpg

ಕುಂದಾಪುರ: ಆಸ್ಟ್ರೇಲಿಯದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ವೇಟ್‌ಲಿಫ್ಟಿಂಗ್‌ ರಜತಕ್ಕೆ ಕೊರಳೊಡ್ಡುವ ಮೂಲಕ ಭಾರತಕ್ಕೆ ಮೊದಲ ಪದಕ ತಂದಿತ್ತ ಚಿತ್ತೂರಿನ ಗುರುರಾಜ್‌ ಅವರಿಗೆ ಗುರುವಾರ ತವರು ನೆಲ ಕುಂದಾಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.ಬೆಳ್ಳಿ ಪದಕ ಗೆದ್ದ ಬಳಿಕ ತವರಿಗೆ ಆಗಮಿಸಿದ ಗುರುರಾಜ್‌ ಅವರನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಬ್ಯಾಂಡ್‌ ವಾದನ, ಹೂವಿನ ಹಾರಗಳ ಮೂಲಕ ಸ್ವಾಗತಿಸಲಾಯಿತು.

ಮೆರವಣಿಗೆ ಮೂಲಕ ಕುಂದಾಪುರಕ್ಕೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ರಸ್ತೆಯುದ್ದಕ್ಕೂ ನೂರಾರು ಮಂದಿ ಸಾಲುಗಟ್ಟಿ ನಿಂತು ಹುಟ್ಟೂರ ಸಾಧಕನಿಗೆ ಗೌರವ ಸಲ್ಲಿಸಿದರು.

ಕುಂದಾಪುರದ ಶಾಸ್ತ್ರಿ ಸರ್ಕಲ್‌ನಿಂದ ಆರಂಭವಾದ ಗುರುರಾಜ್‌ ಅವರ ವಿಜಯೋತ್ಸವ ಮೆರವಣಿಗೆಯು ಪಾರಿಜಾತ ಸರ್ಕಲ್‌ ಮೂಲಕ ಸಾಗಿ, ಗುರು ನಾರಾಯಣ ಮಂದಿರದ ವರೆಗೆ ತೆರಳಿ, ಅಲ್ಲಿಂದ ಹೊಸ ಬಸ್‌ ನಿಲ್ದಾಣವಾಗಿ ಮತ್ತೆ ಶಾಸ್ತ್ರಿ  ಸರ್ಕಲ್‌ಗೆ ಬಂತು. ಆ ಬಳಿಕ ಹುಟ್ಟೂರಾದ ಚಿತ್ತೂರಿಗೆ ತೆರೆದ ವಾಹನದಲ್ಲಿ ಕಳುಹಿಸಿಕೊಡಲಾಯಿತು.

ವಿವಿಧೆಡೆಗಳಲ್ಲಿ ಅಭಿನಂದನೆ
ಕುಂದಾಪುರದಲ್ಲಿ ಹಕ್ಯುìಲಸ್‌ ಜಿಮ್‌ ವತಿಯಿಂದ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್‌ ಅಭಿನಂದಿಸಿದರು. ತಾಲೂಕು ಬಿಲ್ಲವ ಸಂಘದ ವತಿಯಿಂದ ಕುಂದಾಪುರದ ನಾರಾಯಣಗುರು ಮಂದಿರದಲ್ಲಿ ಸಮ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗುರುರಾಜ್‌ ತಂದೆ ಮಹಾಬಲ ಪೂಜಾರಿ, ಸಹೋದರರು, ಸಂಬಂಧಿಕರು, ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್‌ ಕುಮಾರ್‌, ಮೊದಲ ಕೋಚ್‌ ಕೊಲ್ಲೂರಿನ ಸುಕೇಶ್‌ ಶೆಟ್ಟಿ, ಕುಂದಾಪುರ ಎಸ್‌ಐ ಹರೀಶ್‌ ಆರ್‌., ಗಣ್ಯರು ಉಪಸ್ಥಿತರಿದ್ದರು.

ಕೊಲ್ಲೂರು ಕ್ಷೇತ್ರ ಭೇಟಿ
ಗುರುರಾಜ್‌ ಪೂಜಾರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಸಂಜೆ ತೆರಳಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ಅರ್ಚಕ ಡಾ| ಕೆ.ಎನ್‌. ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಗುರುರಾಜ್‌ ಪೂಜಾರಿ ಅವರ ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ ಶೆಟ್ಟಿ, ದೈಹಿಕ ಶಿಕ್ಷಕ ಸಚಿನ್‌ ಕುಮಾರ್‌ ಶೆಟ್ಟಿ ಹಾಗೂ ದೇಗುಲದ ಅಧೀಕ್ಷಕ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

ಶ್ರೀ ದೇವಿಯ ಅನುಗ್ರಹ…
ಸುದ್ದಿಗಾರರೊಂದಿಗೆ ಮಾತನಾಡಿದ ಗುರುರಾಜ್‌, ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಪ್ರತಿ ದಿನ ಕ್ಷೇತ್ರಕ್ಕೆ ಆಗಮಿಸಿ, ದೇವಿಯನ್ನು ಧ್ಯಾನಿಸುತ್ತಿದ್ದೆ. ಹಾಸ್ಟೆಲ್‌ನಲ್ಲಿ ಬೆಳಗ್ಗೆ ಒದಗಿಸುತ್ತಿದ್ದ ಗಂಜಿ ಊಟದೊಡನೆ ಅಮ್ಮನ ಆಶೀರ್ವಾದದಿಂದ ಕಿಂಚಿತ್‌ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ವಂಡ್ಸೆ: ಸಮ್ಮಾನಕ್ಕೆ ನೀತಿ ಸಂಹಿತೆ ಅಡ್ಡಿ
ವಂಡ್ಸೆ ಮತ್ತು ಚಿತ್ತೂರು ಆಸುಪಾಸಿನ ಗ್ರಾಮಸ್ಥರು ಆಯೋಜಿಸಿದ್ದ ಸಮ್ಮಾನ ಕಾರ್ಯಕ್ರಮದ ವಿಚಾರದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ನೀತಿಸಂಹಿತೆಯ ಬಗ್ಗೆ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವತಿಯಿಂದ ದೇಗುಲದ ಆಡಳಿತ ಮೊಕ್ತೇಸರ ಬಿ.ಕೆ. ಶಿವರಾಮ ಶೆಟ್ಟಿ , ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀಧರ ಶೆಟ್ಟಿ ಉಪಸ್ಥಿತರಿದ್ದು ಸಮ್ಮಾನಿಸಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲಕ್ಕೆ ತೆರಳಿದ ಗುರುರಾಜ್‌ ಪೂಜಾರಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ತ್ರಿವರ್ಣ ಧ್ವಜ ಹಾರಾಡುತ್ತಿದ್ದಂತೆ ಕಣ್ಣಲ್ಲಿ ನೀರು ಜಿನುಗಿತು…
ಕುಂದಾಪುರದಲ್ಲಿ ಅಭಿನಂದನೆ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಗುರುರಾಜ್‌, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿರುವುದಕ್ಕೆ ತುಂಬಾ ಖುಷಿಯಿದೆ. ಭಾರತ ಗೆದ್ದ 66 ಪದಕಗಳಲ್ಲಿ ಮೊದಲ ಪದಕ ನನ್ನದು ಎನ್ನುವುದು ಹೆಮ್ಮೆಯ ಸಂಗತಿ. ಗೋಲ್ಡ್‌ಕೋಸ್ಟ್‌ನಲ್ಲಿ ಬೆಳ್ಳಿ ಗೆದ್ದಾಗ ರಾಷ್ಟ್ರಗೀತೆಯೊಂದಿಗೆ ತ್ರಿವರ್ಣ ಧ್ವಜವು ನಿಧಾನವಾಗಿ ಮೇಲೇರುತ್ತಿದ್ದಂತೆ ಕಣ್ಣಲ್ಲಿ ನೀರು ಬಂತು. ತೀರಾ ಹಳ್ಳಿ ಪ್ರದೇಶದಲ್ಲಿ ಹುಟ್ಟಿ ಬೆಳೆದ ನನ್ನ ಈ ಸಾಧನೆಯಿಂದಾಗಿ ದೇಶದ ಹೆಮ್ಮೆಯ ಪ್ರತೀಕವಾಗಿರುವ ತ್ರಿವರ್ಣ ಧ್ವಜ ಎತ್ತರಕ್ಕೆ ಹಾರಾಡಿದ ಖುಷಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.