ನನ್ನನ್ನು ಖರೀದಿಸಿ ಐಪಿಎಲ್‌ ಬಚಾವ್‌ಮಾಡಿದ ಸೆಹವಾಗ್‌: ಗೇಲ್‌ ತಮಾಷೆ!


Team Udayavani, Apr 21, 2018, 6:00 AM IST

17.jpg

ಮೊಹಾಲಿ: ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ನಿರ್ದೇಶಕ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್‌ ಕೊನೆ ಗಳಿಗೆಯಲ್ಲಿ ತನ್ನನ್ನು ಖರೀದಿಸಿ ಐಪಿಎಲ್‌ ಬಚಾವ್‌ ಮಾಡಿದರು ಎಂದು ಶತಕವೀರ ಕ್ರಿಸ್‌ ಗೇಲ್‌ ತಮಾಷೆ ಮಾಡಿದ್ದಾರೆ.

ಗುರುವಾರ ರಾತ್ರಿ ತವರಿನ ಮೊಹಾಲಿ ಅಂಗಳದಲ್ಲಿ ಅಜೇಯ ತಂಡವಾಗಿದ್ದ ಸನ್‌ರೈಸರ್ ಹೈದರಾಬಾದ್‌ ವಿರುದ್ಧ ಅಮೋಘ ಶತಕ ಸಿಡಿಸಿ ತಂಡವನ್ನು ಗೆಲ್ಲಿಸಿದ ಬಳಿಕ ಕ್ರಿಸ್‌ ಗೇಲ್‌ ಮಾಧ್ಯಮದವರಲ್ಲಿ ಇಂಥದೊಂದು ಹೇಳಿಕೆ ನೀಡಿದ್ದಾರೆ. 

“ಗೇಲ್‌ ಈಗ ಹಳಬನಾಗಿದ್ದಾನೆ, ಅವನಿಗೆ ಆಡಲಾಗುತ್ತಿಲ್ಲ, ಹೀಗಾಗಿ ಐಪಿಎಲ್‌ ಹರಾಜಿನ ವೇಳೆ ಯಾರಿಗೂ ಬೇಕಾಗಲಿಲ್ಲ…. ಎಂದು ನನ್ನ ಬಗ್ಗೆ ನಕಾರಾತ್ಮಕ ಭಾವನೆ ಹೊಂದಿದವರಿಗೆಲ್ಲ ಈ ಶತಕ ಉತ್ತರ ನೀಡಿದೆ. ಇಷ್ಟಕ್ಕೂ ನಾನೇನು ಎಂಬುದನ್ನು ಖಂಡಿತವಾಗಿಯೂ ಸಾಧಿಸಿ ತೋರಿಸಬೇಕಾದ ಅಗತ್ಯವಿಲ್ಲ’ ಎಂದು ಗೇಲ್‌ ತುಸು ಖಾರವಾಗಿಯೇ, ಕ್ರಿಕೆಟ್‌ ಅಭಿಮಾನಿಗಳಿಗೆ ನಾಟುವಂತೆಯೇ ಪ್ರತಿಕ್ರಿಯಿಸಿದರು.

ಆರ್‌ಸಿಬಿಗೆ ಬೇಡವಾದ ಕ್ರಿಸ್‌ ಗೇಲ್‌ ಈ ಬಾರಿಯ ಐಪಿಎಲ್‌ ಮೆಗಾ ಹರಾಜಿನ 2 ಸುತ್ತುಗಳಲ್ಲೂ ಮಾರಾಟವಾಗಿರಲಿಲ್ಲ. ಆದರೆ ಕೊನೆಯಲ್ಲಿ ವೀರೇಂದ್ರ ಸೆಹವಾಗ್‌ ಈ ಜಮೈಕನ್‌ ಬ್ಯಾಟ್ಸ್‌ ಮನ್‌ನತ್ತ ಒಲವು ತೋರಿ ಪಂಜಾಬ್‌ ತಂಡಕ್ಕೆ ಸೇರಿಸಿಕೊಂಡರು. ಮೊದಲೆರಡು ಪಂದ್ಯಗಳಲ್ಲಿ ಗೇಲ್‌ ಆಡುವ ಬಳಗದಲ್ಲಿ ಕಾಣಿಸಿರಲಿಲ್ಲ. ಆದರೆ ಅನಂತರದ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್‌ ಮಿಂಚು ಹರಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. 

“ಈ ಸಂದರ್ಭದಲ್ಲಿ ನಾನು ವೀರೇಂದ್ರ ಸೆಹವಾಗ್‌ ಅವರಿಗೆ ಕೃತಜ್ಞತೆ ಅರ್ಪಿಸಲು ಬಯಸುತ್ತೇನೆ. ಅವರು ಪಂಜಾಬ್‌ ತಂಡಕ್ಕೆ ನನ್ನನ್ನು ಸೇರಿಸಿ ಐಪಿಎಲ್‌ ಪಂದ್ಯಾವಳಿಯನ್ನು ಬಚಾವ್‌ ಮಾಡಿದರು’ ಎಂದು ಹೈದರಾಬಾದ್‌ ವಿರುದ್ಧ ಅಜೇಯ 104 ರನ್‌ ಸಿಡಿಸಿ, ಐಪಿಎಲ್‌ ಶತಕವನ್ನು 6ಕ್ಕೆ ಏರಿಸಿದ ಗೇಲ್‌ ಹೇಳಿದರು.

“ಶುದ್ಧ ಮನೋರಂಜನೆ, ಸಂಪೂರ್ಣ ಸ್ವಾತಂತ್ರ್ಯ-ಇದು ಸೆಹವಾಗ್‌ ಥಿಯರಿ. ಅದರಂತೆ ಮೊದಲ ಪಂದ್ಯದಲ್ಲೇ ರಾಹುಲ್‌ 14 ಎಸೆತಗಳಿಂದ ಅರ್ಧ ಶತಕ ಬಾರಿಸಿದರು. ಎರಡೂ ಪಂದ್ಯಗಳಲ್ಲಿ ನನ್ನ ಆಟವೂ ಉತ್ತಮ ಮಟ್ಟದಲ್ಲಿತ್ತು. ನಾವು ಇದೇ ಲಯದಲ್ಲಿ ಸಾಗಬೇಕಿದೆ…’ ಎಂದು ಗೇಲ್‌ ಅಭಿಪ್ರಾಯಪಟ್ಟರು.

ಭುವನೇಶ್ವರ್‌ ಎಸೆತಗಳಿಗೆ ಮರ್ಯಾದೆ
ಆದರೆ ಮೊದಲರ್ಧದಲ್ಲಿ ಗೇಲ್‌ ಆಟ ಅಬ್ಬರದಿಂದ ಕೂಡಿರಲಿಲ್ಲ. ಇದಕ್ಕೆ ಭುವನೇಶ್ವರ್‌ ಕುಮಾರ್‌ ಕಾರಣವಿರ ಬಹುದು. ಪಂದ್ಯಕ್ಕೂ ಮೊದಲು ನೀಡಿದ ಸಂದರ್ಶನವೊಂದ ರಲ್ಲಿ, ತಾನು ಭುವನೇಶ್ವರ್‌ಗೆ ಹೆಚ್ಚಿನ ಗೌರವ ಕೊಡುತ್ತೇನೆ ಎಂಬುದಾಗಿ ಗೇಲ್‌ ಹೇಳಿದ್ದರು. ಭುವಿ ಹೈದರಾಬಾದ್‌ ತಂಡದ ಕೀ ಬೌಲರ್‌ ಆಗಿದ್ದು, ಏಕದಿನದ 10 ಇನ್ನಿಂಗ್ಸ್‌ಗಳಲ್ಲಿ ಅವರು 4 ಸಲ ಗೇಲ್‌ ವಿಕೆಟ್‌ ಹಾರಿಸಿದ್ದಾರೆ. ಗುರುವಾರದ ಪಂದ್ಯದಲ್ಲಿ ಭುವಿಯ 10 ಎಸೆತಗಳಲ್ಲಿ ಗೇಲ್‌ ಗಳಿಸಿದ್ದು 15 ರನ್‌ ಮಾತ್ರ. 

ಹೈದರಾಬಾದ್‌ಗೆ ಮೊದಲ ಸೋಲು
ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌ 3 ವಿಕೆಟಿಗೆ 193 ರನ್‌ ಪೇರಿಸಿದರೆ, ಹೈದರಾಬಾದ್‌ 4 ವಿಕೆಟಿಗೆ 178ರ ತನಕ ಬಂದು 15 ರನ್ನುಗಳಿಂದ ಶರಣಾಯಿತು. ಆರಂಭಕಾರ ಶಿಖರ್‌ ಧವನ್‌ ಕೇವಲ ಒಂದೇ ಎಸೆತ ಎದುರಿಸಿ ಗಾಯಾಳಾಗಿ ವಾಪಸಾದದ್ದು ಹೈದಾರಾಬಾದ್‌ಗೆ ಭಾರೀ ಹಿನ್ನಡೆಯಾಗಿ ಪರಿಣಮಿಸಿತು. ಸಾಹಾ (6) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಆದರೆ ನಾಯಕ ಕೇನ್‌ ವಿಲಿಯಮ್ಸನ್‌ (54) ಮತ್ತು ಮನೀಷ್‌ ಪಾಂಡೆ (57) ಉತ್ತಮ ಹೋರಾಟವೊಂದನ್ನು ಪ್ರದರ್ಶಿಸಿದರೂ ತಂಡವನ್ನು ದಡ ತಲುಪಿಸಲು ವಿಫ‌ಲರಾದರು. ಈ ಪಂದ್ಯದ ಬಳಿಕ ಕೆಕೆಆರ್‌, ಹೈದರಾಬಾದ್‌ ಮತ್ತು ಪಂಜಾಬ್‌ ತಲಾ 6 ಅಂಕಗಳೊಂದಿಗೆ ಮೊದಲ 3 ಸ್ಥಾನ ಅಲಂಕರಿಸಿವೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.