ಗೌತಮ್‌ ಆಟ ಜೀವಿತಾವಧಿಯ ಅನುಭವ: ಸ್ಯಾಮ್ಸನ್‌


Team Udayavani, Apr 24, 2018, 6:15 AM IST

Sanju-Samson,.jpg

ಜೈಪುರ: ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ರವಿವಾರ ನಡೆದ ಪಂದ್ಯದಲ್ಲಿ ಕರ್ನಾಟಕದ ಕೃಷ್ಣಪ್ಪ ಗೌತಮ್‌ ಅವರ ಪ್ರಚಂಡ ಆಟವನ್ನು ಜೀವಿತಾವಧಿಯ ಅನುಭವ ಎಂದು ಸಂಜು ಸ್ಯಾಮ್ಸನ್‌ ಬಣ್ಣಿಸಿದ್ದಾರೆ. ಆದರೆ ತಂಡ ಪ್ರಯತ್ನದಿಂದಲೇ ರಾಜಸ್ಥಾನ್‌ ರಾಯಲ್ಸ್‌ ರೋಚಕ ಗೆಲುವು ಕಂಡಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.

ಬಹಳಷ್ಟು ಒತ್ತಡದ ನಡುವೆಯೂ ಗೌತಮ್‌ ಕೇವಲ 11 ಎಸೆತಗಳಿಂದ 33 ರನ್‌ ಸಿಡಿಸಿದ್ದರಿಂದ ರಾಜಸ್ಥಾನ್‌ ಅಂತಿಮ ಓವರಿನಲ್ಲಿ ಜಯಭೇರಿ ಬಾರಿಸಿತ್ತು. ಎರಡು ಸಿಕ್ಸರ್‌ ಮತ್ತು ನಾಲ್ಕು ಬೌಂಡರಿ ಬಾರಿಸಿದ ಗೌತಮ್‌ ತಂಡಕ್ಕೆ 3 ವಿಕೆಟ್‌ಗಳ ಜಯ ತಂದುಕೊಟ್ಟರು. ಈ ಮೊದಲು ಸ್ಯಾಮ್ಸನ್‌ (52) ಮತ್ತು ಬೆನ್‌ ಸ್ಟೋಕ್ಸ್‌ (27 ಎಸೆತಗಳಲ್ಲಿ 40) ಮೂರನೇ ವಿಕೆಟಿಗೆ 72 ರನ್ನುಗಳ ಜತೆಯಾಟ ನಡೆಸಿ ತಂಡದ ಗೆಲುವಿಗೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು.

ಗೌತಮ್‌ ಅವರ ಆಟ ಆತ್ಯದ್ಭುತವಾಗಿತ್ತು. ಇದೊಂದು ಅವರಿಗೆ ಮತ್ತು ನಮ್ಮ ಪಾಲಿಗೆ ಜೀವಿತಾವಧಿಯ ಅನುಭವ ಎಂದು ಪಂದ್ಯದ ಬಳಿಕ ಸ್ಯಾಮ್ಸನ್‌ ತಿಳಿಸಿದರು.

22 ರನ್ನಿಗೆ 3 ವಿಕೆಟ್‌ ಕಿತ್ತು ಮುಂಬೈಯ ರನ್‌ವೇಗಕ್ಕೆ ಕಡಿವಾಣ ಹಾಕಿದ್ದ ರಾಜಸ್ಥಾನದ ವೆಸ್ಟ್‌ಇಂಡೀಸ್‌ನ ಆಟಗಾರ ಜೋಫ್ರಾ ಆರ್ಚರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆರ್ಚರ್‌ ಅವರಿಗೆ ಪಂದ್ಯಶ್ರೇಷ್ಠ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಲಾರೆ ಎಂದು ಸ್ಯಾಮ್ಸನ್‌ ಹೇಳಿದರು.

ಗೌತಮ್‌ ಕೂಡ ಪಂದ್ಯಶ್ರೇಷ್ಠನೇ ಆದರೆ ಪ್ರತಿಯೊಬ್ಬರ ಕೊಡುಗೆಯೂ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರ್ಚರ್‌ ಮೂರು ವಿಕೆಟ್‌ ಕಿತ್ತರಲ್ಲದೇ ಕೆಲವು ಬೌಂಡರಿ ಬಾರಿಸಿದ್ದಾರೆ. ಹಾಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಆಯ್ಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದರು ಸ್ಯಾಮ್ಸನ್‌.

ನನ್ನಿಂದ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಾಗದಿರುವುದಕ್ಕೆ ಸ್ಯಾಮ್ಸನ್‌ ಬೇಸರ ವ್ಯಕ್ತಪಡಿಸಿದರು. 17ನೇ ಓವರಿನಲ್ಲಿ ಸ್ಯಾಮ್ಸನ್‌ ಮತ್ತು ಬಟ್ಲರ್‌ ಸತತ ಎರಡು ಎಸೆತಗಳಲ್ಲಿ ಬುಮ್ರಾ ದಾಳಿಗೆ ಔಟಾಗಿದ್ದರು. ಪಂದ್ಯ ಇನ್ನಿಂಗ್ಸ್‌ನ ಕೊನೆ ಹಂತದವರೆಗೆ ಸಾಗಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪಂದ್ಯ ವಿಳಂಬವಾಗಿಲ್ಲ. ಚೇಸಿಂಗ್‌ ವೇಳೆ ಬೌಲಿಂಗ್‌ ತಂಡ ಒತ್ತಡದಲ್ಲಿರುತ್ತದೆ. ಹಾಗಾಗಿ ಅಂತಿಮ ಓವರ್‌ತನಕ ಬ್ಯಾಟಿಂಗ್‌ ಮಾಡಲು ಬಯಸಿದ್ದೆ ಆದರೆ ದುರದೃಷ್ಟವಶಾತ್‌ ಔಟಾದೆ ಎಂದು ಸ್ಯಾಮ್ಸನ್‌ ವಿವರಿಸಿದರು.

15 ರನ್‌ ಕಡಿಮೆ: ಕಿಶನ್‌
15 ರನ್‌ ಕಡಿಮೆಯಾಯಿತು ಆದರೆ ಟ್ವೆಂಟಿ20 ಪಂದ್ಯದಲ್ಲಿ ಇದು ಸಾಮಾನ್ಯ. ರಾಜಸ್ಥಾನ ಉತ್ತಮವಾಗಿ ಬೌಲಿಂಗ್‌ ನಡೆಸಿತ್ತು ಮತ್ತು ಪಂದ್ಯ ಸಾಗುತ್ತಿದ್ದಂತೆ ಈ ಪಿಚ್‌ನಲ್ಲಿ ಬ್ಯಾಟಿಂಗ್‌ ಮಾಡಲು ಕಷ್ಟವಾಗುತ್ತಿತ್ತು ಎಂದು ಇಶಾನ್‌ ಕಿಶನ್‌ ಹೇಳಿದರು. ಜೋಫ್ರಾ ಆರ್ಚರ್‌ ದಾಳಿಗೆ ಪ್ರತಿಕ್ರಿಯೆ ನೀಡಿದ ಕಿಶನ್‌ ಅವರು ಚೆನ್ನಾಗಿ ಬೌಲಿಂಗ್‌ ಮಾಡಿದ್ದಾರೆ. ಆದರೆ ಅವರ ದಾಳಿಯ ವೇಳೆ ನಾವು ಇನ್ನಷ್ಟು ರನ್‌ ಗಳಿಸಬಹುದಿತ್ತು ಎಂದರು. ಇದುವೇ ಆಟದ ಆಂದ. ಕೆಲವೊಮ್ಮೆ ನಮಗೆ ಭರ್ಜರಿ ಆಟವಾಡಲು ಸಾಧ್ಯವಾಗುತ್ತದೆ ಮತ್ತೆ ಕೆಲವೊಮ್ಮ ಸಾಧ್ಯವಾಗುವುದೇ ಇಲ್ಲ ಎಂದ ಕಿಶನ್‌ ಕೊನೆ ಹಂತದಲ್ಲಿ ಸಿಡಿದ ಗೌತಮ್‌ ಅವರ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.